ರಾಜ್ಯ ನ್ಯೂಸ್

ಮೆಜೆಸ್ಟಿಕ್ ನಮ್ಮದಲ್ಲ, ನಿಮ್ಮದು; ಬೀದಿ ವ್ಯಾಪಾರ ನಿಮ್ಮ ಮಕ್ಕಳಿಗೂ ಬೇಡ, ಮೈಸೂರಿನಲ್ಲಿ ಓದಿಸುವುದಾದರೆ ನನ್ನೊಂದಿಗೆ ಕಳುಹಿಸಿ ಶಿಕ್ಷಣ ಕೊಡಿಸುತ್ತೇನೆ: ಐಪಿಎಸ್ ಅಧಿಕಾರಿ

ಬೆಂಗಳೂರು; ಕರ್ನಾಟಕದ ದಿಟ್ಟ ಹಾಗೂ ನಿಷ್ಟಾವಂತ ಐಪಿಎಸ್ ಅಧಿಕಾರಿ ಎಂದೇ ಖ್ಯಾತಿ ಪಡೆಯುತ್ತಿರುವ ರವಿ ಚನ್ನಣ್ಣನವರ್ ಅವರು ಈಗಾಗಲೇ ಮೈಸೂರು ಹಾಗೂ ಶಿವಮೊಗ್ಗದ ಲಕ್ಷಾಂತರ ಜನರ ಅಭಿಮಾನವನ್ನು ಗಳಿಸಿದ್ದು, ಇದೀಗ ತಮ್ಮ ಶಕ್ತಿಯುತ ಮಾತನಿಂದಾಗಿ ಬೆಂಗಳೂರಿಗರ ಮನವನ್ನೂ ಗೆದ್ದಿದ್ದಾರೆ.
ಬೆಂಗಳೂರಿನ ಪಶ್ಚಿಮ ವಿಭಾಗದ ಡಿಸಿಪಿಯಾಗಿ ಕಾರ್ಯನಿರ್ವಹಿಸುತ್ತಿರುವ ರವಿಚೆನ್ನಣ್ಣನವರ್ ಅವರು, ಬೀದಿ ವ್ಯಾಪಾರಿಗಳನ್ನು ತಮ್ಮ ಕಚೇರಿಗೆ ಕರೆಸಿಕೊಂಡು ನಡೆಸಿದ ಸಭೆಯ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ರವಿ ಅವರ ಮಾತುಗಳಿಗೆ ಬೆಂಗಳೂರು ಜನತೆ ಮನಸೋತಿದ್ದಾರೆ.
ಬೀದಿ ಬದಿಯಲ್ಲಿರುವ ವ್ಯಾಪಾರಿಗಳನ್ನು ಕಡೆಗಣನೆಯಿಂದ ನೋಡುತ್ತಿರುವ ಈ ದಿನಗಳಲ್ಲಿ, ರವಿ ಚನ್ನಣ್ಣನವರ್ ಅವರು ಬೀದಿ ವ್ಯಾಪಾರಿಗಳೊಂದಿಗೆ ಪ್ರೀತಿಯಿಂದ ಮಾತನಾಡಿರುವುದಕ್ಕೆ ಹಲವು ಮೆಚ್ಚುಗೆಗಳು ವ್ಯಕ್ತವಾಗತೊಡಗಿವೆ.
ಮೆಜೆಸ್ಟಿಕ್ ಎಂದಾಕ್ಷಣ ಜನರದಲ್ಲಿ ಭಯದ ವಾತಾವರಣ ಇದೆ. ಮೆಜೆಸ್ಟಿಕ್ ನಲ್ಲಿ ಮೋಸವಾಗುತ್ತದೆ, ಪಿಕ್ ಪಾಕೆಟ್ ಆಗುತ್ತದೆ ಎಂದು ಹೇಳಲಾಗುತ್ತಿದೆ. ಇಂತಹ ಘಟನೆಗಳ ಬಗ್ಗೆ ಶೀಘ್ರಗತಿಯಲ್ಲಿ ಮಾಹಿತಿ ನೀಗುವುದು ಇಲ್ಲಿನ ವ್ಯಾಪಾರಿಗಳಿಗೆ. ಕೂಡಲೇ ನಮಗೆ ಮಾಹಿತಿ ಕೊಡಿ, ನಾವು ಕ್ರಮ ಕೈಗೊಳ್ಳುತ್ತೇವೆ. ಮೆಜೆಸ್ಟಿಕ್’ನ್ನು ಉತ್ತಮ ವಾತಾವರಣದ ಪ್ರದೇಶವನ್ನಾಗಿ ನಿರ್ಮಿಸೋಣ, ಇದಕ್ಕೆ ಸಹಾಯ ಮಾಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಬಳಿಕ ಬೀದಿ ವ್ಯಾಪಾರಿಗಳೊಂದಿಗೆ ಪ್ರೀತಿಯಿಂದ ಮಾತನಾಡಿರುವ ಅವರು, ಮಕ್ಕಳ ಶಿಕ್ಷಣದ ಬಗ್ಗೆ ಅರಿವು ಮೂಡಿಸುವ ಪ್ರಯತ್ನ ಮಾಡಿದ್ದಾರೆ.
ಬೀದಿ ವ್ಯಾಪಾರಗಳೇನಿದ್ದರೂ ನಿಮಗೆ ಕೊನೆಯದಾಗಲಿ.ನಿಮ್ಮ ಮಕ್ಕಳಿಗೂ ಅದು ಮುಂದುವರೆಯಬಾರದು. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು. ಬೆಂಗಳೂರಿನಲ್ಲಿ ಶಿಕ್ಷಣ ಕೊಡಿಸುವುದು ಕಷ್ಟ. ಮೈಸೂರಿನಲ್ಲಿ ಓದಿಸುವುದಾದರೆ, ಕರೆದುಕೊಂಡು ಬನ್ನಿ, ನಾನು ಶಿಕ್ಷಣ ಕೊಡಿಸುತ್ತೇನೆ. ಹಾಸ್ಟೆಲ್ ನಲ್ಲಿ ಸೇರಿಸಿ ಓದಿಸುವ ಕೆಲಸವನ್ನು ಮಾಡಿಸುತ್ತೇನೆ. ದಾಳಿಗಳಿಂದಲೇ ನಡೆಯುತ್ತಿರುವ ಶಾಲೆಯೊಂದರಲ್ಲಿ ನಿಮ್ಮ ಮಕ್ಕಳನ್ನು ಸೇರಿಸುತ್ತೇನೆ. ಹೈಸ್ಕೂಲ್ ನಿಂದ ಹಿಡಿದು, ಪಿಯುಸಿ,ಡಿಗ್ರಿಯವರೆಗೂ ಶಿಕ್ಷಣ ಕೊಡಿಸುತ್ತೇನೆಂದು ಬೀದಿ ವ್ಯಾಪಾರಿಗಳ ಮನಗೆದ್ದಿದ್ದಾರೆ.

Vishwa News 24

Recent Posts

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

16 minutes ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

53 minutes ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

60 minutes ago

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು – vishwanews24

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…

1 hour ago

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ – vishwanews24

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…

1 hour ago

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ – vishwanews24

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ ಉಡುಪಿ : ಸುದೀಪ್‌ ಶೆಟ್ಟಿ ಆತ್ಮಹತ್ಯೆ…

1 hour ago