ರಾಜ್ಯ ನ್ಯೂಸ್

ಮೆಜೆಸ್ಟಿಕ್ ನಮ್ಮದಲ್ಲ, ನಿಮ್ಮದು; ಬೀದಿ ವ್ಯಾಪಾರ ನಿಮ್ಮ ಮಕ್ಕಳಿಗೂ ಬೇಡ, ಮೈಸೂರಿನಲ್ಲಿ ಓದಿಸುವುದಾದರೆ ನನ್ನೊಂದಿಗೆ ಕಳುಹಿಸಿ ಶಿಕ್ಷಣ ಕೊಡಿಸುತ್ತೇನೆ: ಐಪಿಎಸ್ ಅಧಿಕಾರಿ

ಬೆಂಗಳೂರು; ಕರ್ನಾಟಕದ ದಿಟ್ಟ ಹಾಗೂ ನಿಷ್ಟಾವಂತ ಐಪಿಎಸ್ ಅಧಿಕಾರಿ ಎಂದೇ ಖ್ಯಾತಿ ಪಡೆಯುತ್ತಿರುವ ರವಿ ಚನ್ನಣ್ಣನವರ್ ಅವರು ಈಗಾಗಲೇ ಮೈಸೂರು ಹಾಗೂ ಶಿವಮೊಗ್ಗದ ಲಕ್ಷಾಂತರ ಜನರ ಅಭಿಮಾನವನ್ನು ಗಳಿಸಿದ್ದು, ಇದೀಗ ತಮ್ಮ ಶಕ್ತಿಯುತ ಮಾತನಿಂದಾಗಿ ಬೆಂಗಳೂರಿಗರ ಮನವನ್ನೂ ಗೆದ್ದಿದ್ದಾರೆ.
ಬೆಂಗಳೂರಿನ ಪಶ್ಚಿಮ ವಿಭಾಗದ ಡಿಸಿಪಿಯಾಗಿ ಕಾರ್ಯನಿರ್ವಹಿಸುತ್ತಿರುವ ರವಿಚೆನ್ನಣ್ಣನವರ್ ಅವರು, ಬೀದಿ ವ್ಯಾಪಾರಿಗಳನ್ನು ತಮ್ಮ ಕಚೇರಿಗೆ ಕರೆಸಿಕೊಂಡು ನಡೆಸಿದ ಸಭೆಯ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ರವಿ ಅವರ ಮಾತುಗಳಿಗೆ ಬೆಂಗಳೂರು ಜನತೆ ಮನಸೋತಿದ್ದಾರೆ.
ಬೀದಿ ಬದಿಯಲ್ಲಿರುವ ವ್ಯಾಪಾರಿಗಳನ್ನು ಕಡೆಗಣನೆಯಿಂದ ನೋಡುತ್ತಿರುವ ಈ ದಿನಗಳಲ್ಲಿ, ರವಿ ಚನ್ನಣ್ಣನವರ್ ಅವರು ಬೀದಿ ವ್ಯಾಪಾರಿಗಳೊಂದಿಗೆ ಪ್ರೀತಿಯಿಂದ ಮಾತನಾಡಿರುವುದಕ್ಕೆ ಹಲವು ಮೆಚ್ಚುಗೆಗಳು ವ್ಯಕ್ತವಾಗತೊಡಗಿವೆ.
ಮೆಜೆಸ್ಟಿಕ್ ಎಂದಾಕ್ಷಣ ಜನರದಲ್ಲಿ ಭಯದ ವಾತಾವರಣ ಇದೆ. ಮೆಜೆಸ್ಟಿಕ್ ನಲ್ಲಿ ಮೋಸವಾಗುತ್ತದೆ, ಪಿಕ್ ಪಾಕೆಟ್ ಆಗುತ್ತದೆ ಎಂದು ಹೇಳಲಾಗುತ್ತಿದೆ. ಇಂತಹ ಘಟನೆಗಳ ಬಗ್ಗೆ ಶೀಘ್ರಗತಿಯಲ್ಲಿ ಮಾಹಿತಿ ನೀಗುವುದು ಇಲ್ಲಿನ ವ್ಯಾಪಾರಿಗಳಿಗೆ. ಕೂಡಲೇ ನಮಗೆ ಮಾಹಿತಿ ಕೊಡಿ, ನಾವು ಕ್ರಮ ಕೈಗೊಳ್ಳುತ್ತೇವೆ. ಮೆಜೆಸ್ಟಿಕ್’ನ್ನು ಉತ್ತಮ ವಾತಾವರಣದ ಪ್ರದೇಶವನ್ನಾಗಿ ನಿರ್ಮಿಸೋಣ, ಇದಕ್ಕೆ ಸಹಾಯ ಮಾಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಬಳಿಕ ಬೀದಿ ವ್ಯಾಪಾರಿಗಳೊಂದಿಗೆ ಪ್ರೀತಿಯಿಂದ ಮಾತನಾಡಿರುವ ಅವರು, ಮಕ್ಕಳ ಶಿಕ್ಷಣದ ಬಗ್ಗೆ ಅರಿವು ಮೂಡಿಸುವ ಪ್ರಯತ್ನ ಮಾಡಿದ್ದಾರೆ.
ಬೀದಿ ವ್ಯಾಪಾರಗಳೇನಿದ್ದರೂ ನಿಮಗೆ ಕೊನೆಯದಾಗಲಿ.ನಿಮ್ಮ ಮಕ್ಕಳಿಗೂ ಅದು ಮುಂದುವರೆಯಬಾರದು. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು. ಬೆಂಗಳೂರಿನಲ್ಲಿ ಶಿಕ್ಷಣ ಕೊಡಿಸುವುದು ಕಷ್ಟ. ಮೈಸೂರಿನಲ್ಲಿ ಓದಿಸುವುದಾದರೆ, ಕರೆದುಕೊಂಡು ಬನ್ನಿ, ನಾನು ಶಿಕ್ಷಣ ಕೊಡಿಸುತ್ತೇನೆ. ಹಾಸ್ಟೆಲ್ ನಲ್ಲಿ ಸೇರಿಸಿ ಓದಿಸುವ ಕೆಲಸವನ್ನು ಮಾಡಿಸುತ್ತೇನೆ. ದಾಳಿಗಳಿಂದಲೇ ನಡೆಯುತ್ತಿರುವ ಶಾಲೆಯೊಂದರಲ್ಲಿ ನಿಮ್ಮ ಮಕ್ಕಳನ್ನು ಸೇರಿಸುತ್ತೇನೆ. ಹೈಸ್ಕೂಲ್ ನಿಂದ ಹಿಡಿದು, ಪಿಯುಸಿ,ಡಿಗ್ರಿಯವರೆಗೂ ಶಿಕ್ಷಣ ಕೊಡಿಸುತ್ತೇನೆಂದು ಬೀದಿ ವ್ಯಾಪಾರಿಗಳ ಮನಗೆದ್ದಿದ್ದಾರೆ.

Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

2 hours ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

5 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

5 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

5 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

5 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

6 hours ago