Featured

ಮೆಟ್ರೋ ಪ್ರಯಾಣ ದರ 5% ಏರಿಕೆ  : ಫೆ.9 ರಿಂದ ಜಾರಿಗೆ – vishwanews24

ಮೆಟ್ರೋ ಪ್ರಯಾಣ ದರ 5% ಏರಿಕೆ  : ಫೆ.9 ರಿಂದ ಜಾರಿಗೆ

ಬೆಂಗಳೂರು: ಮತ್ತೆ ನಮ್ಮ ಮೆಟ್ರೋ  ಪ್ರಯಾಣ ದರ ದುಬಾರಿಯಾಗಲಿದೆ. ಒಂದು ವರ್ಷದ ಹಿಂದಷ್ಟೇ ಪ್ರಯಾಣ ದರವನ್ನು 71.5% ರಷ್ಟು ಹೆಚ್ಚಳ ಮಾಡಿದ್ದ ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್‌ ಲಿಮಿಟೆಡ್‌ ಈಗ 5% ಹೆಚ್ಚಳ ಮಾಡಲು ನಿರ್ಧರಿಸಿದೆ.

ಬಿಎಂಆರ್‌ಸಿಎಲ್‌ ಪ್ರತಿ ವರ್ಷ 5% ರಷ್ಟು ಪ್ರಯಾಣ ದರ ಹೆಚ್ಚಳ ಮಾಡಬಹುದು ಎಂದು ದರ ನಿಗದಿ ಸಮಿತಿ (FFC) 2025ರಲ್ಲಿ ಶಿಫಾರಸು ಮಾಡಿತ್ತು. ಈ ಬಗ್ಗೆ ಎರಡು ದಿನಗಳ ಹಿಂದೆ ನಡೆದ ಬಿಎಂಆರ್‌ಸಿಎಲ್‌ ಮಂಡಳಿ ಸಭೆಯಲ್ಲಿ ಚರ್ಚೆ ನಡೆದು 5% ರಷ್ಟು ಏರಿಸಲು ಅನುಮೋದನೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿತ್ತು.

ಇದನ್ನೂ ಓದಿ👇

ಸೋಮವಾರ(ಫೆ.2) ಕರ್ನಾಟಕ ಸರ್ಕಾರ ಈ ಪ್ರಸ್ತಾಪಕ್ಕೆ ಅನುಮೋದನೆ ನೀಡಿದ್ದು ಹೊಸ ದರ ಮುಂದಿನ ಸೋಮವಾರ(ಫೆ.9) ಜಾರಿಗೆ ಬರಲಿದೆ. ಕನಿಷ್ಠ 1 ರೂ. ಹಾಗೂ ಗರಿಷ್ಠ 5 ರೂ. ಹೆಚ್ಚಳವಾಗಲಿದೆ. ಕನಿಷ್ಠ 10 ಇರುವ ದರ 11ಕ್ಕೆ, ಗರಿಷ್ಠ 90 ಇರುವ ದರ 95ಕ್ಕೆ ಏರಿಕೆಯಾಗಲಿದೆ.

ದರ ನಿಗದಿ ಸಮಿತಿ ಕಳೆದ ವರ್ಷ 51.55% ರಷ್ಟು ಹೆಚ್ಚಳ ಮಾಡುವಂತೆ ಶಿಫಾರಸು ಮಾಡಿತ್ತು. ಆದರೆ ಬಿಂಆರ್‌ಸಿಎಲ್ 101.5% ರಷ್ಟು ಹೆಚ್ಚಳ ಮಾಡಿ 2025ರ ಫೆ.9 ರಂದು ಜಾರಿ ಮಾಡಿತ್ತು. ಸಾರ್ವಜನಿಕರಿಂದ ಭಾರೀ ವಿರೋಧ ವ್ಯಕ್ತವಾಗಿತ್ತು. ಅಷ್ಟೇ ಅಲ್ಲದೇ ಪ್ರಯಾಣಿಕರ ಸಂಖ್ಯೆ ದಿಢೀರ್‌ ಕುಸಿತವಾದ ಬೆನ್ನಲ್ಲೇ ನಾಲ್ಕು ದಿನಗಳ ಬಳಿಕ ದರವನ್ನು 30% ಇಳಿಸಿತ್ತು.

ಇದನ್ನೂ ಓದಿ👇

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

3 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

3 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

4 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

4 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago