ಉಡುಪಿ

ಮೆರವಣಿಗೆ ಬರುತ್ತಿದ್ದಂತೆ ಮುಚ್ಚಿದ ಶಿರೂರು ಮಠದ ಬಾಗಿಲು- ಮಠದ ಜಗಲಿಯಲ್ಲೇ ಪುಷ್ಪನಮನ ಸಲ್ಲಿಕೆ

ಉಡುಪಿ: ಶಿರೂರು ಲಕ್ಷ್ಮೀವರತೀರ್ಥ ಸ್ವಾಮೀಜಿ ಅನುಮಾನಾಸ್ಪದವಾಗಿ ಸಾವನ್ನಪ್ಪಿ ಒಂದು ತಿಂಗಳು ಕಳೆದಿದೆ. ಸ್ವಾಮೀಜಿಯವರ ಆಪ್ತ ಅಭಿಮಾನಿಗಳು ಉಡುಪಿಯಲ್ಲಿ ಶ್ರದ್ಧಾಂಜಲಿ ಸಭೆ ನಡೆಸಿದರು. ರಾಜ್ಯದಲ್ಲಿ ಬಾಲ ಸನ್ಯಾಸ ಸ್ವೀಕಾರ ನಡೆದರೆ ಕಾನೂನು ಹೋರಾಟ ನಡೆಸುವ ಎಚ್ಚರಿಕೆ ಸಭೆಯಲ್ಲಿ ಕೇಳಿ ಬಂತು. ಈ ನಡುವೆ ಶಿರೂರು ಮಠದಲ್ಲಿ ಸ್ವಾಮೀಜಿಗಳ ಪುಷ್ಪನಮನಕ್ಕೆ ಅವಕಾಶವೇ ಸಿಗಲಿಲ್ಲ.

ಶಿರೂರು ಮಠಾಧೀಶ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಸಂಶಯಾಸ್ಪದವಾಗಿ ಸಾವನ್ನಪ್ಪಿ ತಿಂಗಳು ಕಳೆದಿದೆ. ಶ್ರೀಗಳ ಸಾವಿಗೆ ಕಾರಣ ಮಾತ್ರ ಇನ್ನೂ ನಿಗೂಢವಾಗಿಯೇ ಉಳಿದಿದೆ. ಮರಣೋತ್ತರ ಪರೀಕ್ಷೆಯ ಫೈನಲ್ ಎಫ್ ಎಸ್ ಎಲ್ ರಿಪೋರ್ಟ್ ಇನ್ನೂ ಬಂದಿಲ್ಲ. ಈ ನಡುವೆ ಶಿರೂರು ಶ್ರೀ ಅಭಿಮಾನಿ ಸಮಿತಿ ಸ್ವಾಮೀಜಿಗಳ ಅತೀ ಆಪ್ತರನ್ನು ಸೇರಿಸಿ ಶ್ರದ್ಧಾಂಜಲಿ ಸಭೆ ನಡೆಸಿತು.

ಶಿರೂರು ಸ್ವಾಮೀಜಿ ಭಾವಚಿತ್ರವನ್ನು ಅಷ್ಟಮಠಗಳಿರುವ ರಥಬೀದಿಯಲ್ಲಿ ಮೆರವಣಿಗೆ ಮಾಡಲಾಯ್ತು. ಶಿರೂರು ಮಠದ ಒಳಗೆ ಸ್ವಾಮೀಜಿಯವ ಭಾವಚಿತ್ರ ಕೊಂಡೊಯ್ದು ಪುಷ್ಪ ನಮನ ಸಲ್ಲಿಸಲು ಅಭಿಮಾನಿಗಳು ಇಚ್ಛಿಸಿದ್ದರು. ಆದ್ರೆ ದ್ವಂದ್ವ ಸೋದೆ ಮಠ ಮತ್ತು ಶಿರೂರು ಮಠದ ಮೇಲ್ವಿಚಾರಣಾ ಸಮಿತಿ ಮಠದೊಳಗೆ ಭಕ್ತರು ಪ್ರವೇಶಿಸಿ ಪುಷ್ಪನಮನ ಸಲ್ಲಿಸಲು ಅವಕಾಶ ನೀಡಲಿಲ್ಲ. ಕೃಷ್ಣಮಠದ ಪಾರ್ಕಿಂಗ್ ಏರಿಯಾದ ಮಥುರಾ ಛತ್ರದಲ್ಲಿ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಯಾವುದೇ ಮಠಗಳಲ್ಲಿ ಬಾಲ ಸನ್ಯಾಸ ಸ್ವೀಕಾರ ಮಾಡಬಾರದೆಂಬ ಒತ್ತಾಯ ಕೇಳಿ ಬಂತು. ಬಾಲ ಸನ್ಯಾಸ ಸ್ವೀಕಾರ ಮಾಡಿದ್ರೆ ಬಾಲಕಾರ್ಮಿಕ ಪದ್ಧತಿ ಕಾನೂನಿನ ಅನ್ವಯ ಕೇಸು ದಾಖಲಿಸಿ, ಕಾನೂನು ಹೋರಾಟ ಮಾಡುವ ನಿರ್ಣಯವನ್ನು ತೆಗೆದುಕೊಳ್ಳಲಾಯ್ತು.

ಕೇಮಾರು ಸಾಂದೀಪನಿ ಮಠಾಧೀಶ ಈಶ ವಿಠಲದಾಸ ಸ್ವಾಮೀಜಿ ಮಾಧ್ಯಮಗಳ ಜೊತೆ ಮಾತನಾಡಿ, ಶಿರೂರು ಸ್ವಾಮೀಜಿ ಮೂರು ಪರ್ಯಾಯ ಮಾಡಿದವರು. 48 ವರ್ಷ ಕೃಷ್ಣನ ಪೂಜೆಯನ್ನು ಮಾಡಿದ್ದವರು. ಶಿರೂರು ಮಠದ ಬಾಗಿಲು ಭಕ್ತ ಜನರಿಗೆ ಸದಾ ತೆರೆದಿತ್ತು. ಇಂದು ಸ್ವಾಮೀಜಿಯ ಭಾವಚಿತ್ರ ಪ್ರವೇಶಕ್ಕೆ ಮಠದ ಬಾಗಿಲು ಮುಚ್ಚಿದೆ. ಮಠದ ಒಳಗೆ ಪುಷ್ಪನಮನಕ್ಕೆ ನಮಗೆ ಅವಕಾಶ ಸಿಗಲಿಲ್ಲ. ಇದು ಸಾಧು ಪರಂಪರೆಗೆ ಮಾಡಿದ ಅವಮಾನ. ಉದಾರತೆಯಿಂದ ಶಿರೂರು ಮಠದ ಬಾಗಿಲು ತೆಗೆಯಬೇಕಿತ್ತು ಅಂತ ನೊಂದು ಹೇಳಿದರು.

ಶಿರೂರು ಸ್ವಾಮೀಜಿಯವರ ಅನುಮಾನಾಸ್ಪದ ಸಾವು ಪ್ರಕರಣದ ಮರಣೋತ್ತರ ಪರೀಕ್ಷೆಯ ವರದಿ ತಿಂಗಳು ಕಳೆದ್ರೂ ಇನ್ನೂ ಪೊಲೀಸರ ಕೈಸೇರಿಲ್ಲ. ದೇಶದ ಗಮನ ಸೆಳೆದ ಪ್ರಕರಣ ಆದರೂ ವರದಿ ಇನ್ನೂ ಬಂದಿಲ್ಲ. ಮಣಿಪಾಲ ಕೆಎಂಸಿ ವೈದ್ಯರು ದೇಹದಲ್ಲಿ ವಿಷಕಾರಿ ಅಂಶ ಪತ್ತೆಯಾಗಿರುವುದನ್ನು ಒಪ್ಪಿಕೊಂಡಿದ್ದಾರೆ. ಎಫ್‍ಎಸ್‍ಎಲ್ ವರದಿ ತಡವಾದಷ್ಟು ವಿಷ ವಿಷತ್ವವನ್ನು ಕಳೆದುಕೊಳ್ಳುತ್ತದೆ. ಪ್ರಕರಣದ ದಿಕ್ಕೇ ಬದಲಾಗುವ ಸಾಧ್ಯತೆಯಿದೆ ಎಂದು ಕ್ರಿಮಿನಲ್ ವಕೀಲ, ಶಿರೂರು ಶ್ರೀ ಆಪ್ತ ರವಿಕಿರಣ್ ಮುರ್ಡೇಶ್ವರ ಸಂಶಯ ವ್ಯಕ್ತಪಡಿಸಿದರು.

ಈ ನಡುವೆ ಶಿರೂರು ಸ್ವಾಮೀಜಿ ವೃಂದಾವನಸ್ಥರಾದ ನಂತರ ಮಾಡಬೇಕಾದ ಸಂಸ್ಕಾರ, ಆರಾಧನೆ ಪ್ರಕ್ರಿಯೆಗಳು ನಡೆದಿಲ್ಲ. ಈ ಬಗ್ಗೆ ಕೂಡಾ ಮಠದ ಭಕ್ತರು ಅಸಾಮಾಧಾನ ವ್ಯಕ್ತಗೊಳಿಸಿದ್ದಾರೆ. ಆರಾಧನೆ ಮಾಡಲು ಪೊಲೀಸರು ಅವಕಾಶ ಮಾಡಿಕೊಡಬೇಕೆಂದು ಒತ್ತಾಯಿಸಿದ್ದಾರೆ.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

6 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

6 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

7 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

7 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

7 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

10 hours ago