ಮೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣ : ತಪ್ಪು ಮಾಡಿದವರ ಪರ ನಾನು ಯಾವತ್ತೂ ನಿಲ್ಲಲ್ಲ : ಯು.ಟಿ ಖಾದರ್ -Vishwanews24

ಮಂಗಳೂರು: ನನ್ನ ಕುಟುಂಬಸ್ಥರೇ ಆಗಲಿ, ಆಪ್ತರೇ ಆಗಲಿ ತಪ್ಪು ಮಾಡಿದವರ ಪರ ನಾನು ಯಾವತ್ತೂ ನಿಲ್ಲಲ್ಲ ಎಂದು ಮಾಜಿ ಸಚಿವ ಯು.ಟಿ ಖಾದರ್ ಹೇಳಿದ್ದಾರೆ.

ಕರೆಂಟ್ ಬಿಲ್ ಕೇಳಲು ಬಂದ ಮೆಸ್ಕಾಂ ಸಿಬ್ಬಂದಿ ಮೇಲೆ ಕಾಂಗ್ರೆಸ್ ಮುಖಂಡ ಅಮೀರ್ ಹಸನ್ ತುಂಬೆ ಹಲ್ಲೆ ನಡೆಸಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ನನ್ನ ಕ್ಷೇತ್ರದಲ್ಲಿ ಎಲ್ಲರೂ ನನಗೆ ಆಪ್ತರು. ಅವರು ಕಾಂಗ್ರೆಸ್ಸಿನವರಾಗಲಿ, ಪತಿಪಕ್ಷದವರಾಗಲಿ ಎಲ್ಲರೂ ನನಗೆ ಆಪ್ತರು. ನನ್ನ ಕುಟುಂಬಸ್ಥರು, ಸ್ನೇಹಿತರು, ಆಪ್ತರು ಯಾರೇ ತಪ್ಪು ಮಾಡಿದರು ನಾನು ಅವರ ಪರ ನಿಲ್ಲುವವರಲ್ಲ, ನಿಂತೂ ಇಲ್ಲ, ಮುಂದೆ ಕೂಡ ನಿಲ್ಲೋದಿಲ್ಲ ಎಂದು ಹೇಳಿದರು.

ತಪ್ಪು ಮಾಡಿದವರ ಮೇಲೆ ಪೊಲೀಸರು ಕಾನೂನು ರೀತಿ ಕ್ರಮ ತೆಗೆದುಕೊಳ್ಳಬಹುದು. ನಾನು ಯಾರ ಪರವಾಗಿಯೂ ಹೋಗಲ್ಲ. ನಾವು ಸಾರ್ವಜನಿಕರ ಸಂಪರ್ಕದಲ್ಲಿರುತ್ತೇವೆ, ಹೀಗಾಗಿ ಎಲ್ಲರೂ ನಮಗೆ ಪರಿಚಯಸ್ಥರು ಎಂದು ತಿಳಿಸಿದ್ದಾರೆ.

ಅಮೀರ್ ಹಸನ್ ತುಂಬೆ ಹೀಗೆ ಹಲ್ಲೆ ಮಾಡಿದ ಬಗ್ಗೆ ತಿಳಿದು ನನಗೆ ಆಶ್ಚರ್ಯವಾಗಿದೆ. ನನಗೆ ತಿಳಿದಿರುವ ಪ್ರಕಾರ, ಅಮೀರ್ ಬಡವರಿಗೆ, ಕಷ್ಟದಲ್ಲಿ ಇದ್ದವರಿಗೆ ಸಹಾಯ ಮಾಡೋನು. ಇಲ್ಲಿಯವರೆಗೂ ಅವನು ಎಲ್ಲಾ ಜಾತಿ, ಧರ್ಮದವರ ಜೊತೆ ಚೆನ್ನಾಗಿದ್ದಾನೆ, ಭೇದಭಾವ ಮಾಡಿಲ್ಲ. ಆದ್ರೆ ಈಗ ಯಾಕೆ ಈ ರೀತಿ ಮಾತನಾಡಿದ್ದಾನೆ ಎಂದು ಸ್ವತಃ ನನಗೇ ಅಚ್ಚರಿಯಾಗುತ್ತಿದೆ ಎಂದಿದ್ದಾರೆ.

ತಪ್ಪು ಮಾಡಿದವರ ವಿರುದ್ಧ ಕ್ರಮ ತೆಗೆದುಕೊಳ್ಳುವ ಅಧಿಕಾರ ಪೊಲೀಸರಿಗೆ ಇದೆ. ನ್ಯಾಯ ಕೇಳುವಂತ ಹಕ್ಕು ನೋವು ಪಟ್ಟವರಿಗಿದೆ. ಸರ್ಕಾರಿ ಸಿಬ್ಬಂದಿ ನಮ್ಮ ವೈರಿಗಳಲ್ಲ. ಯಾರೂ ಕೂಡ ಈ ರೀತಿ ಮಾಡಬಾರದು ಎಂದರು.

 

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

12 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

12 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

13 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

13 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

16 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

16 hours ago