ಮಂಗಳೂರು: ನನ್ನ ಕುಟುಂಬಸ್ಥರೇ ಆಗಲಿ, ಆಪ್ತರೇ ಆಗಲಿ ತಪ್ಪು ಮಾಡಿದವರ ಪರ ನಾನು ಯಾವತ್ತೂ ನಿಲ್ಲಲ್ಲ ಎಂದು ಮಾಜಿ ಸಚಿವ ಯು.ಟಿ ಖಾದರ್ ಹೇಳಿದ್ದಾರೆ.
ಕರೆಂಟ್ ಬಿಲ್ ಕೇಳಲು ಬಂದ ಮೆಸ್ಕಾಂ ಸಿಬ್ಬಂದಿ ಮೇಲೆ ಕಾಂಗ್ರೆಸ್ ಮುಖಂಡ ಅಮೀರ್ ಹಸನ್ ತುಂಬೆ ಹಲ್ಲೆ ನಡೆಸಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ನನ್ನ ಕ್ಷೇತ್ರದಲ್ಲಿ ಎಲ್ಲರೂ ನನಗೆ ಆಪ್ತರು. ಅವರು ಕಾಂಗ್ರೆಸ್ಸಿನವರಾಗಲಿ, ಪತಿಪಕ್ಷದವರಾಗಲಿ ಎಲ್ಲರೂ ನನಗೆ ಆಪ್ತರು. ನನ್ನ ಕುಟುಂಬಸ್ಥರು, ಸ್ನೇಹಿತರು, ಆಪ್ತರು ಯಾರೇ ತಪ್ಪು ಮಾಡಿದರು ನಾನು ಅವರ ಪರ ನಿಲ್ಲುವವರಲ್ಲ, ನಿಂತೂ ಇಲ್ಲ, ಮುಂದೆ ಕೂಡ ನಿಲ್ಲೋದಿಲ್ಲ ಎಂದು ಹೇಳಿದರು.
ತಪ್ಪು ಮಾಡಿದವರ ಮೇಲೆ ಪೊಲೀಸರು ಕಾನೂನು ರೀತಿ ಕ್ರಮ ತೆಗೆದುಕೊಳ್ಳಬಹುದು. ನಾನು ಯಾರ ಪರವಾಗಿಯೂ ಹೋಗಲ್ಲ. ನಾವು ಸಾರ್ವಜನಿಕರ ಸಂಪರ್ಕದಲ್ಲಿರುತ್ತೇವೆ, ಹೀಗಾಗಿ ಎಲ್ಲರೂ ನಮಗೆ ಪರಿಚಯಸ್ಥರು ಎಂದು ತಿಳಿಸಿದ್ದಾರೆ.
ಅಮೀರ್ ಹಸನ್ ತುಂಬೆ ಹೀಗೆ ಹಲ್ಲೆ ಮಾಡಿದ ಬಗ್ಗೆ ತಿಳಿದು ನನಗೆ ಆಶ್ಚರ್ಯವಾಗಿದೆ. ನನಗೆ ತಿಳಿದಿರುವ ಪ್ರಕಾರ, ಅಮೀರ್ ಬಡವರಿಗೆ, ಕಷ್ಟದಲ್ಲಿ ಇದ್ದವರಿಗೆ ಸಹಾಯ ಮಾಡೋನು. ಇಲ್ಲಿಯವರೆಗೂ ಅವನು ಎಲ್ಲಾ ಜಾತಿ, ಧರ್ಮದವರ ಜೊತೆ ಚೆನ್ನಾಗಿದ್ದಾನೆ, ಭೇದಭಾವ ಮಾಡಿಲ್ಲ. ಆದ್ರೆ ಈಗ ಯಾಕೆ ಈ ರೀತಿ ಮಾತನಾಡಿದ್ದಾನೆ ಎಂದು ಸ್ವತಃ ನನಗೇ ಅಚ್ಚರಿಯಾಗುತ್ತಿದೆ ಎಂದಿದ್ದಾರೆ.
ತಪ್ಪು ಮಾಡಿದವರ ವಿರುದ್ಧ ಕ್ರಮ ತೆಗೆದುಕೊಳ್ಳುವ ಅಧಿಕಾರ ಪೊಲೀಸರಿಗೆ ಇದೆ. ನ್ಯಾಯ ಕೇಳುವಂತ ಹಕ್ಕು ನೋವು ಪಟ್ಟವರಿಗಿದೆ. ಸರ್ಕಾರಿ ಸಿಬ್ಬಂದಿ ನಮ್ಮ ವೈರಿಗಳಲ್ಲ. ಯಾರೂ ಕೂಡ ಈ ರೀತಿ ಮಾಡಬಾರದು ಎಂದರು.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…