Featured

ಮೇಕೆದಾಟು ಯೋಜನೆ: ಸುಪ್ರೀಂ ನಿಂದ ತಮಿಳುನಾಡು ಅರ್ಜಿ ವಜಾ; ನ್ಯಾಯ ಪೀಠದಿಂದ ನಮಗೆ ಸಿಕ್ಕ ನ್ಯಾಯ : ಡಿ.ಕೆ.ಶಿ – vishwanews24

ಮೇಕೆದಾಟು ಯೋಜನೆ: ಸುಪ್ರೀಂ ನಿಂದ ತಮಿಳುನಾಡು ಅರ್ಜಿ ವಜಾ; ನಮಗೆ ಸಿಕ್ಕ ನ್ಯಾಯ : ಡಿ.ಕೆ.ಶಿ

ಬೆಂಗಳೂರು: “ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿರುವುದು, ನ್ಯಾಯ ಪೀಠದಿಂದ ನಮಗೆ ನ್ಯಾಯ ಸಿಕ್ಕಂತಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.

ಮೇಕೆದಾಟು ಯೋಜನೆ ಡಿಪಿಆರ್ ವಿರೋಧಿಸಿ ತಮಿಳುನಾಡು ಸುಪ್ರೀಂ ಕೋರ್ಟಿನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದ್ದು, ಇದರಿಂದ ತಮಿಳುನಾಡಿಗೆ ಹಿನ್ನಡೆಯಾಗಿದೆಯಲ್ಲಾ ಎಂದು ಕೇಳಿದಾಗ, “ಈ ಬಗ್ಗೆ ಸಂಪೂರ್ಣ ಮಾಹಿತಿ ಸಿಕ್ಕ ನಂತರ ವಿವರವಾಗಿ ಮಾತನಾಡುತ್ತೇನೆ. ಇದು ಯಾವುದೇ ರೀತಿಯ ಹಿನ್ನಡೆಯಲ್ಲ. ಬದಲಿಗೆ ನ್ಯಾಯ ಪೀಠದಿಂದ ನ್ಯಾಯ ಸಿಕ್ಕಂತಾಗಿದೆ. ಮೇಕೆದಾಟು, ‘ನಮ್ಮ ನೀರು, ನಮ್ಮ ಹಕ್ಕು’ ಯೋಜನೆ. ನಾವು ತಮಿಳುನಾಡಿಗೆ ಯಾವುದೇ ರೀತಿಯಲ್ಲೂ ಅಡ್ಡಿ ಮಾಡುತ್ತಿಲ್ಲ. ಈ ಯೋಜನೆಯಿಂದ ತಮಿಳುನಾಡಿಗೇ ಹೆಚ್ಚು ಲಾಭವಾಗಲಿದೆ. ರಾಜ್ಯದ ಜನರ ಪ್ರಾರ್ಥನೆ, ಜನರ ಕಷ್ಟಕ್ಕೆ ನ್ಯಾಯಾಲಯ ಸ್ಪಂದಿಸಿದೆ” ಎಂದು ತಿಳಿಸಿದರು.

“ನ್ಯಾಯಾಲಯಗಳ ತೀರ್ಮಾನದಂತೆ ತಮಿಳುನಾಡು ತನ್ನ ಪಾಲಿನ ನೀರನ್ನು ಪಡೆಯಲಿದೆ. ಹೀಗಾಗಿ ನಾವು ಈ ಯೋಜನೆ ಮುಂದುವರಿಸಿಕೊಂಡು ಹೋಗುತ್ತೇವೆ. ಈ ಯೋಜನೆಯನ್ನು ನಮ್ಮ ನೆಲದಲ್ಲಿ, ನಮ್ಮ ಹಣದಲ್ಲಿ ಮಾಡಲಾಗುತ್ತಿದೆ. ನೀರಿನ ಕೊರತೆ ಉಂಟಾದಾಗ ತಮಿಳುನಾಡಿಗೆ ನೀರು ಹರಿಸಲು ಈ ಸಮತೋಲಿತ ಅಣೆಕಟ್ಟೆ ನೆರವಾಗಲಿದೆ. ಇದು ಬೆಂಗಳೂರಿಗರ ಗೆಲುವು. ತಮಿಳುನಾಡು ಸೇರಿದಂತೆ ಬೇರೆ ರಾಜ್ಯಗಳಿಂದ ಬರುವ ಜನರಿಗೂ ನೀರು ಒದಗಿಸಲಾಗುವುದು. ಈಗಲಾದರೂ ಯೋಜನೆಗೆ ಸಹಕಾರ ನೀಡಿ ಎಂದು ತಮಿಳುನಾಡಿಗೆ ಮನವಿ ಮಾಡುತ್ತೇನೆ. ನಾವೆಲ್ಲರೂ ಮಾನವೀಯತೆ ದೃಷ್ಟಿಯಿಂದ ಒಟ್ಟಾಗಿ ಕೆಲಸ ಮಾಡೋಣ” ಎಂದು ಕರೆ ನೀಡಿದರು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

11 minutes ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

29 minutes ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

38 minutes ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

52 minutes ago

ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ – vishwanews24

ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ ಮುಸ್ಲಿಂ ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪ್ರಯಾಗ್‌ರಾಜ್: ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್…

3 hours ago

ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ – vishwanews24

ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ ಸೆ.30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯ ಎಚ್ಚರಿಕೆ…

4 hours ago