Featured

ಮೇಘಸ್ಫೋಟದಿಂದ ತಾತ್ಕಾಲಿಕ ಬಂದ್ ಆಗಿದ್ದ ಅಮರನಾಥ ಯಾತ್ರೆ ಮತ್ತೆ ಆರಂಭ – Vishwanews24

ಮೇಘಸ್ಫೋಟದಿಂದ ತಾತ್ಕಾಲಿಕ ಬಂದ್ ಆಗಿದ್ದ ಅಮರನಾಥ ಯಾತ್ರೆ ಮತ್ತೆ ಆರಂಭ

ನವದೆಹಲಿ: ಅಮರನಾಥ ಯಾತ್ರೆ ಪುನಾರಂಭಿಸಲಾಗಿದೆ. ಮೇಘಸ್ಫೋಟದಿಂದ ತಾತ್ಕಾಲಿಕ ಬಂದ್ ಆಗಿದ್ದು, ಇದೀಗ ಹವಾಮಾನ ಪರಿಸ್ಥಿತಿ ಸುಧಾರಿಸಿದ ಹಿನ್ನೆಲೆ ಯಾತ್ರೆ ಮತ್ತೆ ಆರಂಭಿಸಲಾಗಿದೆ. ಜಮ್ಮು ಮಾರ್ಗವಾಗಿ ಬರುವ ಯಾತ್ರಾರ್ಥಿಗಳಿಗೆ ಬೇಸ್ ಕ್ಯಾಂಪ್‍ಗೆ ತೆರಳಲು ಅನುಮತಿ ನೀಡಲಾಗಿದೆ. ಪೆಹಲ್ಗಾಮ್ ಬೇಸ್ ಮಾರ್ಗವಾಗಿ ತೆರಳಲು ಅವಕಾಶ ನೀಡಲಾಗಿದೆ.

ಮುಂಜಾನೆ 5 ಗಂಟೆಗೆ ಜಮ್ಮುವಿನ ಭಗವತಿ ನಗರ ಮೂಲ ಶಿಬಿರದಿಂದ ಯಾತ್ರಾರ್ಥಿಗಳು ಹೊರಟಿದ್ದಾರೆ. ಬಾಲ್ಟಾಲ್ ಮತ್ತು ನುನ್ವಾನ್ ನಿಂದ ಹೆಲಿಕಾಪ್ಟರ್ ಹಾರಾಟ ಆರಂಭವಾಗಿದೆ. ಭಾನುವಾರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಸಭೆಯಲ್ಲಿ ಇಂದು ಹವಾಮಾನ ಪರಿಸ್ಥಿತಿ ಆಧರಿಸಿ ಅಧಿಕಾರಿಗಳು ತೀರ್ಮಾನ ಮಾಡುವುದಾಗಿ ತಿಳಿಸಿದ್ದರು.

ಅಮರನಾಥ ಯಾತ್ರೆ ಪುನಾರಂಭಕ್ಕೆ ಜಿಲ್ಲಾಡಳಿತ ಕೂಡ ಉತ್ಸುಕವಾಗಿತ್ತು. ಗುಹೆ ದರ್ಶನಕ್ಕೆ ಸಾವಿರಾರು ಜನರು ಕಾಯುತ್ತಿರುವ ಹಿನ್ನೆಲೆ ಅವಕಾಶ ನೀಡಲು ಚಿಂತನೆ ನಡೆಸಲಾಗಿತ್ತು. ಅಲ್ಲದೆ ಮೇಘಸ್ಫೋಟದಿಂದ ಹಾಳಾದ ರಸ್ತೆಗಳನ್ನು ಜಿಲ್ಲಾಡಳಿತ ಸಿದ್ಧಪಡಿಸಿತ್ತು. ದರ್ಶನಕ್ಕೆ ಮಾಡಿಕೊಂಡಿರುವ ತಯಾರಿಗಳ ಬಗ್ಗೆ ನಿನ್ನೆ ಲೆಫ್ಟಿನೆಂಟ್ ಗವರ್ನರ್ ಗೆ ಮಾಹಿತಿ ನೀಡಿದ್ದರು. ಈ ಹಿನ್ನೆಲೆ ಇಂದು ದರ್ಶನಕ್ಕೆ ಅವಕಾಶ ನೀಡಲಾಗಿದೆ.

ಇತ್ತ ಅಮರನಾಥ ಗುಹೆಯ ಬಳಿ ಮೇಘಸ್ಫೋಟ ಆಗಿ ನಾಪತ್ತೆಯಾದ 40 ಮಂದಿ ಬದುಕಿರುವುದು ಅನುಮಾನವಾಗಿದೆ. ಮೂರು ದಿನದ ಕಾರ್ಯಾಚರಣೆಯ ಬಳಿಕ ಯಾತ್ರಾರ್ಥಿಗಳು ಪತ್ತೆಯಾಗಿಲ್ಲ. ಹೀಗಾಗಿ ನೀರಿನಲ್ಲಿ ಕೊಚ್ಚಿ ಹೋಗಿರಬಹುದು ಎಂದು ರಕ್ಷಣಾ ತಂಡಗಳು ಅನುಮಾನ ವ್ಯಕ್ತಪಡಿಸಿವೆ. ಆದರೂ ಭದ್ರತಾ ಸಿಬ್ಬಂದಿ ಸಾಧ್ಯವಾದಷ್ಟು ಜನರನ್ನು ಜೀವಂತವಾಗಿ ಹುಡುಕುವ ಪ್ರಯತ್ನದಲ್ಲಿದ್ದಾರೆ. ಸ್ನಿಫರ್ ಡಾಗ್‍ಗಳು, ಥರ್ಮಲ್ ಇಮೇಜರ್ ಸೇರಿದಂತೆ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಹುಡುಕಾಟ ನಡೆಸುತ್ತಿದ್ದಾರೆ.

ಅಮರನಾಥ ಗುಹೆ ಬಳಿ ಮೇಘಸ್ಫೋಟಕ್ಕೂ ಮುನ್ನ ಒಂದು ಲಕ್ಷಕ್ಕೂ ಅಧಿಕ ಯಾತ್ರಾರ್ಥಿಗಳು ದರ್ಶನ ಪಡೆದಿದ್ದರು. ಯಾತ್ರೆ ಶುರುವಾದ ಮೊದಲ ವಾರದಲ್ಲಿ ಒಂದು ಲಕ್ಷ ಮಂದಿ ದರ್ಶನ ಪಡೆದಿದ್ದರು. ಮೇಘಸ್ಫೋಟಕ್ಕೂ ಮುನ್ನ 10 ಬ್ಯಾಚ್‍ಗಳಲ್ಲಿ ಒಟ್ಟು 69,535 ಯಾತ್ರಾರ್ಥಿಗಳು ನುನ್ವಾನ್, ಪಹಲ್ಗಾಮ್, ಬಲ್ಟಾಲ್ ಮೂಲಕ ಭೇಟಿ ನೀಡಿದ್ದರು.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

12 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

12 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

12 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

12 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago