ಶ್ರೀನಗರ: ಜಮ್ಮು-ಕಾಶ್ಮೀರದ ಪ್ರಸಿದ್ಧ ಧಾರ್ಮಿಕ ಸ್ಥಳ ಅಮರನಾಥದಲ್ಲಿ ಏಕಾಏಕಿ ಮೇಘಸ್ಫೋಟ ಸಂಭವಿಸಿದ್ದು, ಗುಡ್ಡದಿಂದ ಪ್ರವಾಹೋಪಾದಿಯಲ್ಲಿ ನೀರು ಹರಿದು ಬಂದಿದೆ. ಈಗಾಗಲೇ ಸುಮಾರು 15,000 ಯಾತ್ರಾರ್ಥಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೇಘಸ್ಫೋಟದಲ್ಲಿ ಕನಿಷ್ಠ 16 ಮಂದಿ ಸಾವನ್ನಪ್ಪಿದ್ದು, 40ಕ್ಕೂ ಅಧಿಕ ಯಾತ್ರಾರ್ಥಿಗಳು ನಾಪತ್ತೆಯಾಗಿರುವುದಾಗಿ ವರದಿ ತಿಳಿಸಿದೆ. ಪ್ರಸಿದ್ಧ ಗುಹಾಂತರ ದೇವಾಲಯದ ಸಮೀಪ ಸಿಲುಕಿಕೊಂಡಿದ್ದ ಯಾತ್ರಾರ್ಥಿಗಳನ್ನು ರಕ್ಷಣಾ ಕಾರ್ಯಾಚರಣೆ ಮೂಲಕ ಸ್ಥಳಾಂತರಿಸಲಾಗಿದೆ.
ಘಟನೆಯಲ್ಲಿ ಗಾಯಗೊಂಡಿದ್ದ 21 ಯಾತ್ರಾರ್ಥಿಗಳನ್ನು ಏರ್ ಲಿಫ್ಟ್ ಮೂಲಕ ಶನಿವಾರ ಬೆಳಗ್ಗೆ ಬಾಲ್ಟಾಲ್ ಗೆ ಕರೆತರಲಾಗಿದೆ. ಯಾವುದೇ ಭೂಕುಸಿತ ಸಂಭವಿಸಿಲ್ಲ ಎಂದು ತಿಳಿಸಿರುವ ಅಧಿಕಾರಿಗಳು, ಮಳೆ ಮುಂದುವರಿದಿರುವುದಾಗಿ ವರದಿ ಹೇಳಿದೆ.
ಭಾರತೀಯ ಸೇನೆ, ಎಸ್ ಡಿಆರ್ ಎಫ್, ಸಿಆರ್ ಪಿಎಫ್ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿರುವುದಾಗಿ ಎನ್ ಡಿಆರ್ ಎಫ್ ಡೈರೆಕ್ಟರ್ ಜನರಲ್ ಅತುಲ್ ಕಾರ್ವಾಲ್ ಎಎನ್ ಐ ನ್ಯೂಸ್ ಏಜೆನ್ಸಿಗೆ ತಿಳಿಸಿದ್ದಾರೆ.
ಭಾರೀ ಮಳೆಯ ಪರಿಣಾಮ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಮೇಘಸ್ಫೋಟದಿಂದ ಸಾವನ್ನಪ್ಪಿರುವ ಯಾತ್ರಾರ್ಥಿಗಳ ಕುಟುಂಬ ಸದಸ್ಯರಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ಕೋವಿಂದ್ ಸಂತಾಪ ವ್ಯಕ್ತಪಡಿಸಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…