ಉಡುಪಿ: ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ ವಿಧಾನಸಭಾ ಸಚಿವಾಲಯ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದಲ್ಲಿ ಬೆಂಗಳೂರಿನ ವಿಧಾನ ಸೌಧದ ಮೆಟ್ಟಿಲುಗಳ ಮೇಲೆ ಇದೇ ಪ್ರಥಮ ಬಾರಿಗೆ ಉಭಯತಿಟ್ಟುಗಳ ಸುಪ್ರಸಿದ್ಧ ಯಕ್ಷಗಾನ ಕಲಾವಿದರ ಕೂಡುವಿಕೆಯಲ್ಲಿ ಯಕ್ಷಗಾನ ಪ್ರದರ್ಶನ ಮುಂಬರುವ ಮೇ ತಿಂಗಳಲ್ಲಿ ಆಯೋಜಿಸಲಾಗುವುದು ಎಂದು ವಿಧಾನಸೌಧದ ಸ್ಪೀಕರ್ ಯು. ಟಿ .ಖಾದರ್ ತಿಳಿಸಿದ್ದಾರೆ.
ಈ ಬಗ್ಗೆ ಕರ್ನಾ ಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ನೇತೃತ್ವದ ಅಕಾಡೆಮಿ ನಿಯೋಗ ಮಂಗಳವಾರ ವಿಧಾನಸೌಧದ ಸ್ಪೀಕರ್ ಯು. ಟಿ .ಖಾದರ್ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿತು.
ಇದನ್ನೂ ಓದಿ : 👇
ನಿಯೋಗದ ಮನವಿಗೆ ಸ್ಪಂದಿಸಿದ ಸ್ಪೀಕರ್ ಯು. ಟಿ. ಖಾದರ್ ಅವರು ಶಾಸಕರು ಮತ್ತು ಪರಿಷತ್ ಸದಸ್ಯರು ವೀಕ್ಷಿಸಲು ಅನುಕೂಲವಾಗುವ ಹಾಗೆ ಹೆಸರಾಂತ ಯಕ್ಷಗಾನ ಕಲಾವಿದರನ್ನು ಒಳಗೊಂಡ ಯಕ್ಷಗಾನ ಪ್ರದರ್ಶನಕ್ಕೆ ಅವಕಾಶ ನೀಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ವಿಧಾನಸಭಾ ಸಚಿವಾಲಯದ ಕಾರ್ಯದರ್ಶಿ ವಿಶಾಲಾಕ್ಷಿ, ಯಕ್ಷಗಾನ ಅಕಾಡೆಮಿ ರಿಜಿಸ್ಟ್ರಾರ್ ನಮೃತಾ ಎನ್., ಸದಸ್ಯರುಗಳಾದ ಕೊಪ್ಪಲ ಮೋಹನ್ ಕದ್ರಿ, ಸುಧಾಕರ ಶೆಟ್ಟಿ, ಪುಟ್ಟಸ್ವಾಮಿ ಎ. ಆರ್. ಉಪಸ್ಥಿತರಿದ್ದರು.
ಇದನ್ನೂ ಓದಿ : 👇
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…