Featured

ಮೇ ತಿಂಗಳಲ್ಲಿ ವಿಧಾನ ಸೌಧದ ಮೆಟ್ಟಿಲುಗಳ ಮೇಲೆ ಪ್ರಥಮ ಬಾರಿಗೆ  ಯಕ್ಷಗಾನ ಪ್ರದರ್ಶನ : ಯು. ಟಿ .ಖಾದರ್‌  – vishwanews24

ಮೇ ತಿಂಗಳಲ್ಲಿ ವಿಧಾನ ಸೌಧದ ಮೆಟ್ಟಿಲುಗಳ ಮೇಲೆ ಪ್ರಥಮ ಬಾರಿಗೆ  ಯಕ್ಷಗಾನ ಪ್ರದರ್ಶನ : ಯು. ಟಿ .ಖಾದರ್‌

ಉಡುಪಿ: ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ ವಿಧಾನಸಭಾ ಸಚಿವಾಲಯ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದಲ್ಲಿ ಬೆಂಗಳೂರಿನ ವಿಧಾನ ಸೌಧದ ಮೆಟ್ಟಿಲುಗಳ ಮೇಲೆ ಇದೇ ಪ್ರಥಮ ಬಾರಿಗೆ ಉಭಯತಿಟ್ಟುಗಳ ಸುಪ್ರಸಿದ್ಧ ಯಕ್ಷಗಾನ ಕಲಾವಿದರ ಕೂಡುವಿಕೆಯಲ್ಲಿ ಯಕ್ಷಗಾನ ಪ್ರದರ್ಶನ ಮುಂಬರುವ ಮೇ ತಿಂಗಳಲ್ಲಿ ಆಯೋಜಿಸಲಾಗುವುದು ಎಂದು ವಿಧಾನಸೌಧದ ಸ್ಪೀಕರ್‌ ಯು. ಟಿ .ಖಾದರ್‌ ತಿಳಿಸಿದ್ದಾರೆ.

ಈ ಬಗ್ಗೆ ಕರ್ನಾ ಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ನೇತೃತ್ವದ ಅಕಾಡೆಮಿ ನಿಯೋಗ ಮಂಗಳವಾರ ವಿಧಾನಸೌಧದ ಸ್ಪೀಕರ್‌ ಯು. ಟಿ .ಖಾದರ್‌ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿತು.

ಇದನ್ನೂ ಓದಿ : 👇

ನಿಯೋಗದ ಮನವಿಗೆ ಸ್ಪಂದಿಸಿದ ಸ್ಪೀಕರ್ ಯು. ಟಿ. ಖಾದರ್ ಅವರು ಶಾಸಕರು ಮತ್ತು ಪರಿಷತ್ ಸದಸ್ಯರು ವೀಕ್ಷಿಸಲು ಅನುಕೂಲವಾಗುವ ಹಾಗೆ ಹೆಸರಾಂತ ಯಕ್ಷಗಾನ ಕಲಾವಿದರನ್ನು ಒಳಗೊಂಡ ಯಕ್ಷಗಾನ ಪ್ರದರ್ಶನಕ್ಕೆ ಅವಕಾಶ ನೀಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ವಿಧಾನಸಭಾ ಸಚಿವಾಲಯದ ಕಾರ್ಯದರ್ಶಿ ವಿಶಾಲಾಕ್ಷಿ, ಯಕ್ಷಗಾನ ಅಕಾಡೆಮಿ ರಿಜಿಸ್ಟ್ರಾರ್ ನಮೃತಾ ಎನ್., ಸದಸ್ಯರುಗಳಾದ ಕೊಪ್ಪಲ ಮೋಹನ್ ಕದ್ರಿ, ಸುಧಾಕರ ಶೆಟ್ಟಿ, ಪುಟ್ಟಸ್ವಾಮಿ ಎ. ಆರ್. ಉಪಸ್ಥಿತರಿದ್ದರು.

ಇದನ್ನೂ ಓದಿ : 👇

 

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

19 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

19 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

20 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

21 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

21 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

22 hours ago