Featured

ಮೇ 1 ರಿಂದ LPG ನಿಯಮಗಳಲ್ಲಿ ಭಾರೀ ಬದಲಾವಣೆ – vishwanews24

ಮೇ 1 ರಿಂದ LPG ನಿಯಮಗಳಲ್ಲಿ ಭಾರೀ ಬದಲಾವಣೆ

ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಹೆಚ್ಚುತ್ತಿರುವ ಯುದ್ಧದ ಭೀತಿ ಮತ್ತು ಪೂರೈಕೆಯಲ್ಲಿನ ವ್ಯತ್ಯಯದಿಂದಾಗಿ ಭಾರತದಲ್ಲಿ ಅಡುಗೆ ಅನಿಲ ಬಳಕೆಯ ನಿಯಮಗಳಲ್ಲಿ ದೊಡ್ಡ ಬದಲಾವಣೆಗಳಾಗುತ್ತಿವೆ.

ಪೆಟ್ರೋಲಿಯಂ ಕಂಪನಿಗಳಾದ ಇಂಡೇನ್, ಭಾರತ್ ಗ್ಯಾಸ್ ಮತ್ತು ಹೆಚ್‌ಪಿ ಗ್ಯಾಸ್ ಮೇ 1, 2026 ರಿಂದ ಜಾರಿಗೆ ಬರುವಂತೆ ಹೊಸ ಮಾರ್ಗಸೂಚಿ ಸಿದ್ಧಪಡಿಸಿವೆ.

ಹೊಸ ಗ್ಯಾಸ್ ಕನೆಕ್ಷನ್ ಪಡೆಯುವಂತಿಲ್ಲ!
ದೇಶದಲ್ಲಿ ಎಲ್‌ಪಿಜಿ ಬೇಡಿಕೆ ಹೆಚ್ಚುತ್ತಿರುವುದರಿಂದ, ಪ್ರಸ್ತುತ ಇರುವ ಗ್ರಾಹಕರಿಗೆ ಸಮರ್ಪಕವಾಗಿ ಗ್ಯಾಸ್ ಪೂರೈಸಲು ಸರ್ಕಾರ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ಗ್ಯಾಸ್ ಕನೆಕ್ಷನ್ ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕನಿಷ್ಠ ಒಂದು ತಿಂಗಳ ಕಾಲ ಯಾರಿಗೂ ಹೊಸ ಸಂಪರ್ಕ ಸಿಗಲ್ಲ ಎಂದು ಪೆಟ್ರೋಲಿಯಂ ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ:

ಸಿಲಿಂಡರ್ ಬುಕಿಂಗ್ ನಡುವೆ ಇರಬೇಕು ಗ್ಯಾಪ್

ಇನ್ನು ಮುಂದೆ ನಿಮಗೆ ಇಷ್ಟ ಬಂದಾಗ ಗ್ಯಾಸ್ ಬುಕ್ ಮಾಡಲು ಸಾಧ್ಯವಿಲ್ಲ. ಬುಕಿಂಗ್ ಅವಧಿಯ ಮೇಲೆ ಕಟ್ಟುನಿಟ್ಟಿನ ನಿಯಮ ಜಾರಿಗೆ ಬರುತ್ತಿದೆ.

ನಗರ ಪ್ರದೇಶಗಳಲ್ಲಿ: ಎರಡು ಸಿಲಿಂಡರ್ ಬುಕಿಂಗ್ ನಡುವೆ ಕನಿಷ್ಠ 25 ದಿನಗಳ ಅಂತರವಿರಬೇಕು.

ಗ್ರಾಮೀಣ ಪ್ರದೇಶಗಳಲ್ಲಿ: ಎರಡು ರೀಫಿಲ್ ಬುಕಿಂಗ್ ನಡುವೆ 45 ದಿನಗಳ ಅಂತರವಿರಬೇಕು. ದೊಡ್ಡ ಕುಟುಂಬಗಳಿಗೆ ಈ ನಿಯಮ ತುಸು ಸಂಕಷ್ಟ ತರಬಹುದು, ಹೀಗಾಗಿ ಗ್ಯಾಸ್ ಮಿತವಾಗಿ ಬಳಸುವಂತೆ ಸೂಚಿಸಲಾಗಿದೆ.

ಒಟಿಪಿ (OTP) ಇಲ್ಲದೆ ಸಿಲಿಂಡರ್ ಸಿಗಲ್ಲ
ಗ್ಯಾಸ್ ವಿತರಣೆಯಲ್ಲಿ ಪಾರದರ್ಶಕತೆ ತರಲು ಮತ್ತು ಅಕ್ರಮಗಳನ್ನು ತಡೆಯಲು ಒಟಿಪಿ ಆಧಾರಿತ ವಿತರಣೆಯನ್ನು (DAC)
ಕಡ್ಡಾಯಗೊಳಿಸಲಾಗಿದೆ. ಸಿಲಿಂಡರ್ ಮನೆಗೆ ಬಂದಾಗ, ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ ಬರುವ ಕೋಡ್ ಅನ್ನು ವಿತರಕ ಸಂಸ್ಥೆಯವರಿಗೆ ನೀಡಿದರೆ ಮಾತ್ರ ಸಿಲಿಂಡರ್ ಡೆಲಿವರಿ ಆಗುತ್ತದೆ.

ಇದನ್ನೂ ಓದಿ:

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

14 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

14 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

14 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

15 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

19 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

19 hours ago