ಬೆಂಗಳೂರು: ಮೇ ತಿಂಗಳ 10ನೇ ತಾರೀಕು ರಾಜ್ಯದ ವಿಧಾನಸಭೆ ಮತದಾನದ ದಿನ ಮಾತ್ರವಲ್ಲ; ರಾಜ್ಯಕ್ಕೆ ಅಂಟಿಕೊಂಡಿರುವ ಬ್ರಹ್ಮಾಂಡ ಭ್ರಷ್ಟಾಚಾರದಿಂದ ಮುಕ್ತಗೊಳ್ಳುವ ಹಾಗೂ ನವ ಕರ್ನಾಟಕಕ್ಕೆ ಹೊಸ ದಿಕ್ಸೂಚಿ ನೀಡುವ ದಿನವೂ ಆಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿಶ್ಲೇಷಿಸಿದ್ದಾರೆ.
ಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಅಧಿಕಾರಿ ಸರಕಾರದ ಅಡಿಯಾಳಾಗುವುದಿಲ್ಲ ಎಂಬ ನಂಬಿಕೆ ಇದೆ. ನಾಲ್ಕು ವರ್ಷಗಳಿಂದ ಡಬಲ್ ಎಂಜಿನ್ ಸರಕಾರದ ದಬ್ಟಾಳಿಕೆಗೆ ಜನ ಬೇಸತ್ತಿದ್ದು, ವೈಫಲ್ಯವಾಗಿರುವ ಎಂಜಿನ್ಗಳ ಬದಲಿಗೆ ಹೊಸ ಎಂಜಿನ್ ಅನ್ನು ಜನರೇ ನಿರ್ಮಾಣ ಮಾಡಲಿದ್ದಾರೆ ಎಂದರು.
ನಾವು ಕೇವಲ ರಾಜ್ಯದ ಜನರ ಜತೆಗೆ ಹೊಂದಾಣಿಕೆಯಾಗಿದ್ದೇವೆ ಹೊರತು, ಬೇರೆ ಯಾರೊಂದಿಗೂ ಹೊಂದಾಣಿಕೆ ಮಾಡಿಕೊಂಡಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, 40 ಪರ್ಸೆಂಟ್ ಕಮಿಷನ್ ಕಾಂಗ್ರೆಸ್ಗೆ ತಿರುಗುಬಾಣವಾಗಲಿದೆ ಎಂದ ಬಿಜೆಪಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, 40 ಪರ್ಸೆಂಟ್ ಕಮಿಷನ್ ಎನ್ನುವುದು ಜನರ ಮನಸ್ಸಿನಲ್ಲಿ ಅಚ್ಚೊತ್ತಿದೆ. ಲೋಕಾಯುಕ್ತ ಸಂಸ್ಥೆ ಅದಕ್ಕೆ ಸ್ಟಾಂಪ್ ಒತ್ತಿದ್ದಾರೆ’ ಎಂದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…