Featured

ಮೇ 12 ವಿಜಯ್‌ ಪ್ರಕಾಶ್‌ ಡೇ ಎಂದು ಘೋಷಿಸಿದ ಅಮೆರಿಕಾ ; ಇದು ಕನ್ನಡಿಗರಿಗೊಬ್ಬರಿಗೆ ಸಿಕ್ಕ ಬಹುದೊಡ್ಡ ಸನ್ಮಾನ -Vishwanews24

ಬೆಂಗಳೂರು: ಕನ್ನಡದ ಹೆಮ್ಮೆಯ ಗಾಯಕ ವಿಜಯ್ ಪ್ರಕಾಶ್ ಅವರಿಗೆ ಅಮೆರಿಕಾದಲ್ಲಿಯೂ ಗೌರವ ಸಿಕ್ಕಿದೆ.ಅಮೆರಿಕಾದ ನಾರ್ತ್​​ ಕರೋಲಿನಾ ಮೇ 12ನ್ನು ವಿಜಯ್ ಪ್ರಕಾಶ್ ಡೇ ಅಂತಾ ಆಚರಿಸಲಾಗುತ್ತಿದೆ. ಇದು ಕನ್ನಡಿಗರಿಗೊಬ್ಬರಿಗೆ ಸಿಕ್ಕ ಬಹುದೊಡ್ಡ ಸನ್ಮಾನ.

ಕಳೆದ ಮೇ 12ರಂದು ಅಮೆರಿಕದ ಉತ್ತರ ಕರೊಲಿನಾದ ಷಾರ್ಲೆಟ್ ನಗರದಲ್ಲಿ ನಡೆದ ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ಹಾಡಿದ ವಿಜಯ್‍ಪ್ರಕಾಶ್ ಅಲ್ಲಿನ ಸಂಗೀತ ಪ್ರೇಮಿಗಳನ್ನು ರಂಜಿಸಿದ್ದರು. ಅಪಾರ ಸಂಖ್ಯೆಯ ಅನಿವಾಸಿ ಭಾರತೀಯರಲ್ಲದೆ ಅಮೆರಿಕನ್ನರೂ ಕೂಡ ಆಗಮಿಸಿದ್ದ ಅಲ್ಲಿನ ಮೇಯರ್ ವಿಲಿಯಮ್ ಸಿ ಡಶ್ ಕೂಡ ಭಾಗವಹಿಸಿದ್ದರು.

ಗಾಯಕ ವಿಜಯ ಪ್ರಕಾಶ್ ಅವರ ಆ ಕಂಠಸಿರಿಗೆ ಮಾರುಹೋದ ಅಲ್ಲಿನ ಚುನಾಯಿತ ಪ್ರತಿನಿಧಿ ವಿಲಿಯಮ್, ವಿಜಯ್ ಪ್ರಕಾಶ್ ಅವರ ಬಗ್ಗೆ ಹಾಗೂ ಅವರ ಸಂಗೀತ ಸಾಧನೆಯ ಬಗ್ಗೆ ತಿಳಿದುಕೊಂಡಿದ್ದಾರೆ.

ಷಾರ್ಲೆಟ್ ನಗರವನ್ನೇ ಸಂಗೀತದ ಅಲೆಯಲ್ಲಿ ತೇಲಿಸಿದ್ದ ವಿಜಯ್ ಪ್ರಕಾಶ್ ಅವರಿಗೆ ಆ ದಿನವನ್ನು ಮೀಸಲಿಡಲು ಸ್ಥಳೀಯ ಆಡಳಿತ ಮಂಡಳಿಯ ಜೊತೆ ಮೇಯರ್ ವಿಲಿಯಂ ಚರ್ಚಿಸಿ ಈ ನಿರ್ಧಾರ ಕೈಗೊಂಡಿದ್ದಾರೆ.

ಇದೀಗ 2019ರ ಮೇ 12 ವಿಜಯ್ ಪ್ರಕಾಶ್ ಡೇ ಎಂದು ಷಾರ್ಲೆಟ್ ನಗರದ ಸರ್ಕಾರಿ ದಾಖಲೆಯಲ್ಲಿ ನಮೂದಿಸಲಾಗಿದೆ. ಪ್ರತಿವರ್ಷ ಈ ದಿನವನ್ನು ವಿಜಯಪ್ರಕಾಶ್ ಡೇ ಎಂದು ಆಚರಿಸಲು ನಾರ್ತ್ ಕರೊಲಿನಾದ ಷಾರ್ಲೆಟ್ ನಗರದ ಆಡಳಿತ ಮಂಡಳಿ ಅಧಿಕೃತ ಪ್ರಕಟಣೆ ಹೊರಡಿಸಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago