Featured

ಮೇ 12 ವಿಜಯ್‌ ಪ್ರಕಾಶ್‌ ಡೇ ಎಂದು ಘೋಷಿಸಿದ ಅಮೆರಿಕಾ ; ಇದು ಕನ್ನಡಿಗರಿಗೊಬ್ಬರಿಗೆ ಸಿಕ್ಕ ಬಹುದೊಡ್ಡ ಸನ್ಮಾನ -Vishwanews24

ಬೆಂಗಳೂರು: ಕನ್ನಡದ ಹೆಮ್ಮೆಯ ಗಾಯಕ ವಿಜಯ್ ಪ್ರಕಾಶ್ ಅವರಿಗೆ ಅಮೆರಿಕಾದಲ್ಲಿಯೂ ಗೌರವ ಸಿಕ್ಕಿದೆ.ಅಮೆರಿಕಾದ ನಾರ್ತ್​​ ಕರೋಲಿನಾ ಮೇ 12ನ್ನು ವಿಜಯ್ ಪ್ರಕಾಶ್ ಡೇ ಅಂತಾ ಆಚರಿಸಲಾಗುತ್ತಿದೆ. ಇದು ಕನ್ನಡಿಗರಿಗೊಬ್ಬರಿಗೆ ಸಿಕ್ಕ ಬಹುದೊಡ್ಡ ಸನ್ಮಾನ.

ಕಳೆದ ಮೇ 12ರಂದು ಅಮೆರಿಕದ ಉತ್ತರ ಕರೊಲಿನಾದ ಷಾರ್ಲೆಟ್ ನಗರದಲ್ಲಿ ನಡೆದ ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ಹಾಡಿದ ವಿಜಯ್‍ಪ್ರಕಾಶ್ ಅಲ್ಲಿನ ಸಂಗೀತ ಪ್ರೇಮಿಗಳನ್ನು ರಂಜಿಸಿದ್ದರು. ಅಪಾರ ಸಂಖ್ಯೆಯ ಅನಿವಾಸಿ ಭಾರತೀಯರಲ್ಲದೆ ಅಮೆರಿಕನ್ನರೂ ಕೂಡ ಆಗಮಿಸಿದ್ದ ಅಲ್ಲಿನ ಮೇಯರ್ ವಿಲಿಯಮ್ ಸಿ ಡಶ್ ಕೂಡ ಭಾಗವಹಿಸಿದ್ದರು.

ಗಾಯಕ ವಿಜಯ ಪ್ರಕಾಶ್ ಅವರ ಆ ಕಂಠಸಿರಿಗೆ ಮಾರುಹೋದ ಅಲ್ಲಿನ ಚುನಾಯಿತ ಪ್ರತಿನಿಧಿ ವಿಲಿಯಮ್, ವಿಜಯ್ ಪ್ರಕಾಶ್ ಅವರ ಬಗ್ಗೆ ಹಾಗೂ ಅವರ ಸಂಗೀತ ಸಾಧನೆಯ ಬಗ್ಗೆ ತಿಳಿದುಕೊಂಡಿದ್ದಾರೆ.

ಷಾರ್ಲೆಟ್ ನಗರವನ್ನೇ ಸಂಗೀತದ ಅಲೆಯಲ್ಲಿ ತೇಲಿಸಿದ್ದ ವಿಜಯ್ ಪ್ರಕಾಶ್ ಅವರಿಗೆ ಆ ದಿನವನ್ನು ಮೀಸಲಿಡಲು ಸ್ಥಳೀಯ ಆಡಳಿತ ಮಂಡಳಿಯ ಜೊತೆ ಮೇಯರ್ ವಿಲಿಯಂ ಚರ್ಚಿಸಿ ಈ ನಿರ್ಧಾರ ಕೈಗೊಂಡಿದ್ದಾರೆ.

ಇದೀಗ 2019ರ ಮೇ 12 ವಿಜಯ್ ಪ್ರಕಾಶ್ ಡೇ ಎಂದು ಷಾರ್ಲೆಟ್ ನಗರದ ಸರ್ಕಾರಿ ದಾಖಲೆಯಲ್ಲಿ ನಮೂದಿಸಲಾಗಿದೆ. ಪ್ರತಿವರ್ಷ ಈ ದಿನವನ್ನು ವಿಜಯಪ್ರಕಾಶ್ ಡೇ ಎಂದು ಆಚರಿಸಲು ನಾರ್ತ್ ಕರೊಲಿನಾದ ಷಾರ್ಲೆಟ್ ನಗರದ ಆಡಳಿತ ಮಂಡಳಿ ಅಧಿಕೃತ ಪ್ರಕಟಣೆ ಹೊರಡಿಸಿದೆ.

Vishwa News 24

Recent Posts

ಕುಂದಾಪುರ: ಕಾಲೇಜಿಗೆಂದು ತೆರಳಿದ್ದ ಯುವಕ ನಾಪತ್ತೆ – vishwanews24

ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು…

20 hours ago

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ – vishwanews24

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮೈಸೂರು:…

20 hours ago

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ – vishwanews24

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ ಉಡುಪಿ ಮೂಲದ ಸ್ಪೂರ್ತಿ…

20 hours ago

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ – vishwanews24

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ…

21 hours ago

ಬಿಡದಿ ಟೌನ್ ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ – vishwanews24

ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು : ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ…

21 hours ago

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು – vishwanews24

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ…

21 hours ago