Featured

ಮೇ.14 ರಂದು ಕಾಪುದ ಪಿಲಿಕೋಲ – Vishwanews24

ಮೇ.14 ರಂದು ಕಾಪುದ ಪಿಲಿಕೋಲ – Vishwanews24

ಕಾಪು : ಕಾಪುವಿನಲ್ಲಿ ವಾರ್ಷಿಕವಾಗಿ ನಡೆಯುವ ಕಾಪುದ ಪಿಲಿಕೋಲ ಈ ಬಾರಿ ಮೇ.14 ರಂದು ನಡೆಯಲಿದೆ.

ಈ ಹಿನ್ನೆಲೆಯಲ್ಲಿ ಕಾಪುದ ಪಿಲಿಕೋಲಕ್ಕೆ ಪೂರ್ವಭಾವಿಯಾಗಿ ಕಾಪುವಿನ ಮೂರೂ ಮಾರಿಗುಡಿಗಳಲ್ಲಿ ನಿನ್ನೆ ಪ್ರಾರ್ಥನೆಯೊಂದಿಗೆ ಅಭಯ ಪ್ರಸಾದ ಪಡೆಯಲಾಯಿತು. ಪಿಲಿಕೋಲದ ಸಿದ್ಧತೆಯಲ್ಲಿರುವ ಕಾಪುವಿನ ಶ್ರೀ ಬ್ರಹ್ಮಮುಗ್ಗೆರ್ಕಳ ಹುಲಿಚಂಡಿ ದೈವಸ್ಥಾನದ ಆಡಳಿತ ಮಂಡಳಿ, ಕಾಣಿಕೆ ಮನೆತನದವರು, ಗುರಿಕಾರರು ಮತ್ತು ಹತ್ತು ಸಮಸ್ತರು ಜೊತೆಗೂಡಿ ಮಂಗಳವಾರ ಕಾಪು ಹಳೇ ಮಾರಿಗುಡಿ, ಹೊಸ ಮಾರಿಗುಡಿ ಮತ್ತು 3ನೇ ಮಾರಿಗುಡಿಗೆ ತೆರಳಿ ಮಾರಿಯಮ್ಮ ದೇವಿಯ ಬಳಿ ಪ್ರಾರ್ಥನೆ ಸಲ್ಲಿಸಿದರು.

ಈ ಬಗ್ಗೆ ಮಾಹಿತಿ ನೀಡಿರುವ ದೊರೆಕಳಗುತ್ತು ಬಾಲಕೃಷ್ಣ ಶೆಟ್ಟಿ ಅವರು, ಕಾಪುವಿನಲ್ಲಿ ವಾರ್ಷಿಕವಾಗಿ ನಡೆಯುವ ಪಿಲಿಕೋಲವು ಧಾರ್ಮಿಕ ಮತ್ತು ಜನಪದ ಆಚರಣೆಗಳ ಜೀವಂತ ಉದಾಹರಣೆಯಾಗಿದೆ. ಪಿಲಿ ಕೋಲದ ಮೂಲಕವಾಗಿ ತುಳುನಾಡಿನ ಸಂಸ್ಕೃತಿ, ಸಂಪ್ರದಾಯ, ನಂಬಿಕೆ, ನಡವಳಿಕೆ ಸಹಿತವಾಗಿ ಸತ್ಯದ ಅನಾವರಣಗೊಳ್ಳುತ್ತದೆ. ಅದಕ್ಕೆ ಪೂರ್ವದಲ್ಲಿ ಮೂರೂ ಮಾರಿಗುಡಿಗೂ ತೆರಳಿ ಪಿಲಿಕೋಲ ಸುಸೂತ್ರವಾಗಿ ನಡೆಯುವಂತಾಗಲು ಉತ್ತಮ ಪ್ರಸಾದ ನೀಡುವಂತೆ ಪ್ರಾರ್ಥಿಸುವುದಕ್ಕಾಗಿ ಮಾರಿಯಮ್ಮನ ಸನ್ನಿಧಿಗೆ ಆಗಮಿಸಿದ್ದೇವೆ. ಇಲ್ಲಿ ಒಳ್ಳೆಯ ಪ್ರಸಾದ ಸಿಕ್ಕಿದೆ. ಐದು ದಿನಗಳ ಜಾತ್ರೆಯನ್ನು ಉತ್ತಮ ರೀತಿಯಲ್ಲಿ ನಡೆಸಿಕೊಡುವುದಾಗಿ ಮಾರಿಯಮ್ಮ ದೇವಿಯ ಅಭಯ ದೊರಕಿದೆ ಎಂದು ತಿಳಿಸಿದ್ದಾರೆ.

ಇತಿಹಾಸ ಪ್ರಸಿದ್ಧವಾಗಿರುವ ಕಾಪುವಿನ ಪಿಲಿಕೋಲದಲ್ಲಿ ಭೂತ ನರ್ತಕ (ಪಿಲಿ ವೇಷಧಾರಿ) ಯಾರು ಎನ್ನುವುದು ಹಳೇ ಮಾರಿಯಮ್ಮ ದೇವಿಯ ಸನ್ನಿಧಿಯಲ್ಲಿ ನಿರ್ಧಾರವಾಗುತ್ತದೆ. ಪಿಲಿಕೋಲ ನಡೆಯುವ ಮುಂಚಿನ ಮಂಗಳವಾರ ಮೂರೂ ಮಾರಿಗುಡಿಗಳಿಗೆ ತೆರಳಿ ಮಾರಿಯಮ್ಮನ ಅಭಯ ಪಡೆಯುವ ಸಂಪ್ರದಾಯವಿದೆ. ಮೂರೂ ಮಾರಿಗುಡಿಗಳಲ್ಲೂ ಪ್ರಾರ್ಥನೆ ಸಲ್ಲಿಸಿದ ಬಳಿಕ, ಪಿಲಿ ಭೂತದ ನರ್ತಕನಿಗೆ ಮಾರಿಯಮ್ಮ ದೇವಿಯ ದರ್ಶನ ಪಾತ್ರಿಯು ಪಿಲಿ ಕೋಲ ಸುಸೂತ್ರವಾಗಿ ನಡೆಯಲಿ ಎಂಬ ಅಭಯ ಪ್ರಸಾದವನ್ನು ನೀಡಿ, ಸಂಪ್ರದಾಯ ಬದ್ಧವಾಗಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಹೋಗುವಂತೆ ಸೂಚನೆ ನೀಡಲಾಗುತ್ತದೆ.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

15 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

15 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

16 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

16 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

16 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago