Featured

ಮೇ 23 ಅನ್ನು ‘ಮೋದಿ ದಿವಸ್​’ ಅಥವಾ ಲೋಕ ಕಲ್ಯಾಣ್ ದಿವಸ್ ಎಂದು ಆಚರಿಸಬೇಕು: ಬಾಬಾ ರಾಮ್​ದೇವ್ -Vishwanews24

ನವದೆಹಲಿ : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದು, ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾದ ಮೇ. 23 ನ್ನು `ಮೋದಿ ದಿವಸ್’ ಆಗಿ ಆಚರಿಸಬೇಕೆಂದು ಯೋಗ ಗುರು ಬಾಬಾ ರಾಮ್ ದೇವ್ ಹೇಳಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದು, ಕೋಟ್ಯಾಂತರ ಜನರ ವಿಶ್ವಾಸಗಳಿಸಿರುವ ಪ್ರಧಾನಿ ಮೋದಿಯನ್ನು ಬಾಬಾ ರಾಮ್ ದೇವ್ ಹಾಡಿ ಹೊಗಳಿದ್ದಾರೆ.

ಮೇ 23 ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ ಬಹುದೊಡ್ಡ ಜನಾದೇಶವನ್ನು ಗೆದ್ದ ಐತಿಹಾಸಿಕ ದಿನವಾಗಿದೆ. ಈ ದಿನವನ್ನು ಮೋದಿ ದಿವಸ್ ಅಥವಾ ಲೋಕ ಕಲ್ಯಾಣ್ ದಿವಸ್ ಎಂದು ಆಚರಿಸಬೇಕು ಎಂದರು.

ಸುದ್ದಿಗಾರೊಂದಿಗೆ ಮಾತನಾಡಿದ ಬಾಬಾ ರಾಮ್ ದೇವ್ ಅವರು, ಮೋದಿ ಕೋಟ್ಯಂತರ ಜನರ ನಂಬಿಕೆ ಗೆದ್ದಿದ್ದಾರೆ. ಒಂದು ಕಡೆ ಮಹಾಘಟ್​ಬಂಧನ್​, ಇನ್ನೊಂದು ಕಡೆ ಮೋದಿ ಚುನಾವಣೆಯಲ್ಲಿ ಹೋರಾಟ ನಡೆಸಿದರು. ಆದರೂ ಉತ್ತರ ಪ್ರದೇಶದಲ್ಲಿ ಮೋದಿ ಅವರು ಭರ್ಜರಿ ಜಯ ಸಾಧಿಸಿದರು. ಜನತೆ ಅವರ ಕೈಯಲ್ಲಿ ಸುರಕ್ಷಿತವಾಗಿದ್ದಾರೆ ಎಂದರು.

Vishwa News 24

Recent Posts

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

3 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

3 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

3 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

3 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

4 hours ago

ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ – vishwanews24

ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ.…

4 hours ago