ಉಡುಪಿ: ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮಗದೊಮ್ಮೆ ಭರ್ಜರಿ ವಿಜಯ ದಾಖಲಿಸಿರುವುದು ಉಡುಪಿ ಜಿಲ್ಲಾ ಬಿಜೆಪಿಗೆ ಹೆಮ್ಮೆ ತಂದಿದೆ. ಈ ಪ್ರಯುಕ್ತ ಮೇ 25, ಗುರುವಾರ ಸಂಜೆ ಗಂಟೆ 5.30ಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯ ಬಳಿ ನಿರ್ಮಿಸಿರುವ ವೇದಿಕೆಯಲ್ಲಿ ಉಡುಪಿ ಜಿಲ್ಲೆಯ ನೂತನ ಶಾಸಕರುಗಳಾದ ಯಶ್ಪಾಲ್ ಎ. ಸುವರ್ಣ ಉಡುಪಿ, ಗುರ್ಮೆ ಸುರೇಶ್ ಶೆಟ್ಟಿ ಕಾಪು, ವಿ.ಸುನೀಲ್ ಕುಮಾರ್ ಕಾರ್ಕಳ, ಕಿರಣ್ ಕುಮಾರ್ ಕೊಡ್ಗಿ ಕುಂದಾಪುರ ಮತ್ತು ಗುರುರಾಜ್ ಶೆಟ್ಟಿ ಗಂಟಿಹೊಳಿ ಬೈಂದೂರು ಇವರನ್ನು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಅಭಿನಂದಿಸುವ ಜೊತೆಗೆ ಸಮಸ್ತ ಕಾರ್ಯಕರ್ತ ಬಂಧುಗಳು ಹಾಗೂ ಮತದಾರ ಬಾಂಧವರಿಗೆ ಕೃತಜ್ಞತೆ ಸಲ್ಲಿಸುವ ‘ಅಭಿನಂದನಾ ಸಮಾರಂಭ’ ನಡೆಯಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರು, ವಿವಿಧ ಸ್ತರದ ಪದಾಧಿಕಾರಿಗಳು, ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳ ಕಾರ್ಯಕರ್ತ ಬಂಧುಗಳು, ಜನಪ್ರತಿನಿಧಿಗಳು ಮತ್ತು ಪಕ್ಷದ ಹಿತೈಷಿಗಳು ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ ನವದೆಹಲಿ: ವಾಣಿಜ್ಯ ಬಳಕೆಯ ಎಲ್ಪಿಜಿ ಪೂರೈಕೆ…
ಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್ಪಿಜಿ ದರ 10 ರೂ. ಇಳಿಕೆ ಬೆಂಗಳೂರು: ನಿರಂತರ ಎಲ್ಪಿಜಿ ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ…
ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ - ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ ಬೆಂಗಳೂರು:…
ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ - ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…
ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…