ಬೆಂಗಳೂರು: ಲೋಕಸಭಾ ಚುನಾವಣೆಯ ಬಳಿಕ ನಾಪತ್ತೆಯಾಗಿದ್ದ ಪ್ರಜ್ವಲ್ ರೇವಣ್ಣ ಕೊನೆಗೂ ಪ್ರತ್ಯಕ್ಷರಾಗಿದ್ದಾರೆ. ಮೇ 31 ರಂದು ನಾನು ರಾಜ್ಯಕ್ಕೆ ಬರುತ್ತೇನೆ ಎಂದು ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.
ವಿದೇಶದಿಂದ ವಿಡಿಯೋ ರಿಲೀಸ್ ಮಾಡಿದ ಅವರು ಬೆಂಗಳೂರಿಗೆ ಬಂದು ಶುಕ್ರವಾರ ಬೆಳಗ್ಗೆ 10 ಗಂಟೆಗೆ ಎಸ್ಐಟಿ (SIT) ಮುಂದೆ ಹಾಜರಾಗಿ ಉತ್ತರ ನೀಡುತ್ತೇನೆ ಎಂದು ತಿಳಿಸಿದ್ದಾರೆ. ಅಷ್ಟೇ ಅಲ್ಲದೇ ಕುಟುಂಬಸ್ಥರು ಮತ್ತು ರಾಜ್ಯದ ಜನತೆಯಲ್ಲಿ ಪ್ರಜ್ವಲ್ ರೇವಣ್ಣ ಕ್ಷಮೆ ಕೇಳಿದ್ದಾರೆ.
ಹೇಳಿಕೆಯಲ್ಲಿ ಏನಿದೆ?
ವಿದೇಶಕ್ಕೆ ಹೋಗುವ ಬಗ್ಗೆ ಮೊದಲೇ ಪ್ಲಾನ್ ಆಗಿತ್ತು. ವಿದೇಶಕ್ಕೆ ಹೋಗುವಾಗ ನನ್ನ ಮೇಲೆ ಯಾವುದೇ ಆರೋಪ ಇರಲಿಲ್ಲ. ನಾನು ವಿದೇಶದಲ್ಲಿದ್ದಾಗ ಯೂಟ್ಯೂಬ್ ನ್ಯೂಸ್ ನೋಡಿ ನನ್ನ ಮೇಲೆ ಗಂಭೀರ ಆರೋಪ ಬಂದಿರುವುದು ಕಂಡುಬಂದಿದೆ. ಇದಾದ ನಂತರ ನನ್ನ ಹೆಸರನ್ನು ರಾಜಕೀಯವಾಗಿ ಬಳಸಿಕೊಂಡಿದ್ದಾರೆ. ಎಸ್ಐಟಿ ನೋಟಿಸ್ ನೀಡಿದ ವಿಚಾರ ಗೊತ್ತಾಯಿತು. ನಾನು ರಾಜಕೀಯವಾಗಿ ಬೆಳೆಯಬಾರದು ಎಂಬ ಕಾರಣಕ್ಕೆ ನನ್ನ ಮೇಲೆ ಪಿತೂರಿ ಮಾಡಿದ್ದಾರೆ.
ನನ್ನ ಮೇಲೆ ರಾಜಕೀಯ ಪಿತೂರಿ ಮಾಡಲಾಗಿದೆ. ಚುನಾವಣೆ ಸಮಯದಲ್ಲಿ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರ ಆರೋಪದಿಂದ ನಾನು ಮಾನಸಿಕ ಖಿನ್ನತೆಗೆ ಜಾರಿದ್ದೆ. ಈ ಖಿನ್ನತೆಯಿಂದ ಹೊರ ಬರದಲು ಕೆಲ ಸಮಯ ಬೇಕಿತ್ತು. ನನಗೆ ನ್ಯಾಯಾಲಯದ ಮೇಲೆ ನಂಬಿಕೆಯಿದೆ. ಈ ಸುಳ್ಳು ಪ್ರಕರಣದಿಂದ ನಾನು ಹೊರ ಬರುತ್ತೇನೆ. ಬಂದ ಮೇಲೆ ಎಲ್ಲರಿಗೂ ಉತ್ತರ ನೀಡುತ್ತೇನೆ ಎಂದು ಹೇಳಿದ್ದಾರೆ
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…