ರಾಯಚೂರು: ಮೈಕ್ರೋ ಫೈನಾನ್ಸ್ಗಳ ಕಿರುಕುಳಕ್ಕೆ ಬೇಸತ್ತು ಶರಣಬಸವ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ರಾಯಚೂರು ಜಿಲ್ಲೆಯ ಕಪಗಲ್ ಗ್ರಾಮದಲ್ಲಿ ನಡೆದಿದೆ. ಮನೆಗೆ ಆಸರೆಯಾಗಿದ್ದ ವ್ಯಕ್ತಿಯನ್ನು ಕಳೆದುಕೊಂಡ ಕುಟುಂಬ ಹೋರಾಟಕ್ಕೆ ಮುಂದಾಗಿದೆ. ಪತಿ ಸಾವಿನಿಂದ ಕಣ್ಣೀರಲ್ಲಿ ಕೈತೊಳೆಯುತ್ತಿರುವ ಮೃತನ ಪತ್ನಿ ಪಾರ್ವತಿ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಮಾಂಗಲ್ಯ ಸರ ಹಾಗೂ ಮನವಿ ಪತ್ರವನ್ನು ಸ್ಪೀಡ್ ಪೋಸ್ಟ್ ಮಾಡಿದ್ದಾರೆ.
ಮೇಸ್ತ್ರಿ ಕೆಲಸ ಜೊತೆಗೆ ಟಂಟಂ ಚಾಲಕರಾಗಿದ್ದ ಶರಣಬಸವ, ವಿವಿಧ ಫೈನಾನ್ಸ್ಗಳಲ್ಲಿ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದರು. ಆದರೆ ಅವುಗಳ ಟಾರ್ಚರ್ ತಾಳದೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮನೆಗೆ ಆಧಾರವಾಗಿದ್ದ ಪತಿಯನ್ನು ಕಳೆದುಕೊಂಡಿರುವುದರಿಂದ ಪರಿಹಾರಕ್ಕೆ ಮನೆಯವರು ಮನವಿ ಮಾಡಿದ್ದಾರೆ. ಸಾಲ ವಸೂಲಿಗಾಗಿ ಕಿರುಕುಳ ಕೊಡುವ ಮೈಕ್ರೋ ಫೈನಾನ್ಸ್ಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಸಾಲ ತೀರಿಸಲು ಸಮಯಾವಕಾಶವನ್ನೂ ಕೊಡದೆ ಮನೆ ಬಾಗಿಲು ಬಡಿಯುತ್ತಿರುವುದಕ್ಕೆ ಬಡ ಜನರು ಕಂಗಾಲಾಗಿದ್ದಾರೆ. ಸರ್ಕಾರ ಹಾಗೂ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…