ಬೆಂಗಳೂರು: ಬಲವಂತವಾಗಿ ಸಾಲ ವಸೂಲಿ ಮಾಡುವ ಮೈಕ್ರೋ ಫೈನಾನ್ಸ್ ಕಂಪನಿಯ ಸಿಬ್ಬಂದಿ ವಿರುದ್ಧ 3 ವರ್ಷ ಇದ್ದ ಶಿಕ್ಷೆಯ ಅವಧಿಯನ್ನು 10 ವರ್ಷಕ್ಕೆ ಏರಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.
ಮಾಧ್ಯಮಗಳೊಂದಿಗೆ ಮಾತನಾಡಿ, ಕಿರುಕುಳ ನೀಡಿದವರಿಗೆ 3 ವರ್ಷ ಶಿಕ್ಷೆ ಇತ್ತು. ಈಗ ಅದನ್ನು 10 ವರ್ಷಕ್ಕೆ ಹೆಚ್ಚಳ ಮಾಡಿದ್ದೇವೆ. ದಂಡ ಕೂಡಾ 5 ಲಕ್ಷ ಮಾಡಿದ್ದೇವೆ. ಕಿರುಕುಳ ಕೊಡೋರಿಗೆ ಕಾನೂನಿನ ಬಿಸಿ ತಟ್ಟಬೇಕು ಎಂದು ಹೇಳಿದರು.
ಕಾಟಾಚಾರಕ್ಕೆ ಕಾನೂನು ಮಾಡಿದ್ರೆ ಕಿರುಕುಳ ಪ್ರಕರಣ ನಿಲ್ಲುವುದಿಲ್ಲ. ಇದಕ್ಕಾಗಿ ಫೈನ್ ಮತ್ತು ಶಿಕ್ಷೆ ಎರಡನ್ನೂ ಜಾಸ್ತಿ ಮಾಡಿದ್ದೇವೆ. ಇಂತಹ ಕಠಿಣ ಕಾನೂನಿಂದ ಕಿರುಕುಳ ನಿಲ್ಲುತ್ತದೆ. ಆ ಉದ್ದೇಶದಿಂದ ಶಿಕ್ಷೆ ಪ್ರಮಾಣ ಜಾಸ್ತಿ ಮಾಡಿದ್ದೇವೆ. ರಾಜ್ಯಪಾಲರಿಗೆ ಬಿಲ್ ಕಳಿಸಿದ್ದೇವೆ. ರಾಜ್ಯಪಾಲರು ಊರಿಗೆ ಹೋಗಿದ್ದಾರೆ ಎನ್ನುತ್ತಿದ್ದಾರೆ. ಅವರು ಬಂದು ನೋಡಿ ಸಹಿ ಮಾಡಿದ ಕೂಡಲೇ ಸುಗ್ರೀವಾಜ್ಞೆ ಜಾರಿ ಆಗಲಿದೆ ಎಂದು ಹೇಳಿದರು.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…