Featured

ಮೈಕ್ರೋ ಫೈನಾನ್ಸ್  ಕಿರುಕುಳ ತಡೆಗೆ ಕಠಿಣ ಕಾನೂನು ಜಾರಿ : ಗೃಹ ಸಚಿವ ಪರಮೇಶ್ವರ್ – vishwanews24

ಮೈಕ್ರೋ ಫೈನಾನ್ಸ್ ಕಿರುಕುಳ ಕಡಿವಾಣಕ್ಕೆ ಸರ್ಕಾರ ಕಠಿಣ ಕಾನೂನು ತರುತ್ತದೆ : ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಮೈಕ್ರೋ ಫೈನಾನ್ಸ್  ಕಿರುಕುಳ ತಡೆಗೆ ಕಠಿಣ ಕಾನೂನು ಜಾರಿ ಮಾಡುವುದಾಗಿ ಗೃಹ ಸಚಿವ ಪರಮೇಶ್ವರ್  ತಿಳಿಸಿದ್ದಾರೆ.

ಮೈಕ್ರೋ ಫೈನಾನ್ಸ್ ಕಿರುಕುಳ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಮೈಕ್ರೋ ಫೈನಾನ್ಸ್‌ನಿಂದ ತೊಂದರೆ ಆಗುತ್ತಿದೆ ಎಂದು ರಾಜ್ಯಾದ್ಯಂತ ದೂರು ದಾಖಲಾಗಿದೆ. ಮೈಕ್ರೋ ಫೈನಾನ್ಸ್ ಸಂಬಂಧ ಈಗ ಇರುವ ನಿಯಮಗಳು ಅಷ್ಟು ಕಠಿಣವಾಗಿ ಇಲ್ಲ ಅಂತ ನಮ್ಮ ಗಮನಕ್ಕೆ ಬಂದಿದೆ ಎಂದರು.

ಬ್ಯಾಂಕ್ ನಿಯಮಗಳ ಪ್ರಕಾರ ಹಣ ರಿಕವರಿ ಮಾಡಲು ಕಾನೂನು ಇದೆ. ಅದೇ ರೀತಿ ಅವರ ರಕ್ಷಣೆ ಮಾಡಲು ಕಾನೂನು ಇದೆ. ಈಗ ಇರುವ ಕಾನೂನು ಸಾಕಾಗುತ್ತಿಲ್ಲ. ಕಠಿಣವಾಗಿ ಇಲ್ಲ ಅಂತ ನಮ್ಮ ಇಲಾಖೆಯಿಂದ ಅನೇಕ ವರದಿಗಳು ಬಂದಿವೆ. ಅದಕ್ಕಾಗಿ ಮುಂದಿನ ದಿನಗಳಲ್ಲಿ ಕಠಿಣ ಕಾನೂನು ಮಾಡೋ ಅಗತ್ಯವಿದೆ. ಸರ್ಕಾರ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣಕ್ಕೆ ಕಠಿಣ ಕಾನೂನು ತರುತ್ತದೆ ಅಂತ ತಿಳಿಸಿದರು.

ಸಾಲ ತಗೊಂಡು ಸಾಲ ವಾಪಸ್ ಕಟ್ಟದೇ ಹೋದ್ರೆ ಅವರು ಸಾಲಗಾರರ ಬಳಿಯೇ ಕ್ರಮ ತೆಗೆದುಕೊಳ್ಳಬಹುದು ಅಂತ ಫೈನಾನ್ಸ್ ಅವರು ಸಹಿ ಹಾಕಿಸಿಕೊಂಡಿರುತ್ತಾರೆ. ಸಾಲ ತಗೋಳೋವಾಗ ಹತ್ತಾರು ಕಡೆ ಸಹಿ ತೆಗೆದುಕೊಂಡಿರುತ್ತಾರೆ. ಆ ಸಹಿ ಯಾಕೆ‌ ಮಾಡಿರುತ್ತೇವೆ ಅಂತಾನೂ ಗ್ರಾಹಕರಿಗೆ ಗೊತ್ತಿರೋದಿಲ್ಲ .ಅದು ಕಮಿಟ್ ಮೆಂಟ್ ಆಗಿರುತ್ತದೆ. ಆ ಆಧಾರದಲ್ಲಿ ಮನೆ ರೇಡ್ ಮಾಡೋದು, ಮನೆ ಸೀಜ್ ಮಾಡೋದು‌ ಎಲ್ಲಾ ಮಾಡ್ತಿದ್ದಾರೆ.ಇದಕ್ಕೆ ‌ಕಾನೂನಿನಲ್ಲೆ ಪರಿಹಾರ ಕಂಡುಹಿಡಿಯಬೇಕು ಎಂದರು. ಇದನ್ನೂ ಓದಿ: ಟೀ ಮಾರುವವನ ಯಡವಟ್ಟಿಗೆ 13 ಮಂದಿ ಬಲಿ

ಈಗಾಗಲೇ ಕಾನೂನು ಸಚಿವರು ಅದರ ಬಗ್ಗೆ ಗಮನಹರಿಸಿದ್ದಾರೆ. ಸಿಎಂ ಸಿದ್ದರಾಮಯ್ಯನವರು ಕಾನೂನು ಬದಲಾವಣೆ ಮಾಡಿ ಕಠಿಣ ನಿಯಮ ಜಾರಿ ಮಾಡುವುದಾಗಿ ಹೇಳಿದ್ದಾರೆ. ನಾಳೆ ಸಿಎಂ ನೇತೃತ್ವದಲ್ಲಿ ಸಭೆ ನಡೆಯಲಿದೆ. ಆ ಸಭೆಯಲ್ಲಿ ಚರ್ಚೆ ಮಾಡಿ ಏನೆಲ್ಲ ಕೇಸ್ ಗಳು ಅಗಿವೆ. ಕಾನೂನು ಕಠಿಣವಾಗಿ ಇಲ್ಲ ಅನ್ನೋದನ್ನು ಪರಿಶೀಲನೆ ‌ಮಾಡ್ತೀವಿ. ಈಗ ಆಗಿರುವ ಕೇಸ್ ಗಳ ಬಗ್ಗೆಯೂ ಸಭೆಯಲ್ಲಿ ಪರಿಶೀಲನೆ ಮಾಡುತ್ತೇವೆ ಅಂತ ತಿಳಿಸಿದರು.

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

13 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

16 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

19 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

20 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

20 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

20 hours ago