Featured

ಮೈಕ್ರೋ ಫೈನಾನ್ಸ್  ಕಿರುಕುಳ ತಡೆಗೆ ಕಠಿಣ ಕಾನೂನು ಜಾರಿ : ಗೃಹ ಸಚಿವ ಪರಮೇಶ್ವರ್ – vishwanews24

ಮೈಕ್ರೋ ಫೈನಾನ್ಸ್ ಕಿರುಕುಳ ಕಡಿವಾಣಕ್ಕೆ ಸರ್ಕಾರ ಕಠಿಣ ಕಾನೂನು ತರುತ್ತದೆ : ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಮೈಕ್ರೋ ಫೈನಾನ್ಸ್  ಕಿರುಕುಳ ತಡೆಗೆ ಕಠಿಣ ಕಾನೂನು ಜಾರಿ ಮಾಡುವುದಾಗಿ ಗೃಹ ಸಚಿವ ಪರಮೇಶ್ವರ್  ತಿಳಿಸಿದ್ದಾರೆ.

ಮೈಕ್ರೋ ಫೈನಾನ್ಸ್ ಕಿರುಕುಳ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಮೈಕ್ರೋ ಫೈನಾನ್ಸ್‌ನಿಂದ ತೊಂದರೆ ಆಗುತ್ತಿದೆ ಎಂದು ರಾಜ್ಯಾದ್ಯಂತ ದೂರು ದಾಖಲಾಗಿದೆ. ಮೈಕ್ರೋ ಫೈನಾನ್ಸ್ ಸಂಬಂಧ ಈಗ ಇರುವ ನಿಯಮಗಳು ಅಷ್ಟು ಕಠಿಣವಾಗಿ ಇಲ್ಲ ಅಂತ ನಮ್ಮ ಗಮನಕ್ಕೆ ಬಂದಿದೆ ಎಂದರು.

ಬ್ಯಾಂಕ್ ನಿಯಮಗಳ ಪ್ರಕಾರ ಹಣ ರಿಕವರಿ ಮಾಡಲು ಕಾನೂನು ಇದೆ. ಅದೇ ರೀತಿ ಅವರ ರಕ್ಷಣೆ ಮಾಡಲು ಕಾನೂನು ಇದೆ. ಈಗ ಇರುವ ಕಾನೂನು ಸಾಕಾಗುತ್ತಿಲ್ಲ. ಕಠಿಣವಾಗಿ ಇಲ್ಲ ಅಂತ ನಮ್ಮ ಇಲಾಖೆಯಿಂದ ಅನೇಕ ವರದಿಗಳು ಬಂದಿವೆ. ಅದಕ್ಕಾಗಿ ಮುಂದಿನ ದಿನಗಳಲ್ಲಿ ಕಠಿಣ ಕಾನೂನು ಮಾಡೋ ಅಗತ್ಯವಿದೆ. ಸರ್ಕಾರ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣಕ್ಕೆ ಕಠಿಣ ಕಾನೂನು ತರುತ್ತದೆ ಅಂತ ತಿಳಿಸಿದರು.

ಸಾಲ ತಗೊಂಡು ಸಾಲ ವಾಪಸ್ ಕಟ್ಟದೇ ಹೋದ್ರೆ ಅವರು ಸಾಲಗಾರರ ಬಳಿಯೇ ಕ್ರಮ ತೆಗೆದುಕೊಳ್ಳಬಹುದು ಅಂತ ಫೈನಾನ್ಸ್ ಅವರು ಸಹಿ ಹಾಕಿಸಿಕೊಂಡಿರುತ್ತಾರೆ. ಸಾಲ ತಗೋಳೋವಾಗ ಹತ್ತಾರು ಕಡೆ ಸಹಿ ತೆಗೆದುಕೊಂಡಿರುತ್ತಾರೆ. ಆ ಸಹಿ ಯಾಕೆ‌ ಮಾಡಿರುತ್ತೇವೆ ಅಂತಾನೂ ಗ್ರಾಹಕರಿಗೆ ಗೊತ್ತಿರೋದಿಲ್ಲ .ಅದು ಕಮಿಟ್ ಮೆಂಟ್ ಆಗಿರುತ್ತದೆ. ಆ ಆಧಾರದಲ್ಲಿ ಮನೆ ರೇಡ್ ಮಾಡೋದು, ಮನೆ ಸೀಜ್ ಮಾಡೋದು‌ ಎಲ್ಲಾ ಮಾಡ್ತಿದ್ದಾರೆ.ಇದಕ್ಕೆ ‌ಕಾನೂನಿನಲ್ಲೆ ಪರಿಹಾರ ಕಂಡುಹಿಡಿಯಬೇಕು ಎಂದರು. ಇದನ್ನೂ ಓದಿ: ಟೀ ಮಾರುವವನ ಯಡವಟ್ಟಿಗೆ 13 ಮಂದಿ ಬಲಿ

ಈಗಾಗಲೇ ಕಾನೂನು ಸಚಿವರು ಅದರ ಬಗ್ಗೆ ಗಮನಹರಿಸಿದ್ದಾರೆ. ಸಿಎಂ ಸಿದ್ದರಾಮಯ್ಯನವರು ಕಾನೂನು ಬದಲಾವಣೆ ಮಾಡಿ ಕಠಿಣ ನಿಯಮ ಜಾರಿ ಮಾಡುವುದಾಗಿ ಹೇಳಿದ್ದಾರೆ. ನಾಳೆ ಸಿಎಂ ನೇತೃತ್ವದಲ್ಲಿ ಸಭೆ ನಡೆಯಲಿದೆ. ಆ ಸಭೆಯಲ್ಲಿ ಚರ್ಚೆ ಮಾಡಿ ಏನೆಲ್ಲ ಕೇಸ್ ಗಳು ಅಗಿವೆ. ಕಾನೂನು ಕಠಿಣವಾಗಿ ಇಲ್ಲ ಅನ್ನೋದನ್ನು ಪರಿಶೀಲನೆ ‌ಮಾಡ್ತೀವಿ. ಈಗ ಆಗಿರುವ ಕೇಸ್ ಗಳ ಬಗ್ಗೆಯೂ ಸಭೆಯಲ್ಲಿ ಪರಿಶೀಲನೆ ಮಾಡುತ್ತೇವೆ ಅಂತ ತಿಳಿಸಿದರು.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 hour ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 hour ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

4 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

5 hours ago