ಬೆಂಗಳೂರು : ಮೈಕ್ರೋ ಫೈನಾನ್ಸ್ ಕುರಿತಾದ ರಾಜ್ಯ ಸರಕಾರದ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ.
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ತಡೆಗಟ್ಟುವ ರಾಜ್ಯ ಸರಕಾರದ ಸುಗ್ರೀವಾಜ್ಞೆಗೆ ಅಂಕಿತ ಹಾಕದೆ ರಾಜ್ಯಪಾಲರು ವಾಪಸ್ ಕಳಿಸಿದ್ದಾರೆ. ಅಲ್ಲದೆ, ರಾಜ್ಯಪಾಲರು ಹಲವು ಸ್ಪಷ್ಟನೆ ಕೇಳಿದ್ದಾರೆ.
“ಸುಗ್ರೀವಾಜ್ಞೆಯಲ್ಲಿ ಸಾಲ ಪಡೆದವರ ರಕ್ಷಣೆಗೆ ಮಾತ್ರವೇ ಗಮನ ಹರಿಸಲಾಗಿದೆ. ಸಹಜ ನ್ಯಾಯದ ಅಡಿಯಲ್ಲಿ ಸಾಲ ಕೊಟ್ಟವರಿಗೆ ರಕ್ಷಣೆ ಕಾಣಿಸುತ್ತಿಲ್ಲ. ಸುದೀರ್ಘ ಅವಧಿಯಲ್ಲಿ ಇದು ಮಾರಕವಾಗಲಿದೆ. ಮೈಕ್ರೋ ಫೈನಾನ್ಸ್ 3 ಲಕ್ಷಕ್ಕಿಂತ ಜಾಸ್ತಿ ಸಾಲ ಕೊಡುವುದಿಲ್ಲ. ನೀವು ಐದು ಲಕ್ಷ ದಂಡ ಹೇಗೆ ಹಾಕುತ್ತೀರಾ” ಎಂದು ರಾಜ್ಯಪಾಲರು ಸರಕಾರವನ್ನು ಪ್ರಶ್ನೆ ಮಾಡಿದ್ದಾರೆ.
ಸುಗ್ರೀವಾಜ್ಞೆ ತಿರಸ್ಕರಿಸಲು ರಾಜ್ಯಪಾಲರ ಕಚೇರಿ ಕೊಟ್ಟ ಕಾರಣಗಳು ಹೀಗಿವೆ :
► ಸುಗ್ರೀವಾಜ್ಞೆಯಲ್ಲಿ ಹೇಳಲಾಗಿರುವ 10 ವರ್ಷಗಳ ಶಿಕ್ಷೆ ಹಾಗೂ 5 ಲಕ್ಷ ರೂ. ದಂಡ ವಿಪರೀತವಾಗಿದೆ.
► ಈಗ ಚಾಲ್ತಿಯಲ್ಲಿರುವ ಕಾನೂನನ್ನು ಉಪಯೋಗಿಸಿಕೊಂಡು ಪೊಲೀಸ್ ಇಲಾಖೆ ಪರಿಸ್ಥಿತಿಯನ್ನು ನಿಯಂತ್ರಿಸಬಹುದು.
► ಸುಗ್ರೀವಾಜ್ಞೆಯು ಮೈಕ್ರೊ ಫೈನಾನ್ಸ್ ಕಂಪನಿಗಳ ಮೇಲೆ ಋಣಾತ್ಮಕ ಪರಿಣಾಮ ಬೀರಲಿದೆ. ಬಡವರಿಗೂ ತೊಂದರೆಯಾಗಲಿದೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…