Featured

ಮೈತ್ರಿ ಇಲ್ಲದಿದ್ರೆ ದೇವೇಗೌಡರು 2 ಲಕ್ಷ ಲೀಡಲ್ಲಿ ಗೆಲ್ತಿದ್ರು ; ನಮಗೆ ಈ ಮೈತ್ರಿ ಸಹವಾಸವೇ ಬೇಡ : ಶಾಸಕ ಗೌರಿಶಂಕರ್ -Vishwanews24

ತುಮಕೂರು: ಸಿಎಂ ಎಚ್​.ಡಿ.ಕುಮಾರಸ್ವಾಮಿ, ಮಾಜಿ ಪ್ರಧಾನಿ ದೇವೇಗೌಡರು ನನ್ನನ್ನು ಪಕ್ಷದಿಂದ ಹೊರಹಾಕಿದರೂ ಪರವಾಗಿಲ್ಲ. ನಮಗೆ ಈ ಮೈತ್ರಿ ಸಹವಾಸ ಬೇಡವೇ ಬೇಡ ಎಂದು ತುಮಕೂರು ಗ್ರಾಮಾಂತರ ಶಾಸಕ ಗೌರಿಶಂಕರ್  ಹೇಳಿಕೆ ನೀಡಿದ್ದಾರೆ.

ತುಮಕೂರಿನಲ್ಲಿ ನಡೆದ ಆತ್ಮಾವಲೋಕನ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷದ ಮುಖಂಡರು ಮೈತ್ರಿ ಮಾಡಿಕೊಳ್ಳದೆ ಹೋಗಿದ್ದರೆ ಮಾಜಿ ಪ್ರಧಾನಿ ದೇವೇಗೌಡರು ಎರಡು ಲಕ್ಷ ಮತಗಳ ಅಂತರದಿಂದ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಗೆಲ್ಲುತ್ತಿದ್ದರು. ನಾನು ಹೇಳುವುದು ನಮಗೆ ಮೈತ್ರಿ ಬೇಡವೇ ಬೇಡ. ಇದರಿಂದಲೇ ನಮಗೆ ಹಿನ್ನಡೆಯಾಗಿದೆ ಎಂದರು.

ಅಲ್ಲಿ ಆಪರೇಷನ್ ಎಂದು ಒಬ್ಬರು ಬಾಂಬೆಗೆ ಹೋದರು. ದೆಹಲಿಗೆ ಹೋದರು. ಸರ್ಕಾರ ಬಿದ್ದು ಹೋಯಿತು. ಪ್ರತಿ ದಿನ ಇದೇ ಆಗಿದ್ದು, ಇದರಿಂದ ಜನರು ಬೇಸತ್ತು ಹೋಗಿದ್ದಾರೆ. ಇದೇ ಸೋಲಿಗೆ ಕಾರಣ ಎಂದು ಶಾಸಕ ಗೌರಿಶಂಕರ್ ಬೇಸರ ವ್ಯಕ್ತಪಡಿಸಿದರು.

ಸಿಎಂ ಎಚ್​ಡಿಕೆ ಮಾಧ್ಯಗಳೊಂದಿಗೆ ಮಾತನಾಡದಂತೆ ಜೆಡಿಎಸ್​ನ ಮುಖಂಡರಿಗೆ ತಾಕೀತು ಮಾಡಿದ್ದು ಮಾಧ್ಯಮಗಳ ಚರ್ಚೆಯಲ್ಲಿ ಪಾಲ್ಗೊಳ್ಳುವುದು, ಹೇಳಿಕೆಗಳನ್ನು ನೀಡುವುದು ಮಾಡಬಾರದು ಎಂದಿದ್ದರು. ಆದರೂ ಗೌರಿಶಂಕರ್​ ಇಂತಹ ಹೇಳಿಕೆ ನೀಡಿರುವುದು ರಾಜ್ಯ ಮೈತ್ರಿ ಸರ್ಕಾರದಲ್ಲಿ ಎಲ್ಲವೂ ಸರಿ ಇಲ್ಲ ಎಂಬುದು ತೋರಿಸುತ್ತಿದೆ. 

Vishwa News 24

Recent Posts

ಕುಂದಾಪುರ: ಕಾಲೇಜಿಗೆಂದು ತೆರಳಿದ್ದ ಯುವಕ ನಾಪತ್ತೆ – vishwanews24

ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು…

1 day ago

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ – vishwanews24

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮೈಸೂರು:…

1 day ago

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ – vishwanews24

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ ಉಡುಪಿ ಮೂಲದ ಸ್ಪೂರ್ತಿ…

1 day ago

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ – vishwanews24

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ…

1 day ago

ಬಿಡದಿ ಟೌನ್ ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ – vishwanews24

ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು : ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ…

1 day ago

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು – vishwanews24

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ…

1 day ago