Featured

ಮೈತ್ರಿ ಕಷ್ಟವಾದರೆ ಸ್ಪಷ್ಟವಾಗಿ ಹೇಳಿಬಿಡಿ ; ನಮ್ಮ ಸಹಕಾರಕ್ಕಾಗಿ ಬಿಜೆಪಿ ನಾಯಕರು ಕಾಯುತ್ತಿದ್ದಾರೆ : ದೇವೇಗೌಡ

ಬೆಂಗಳೂರು: ರಾಜ್ಯ ಕಾಂಗ್ರೆಸ್​ನಲ್ಲಿ ಇತ್ತೀಚಿನ ಕೆಲವು ದಿನಗಳಿಂದ ನಡೆಯುತ್ತಿರುವ ಬೆಳವಣಿಗೆಗಳಿಂದ ಬೇಸತ್ತಿರುವ ಜೆಡಿಎಸ್​ ವರಿಷ್ಠ ಮಾಜಿ ಪ್ರಧಾನ ಮಂತ್ರಿ ಎಚ್​.ಡಿ. ದೇವೇಗೌಡ ಅವರು ಕಾಂಗ್ರೆಸ್​ ಹೈಕಮಾಂಡ್​ಗೆ ಸ್ಪಷ್ಟ ಸಂದೇಶ ರವಾನಿಸಿದ್ದು, ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ ಎನ್ನಲಾಗಿದೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್​ ಅವರೊಂದಿಗೆ ಮಾತನಾಡಿದ್ದ ದೇವೇಗೌಡರು ಸರ್ಕಾರ ಸಮಸ್ಯೆ ಇಲ್ಲದೆ ನಡೆಯುವುದಾದರೆ ಮಾತ್ರ ಆಡಳಿತ ನಡೆಸೋಣ. ನಿಮಗೆ ಮೈತ್ರಿಯನ್ನು ನಿಭಾಯಿಸುವುದು ಕಷ್ಟವಾಗಿದ್ದರೆ ಸ್ಪಷ್ಟವಾಗಿ ಹೇಳಿಬಿಡಿ. ಮೈತ್ರಿ ಸಾಧ್ಯವಿಲ್ಲವಾದರೆ ಅವರವರ ದಾರಿ ಅವರವರದ್ದು. ಜತೆಗೆ ನಮ್ಮ ಸಹಕಾರಕ್ಕಾಗಿ ಬಿಜೆಪಿ ನಾಯಕರು ಕಾಯುತ್ತಿದ್ದಾರೆ ಎಂದು ಗೌಡರು ತಿಳಿಸಿದ್ದರು ಎಂದು ತಿಳಿದು ಬಂದಿದೆ.

ಸಮ್ಮಿಶ್ರ ಸರ್ಕಾರದ ವಿಚಾರವಾಗಿ ಮಾಜಿ ಪ್ರಧಾನಿ ದೇವೇಗೌಡರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಕ್ರೋಶಿತರಾಗಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ನಡೆಯುತ್ತಿರುವ ಎಲ್ಲಾ ರಾಜಕೀಯ ಬೆಳವಣಿಗೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕಾರಣವಾಗಿದ್ದಾರೆ. ಹಾಗಾಗಿ ಸಿದ್ದರಾಮಯ್ಯ ಅವರಿಗೆ ಶೀಘ್ರ ಕಡಿವಾಣ ಹಾಕಬೇಕು ಎಂದು ಕೈ ಹೈಕಮಾಂಡ್‍ಗೆ ದೇವೇಗೌಡರು ಸಂದೇಶ ರವಾನಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸರಿಪಡಿಸಬೇಕು. ಒಂದು ವೇಳೆ ಸಿದ್ದರಾಮಯ್ಯ ಸರಿ ಇಲ್ಲದಿದ್ದರೆ ಸಮ್ಮಿಶ್ರ ಸರ್ಕಾರಕ್ಕೆ ಖಂಡಿತವಾಗಿಯೂ ಉಳಿಗಾಲವಿಲ್ಲ. ನನ್ನ ಮಗ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿರುವ ದಿನದಿಂದ ಅವನಿಗೆ ಕಿರುಕುಳ ನಿಲ್ಲುತ್ತಿಲ್ಲ. ಬರೀ ಇದೆ ಆಯಿತು, ನೀವು ಮಧ್ಯಪ್ರವೇಶ ಮಾಡಿ ಸರಿ ಮಾಡಿ ಇಲ್ಲದಿದ್ದರೆ ನಮಗೂ ಗೊತ್ತಿದೆ ಎಂದು ಹೇಳಿದ್ದಾರೆ.

2019ರಲ್ಲಿ ಬರಲಿರುವ ಲೋಕಸಭೆ ಚುನಾವಣೆ ನಿಮಗೆ ಎಷ್ಟು ಮುಖ್ಯವೋ ನಮಗೂ ಕೂಡ ಅಷ್ಟೇ ಮುಖ್ಯವಾಗಿದೆ. ಕಾಂಗ್ರೆಸ್ ನಾಯಕರು ಮೇಲಾಟಗಳನ್ನು ನಿಲ್ಲಿಸದಿದ್ದರೆ ನಮಗೂ ದಾರಿ ಬದಲಿಸಲು ಗೊತ್ತಿದೆ ಎಂದು ಎಐಸಿಸಿ ನಾಯಕ ಗುಲಾಂ ನಭೀ ಅಜಾದ್  ಅವರಲ್ಲಿ ತಿಳಿಸಿದ್ದಾರೆ.

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

2 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

2 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

2 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

3 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

3 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

3 hours ago