ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಇತ್ತೀಚಿನ ಕೆಲವು ದಿನಗಳಿಂದ ನಡೆಯುತ್ತಿರುವ ಬೆಳವಣಿಗೆಗಳಿಂದ ಬೇಸತ್ತಿರುವ ಜೆಡಿಎಸ್ ವರಿಷ್ಠ ಮಾಜಿ ಪ್ರಧಾನ ಮಂತ್ರಿ ಎಚ್.ಡಿ. ದೇವೇಗೌಡ ಅವರು ಕಾಂಗ್ರೆಸ್ ಹೈಕಮಾಂಡ್ಗೆ ಸ್ಪಷ್ಟ ಸಂದೇಶ ರವಾನಿಸಿದ್ದು, ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ ಎನ್ನಲಾಗಿದೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ಮಾತನಾಡಿದ್ದ ದೇವೇಗೌಡರು ಸರ್ಕಾರ ಸಮಸ್ಯೆ ಇಲ್ಲದೆ ನಡೆಯುವುದಾದರೆ ಮಾತ್ರ ಆಡಳಿತ ನಡೆಸೋಣ. ನಿಮಗೆ ಮೈತ್ರಿಯನ್ನು ನಿಭಾಯಿಸುವುದು ಕಷ್ಟವಾಗಿದ್ದರೆ ಸ್ಪಷ್ಟವಾಗಿ ಹೇಳಿಬಿಡಿ. ಮೈತ್ರಿ ಸಾಧ್ಯವಿಲ್ಲವಾದರೆ ಅವರವರ ದಾರಿ ಅವರವರದ್ದು. ಜತೆಗೆ ನಮ್ಮ ಸಹಕಾರಕ್ಕಾಗಿ ಬಿಜೆಪಿ ನಾಯಕರು ಕಾಯುತ್ತಿದ್ದಾರೆ ಎಂದು ಗೌಡರು ತಿಳಿಸಿದ್ದರು ಎಂದು ತಿಳಿದು ಬಂದಿದೆ.
ಸಮ್ಮಿಶ್ರ ಸರ್ಕಾರದ ವಿಚಾರವಾಗಿ ಮಾಜಿ ಪ್ರಧಾನಿ ದೇವೇಗೌಡರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಕ್ರೋಶಿತರಾಗಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ನಡೆಯುತ್ತಿರುವ ಎಲ್ಲಾ ರಾಜಕೀಯ ಬೆಳವಣಿಗೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕಾರಣವಾಗಿದ್ದಾರೆ. ಹಾಗಾಗಿ ಸಿದ್ದರಾಮಯ್ಯ ಅವರಿಗೆ ಶೀಘ್ರ ಕಡಿವಾಣ ಹಾಕಬೇಕು ಎಂದು ಕೈ ಹೈಕಮಾಂಡ್ಗೆ ದೇವೇಗೌಡರು ಸಂದೇಶ ರವಾನಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸರಿಪಡಿಸಬೇಕು. ಒಂದು ವೇಳೆ ಸಿದ್ದರಾಮಯ್ಯ ಸರಿ ಇಲ್ಲದಿದ್ದರೆ ಸಮ್ಮಿಶ್ರ ಸರ್ಕಾರಕ್ಕೆ ಖಂಡಿತವಾಗಿಯೂ ಉಳಿಗಾಲವಿಲ್ಲ. ನನ್ನ ಮಗ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿರುವ ದಿನದಿಂದ ಅವನಿಗೆ ಕಿರುಕುಳ ನಿಲ್ಲುತ್ತಿಲ್ಲ. ಬರೀ ಇದೆ ಆಯಿತು, ನೀವು ಮಧ್ಯಪ್ರವೇಶ ಮಾಡಿ ಸರಿ ಮಾಡಿ ಇಲ್ಲದಿದ್ದರೆ ನಮಗೂ ಗೊತ್ತಿದೆ ಎಂದು ಹೇಳಿದ್ದಾರೆ.
2019ರಲ್ಲಿ ಬರಲಿರುವ ಲೋಕಸಭೆ ಚುನಾವಣೆ ನಿಮಗೆ ಎಷ್ಟು ಮುಖ್ಯವೋ ನಮಗೂ ಕೂಡ ಅಷ್ಟೇ ಮುಖ್ಯವಾಗಿದೆ. ಕಾಂಗ್ರೆಸ್ ನಾಯಕರು ಮೇಲಾಟಗಳನ್ನು ನಿಲ್ಲಿಸದಿದ್ದರೆ ನಮಗೂ ದಾರಿ ಬದಲಿಸಲು ಗೊತ್ತಿದೆ ಎಂದು ಎಐಸಿಸಿ ನಾಯಕ ಗುಲಾಂ ನಭೀ ಅಜಾದ್ ಅವರಲ್ಲಿ ತಿಳಿಸಿದ್ದಾರೆ.
ದರ್ಶನ್ ಪುತ್ರನಿದ್ದ ಕಾರು ಅಪಘಾತ : ವಿನೀಶ್ ವಾಹನ ಚಲಾಯಿಸಿಲ್ಲ: ವಿಜಯಲಕ್ಷ್ಮಿ ಸ್ಪಷ್ಟನೆ ಬೆಂಗಳೂರು: ನಟ ದರ್ಶನ್ ಅವರ ಪುತ್ರ…
ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮಸ್ಥಳ: ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಧರ್ಮಸ್ಥಳಕ್ಕೆ…
ಆಗುಂಬೆ ಘಾಟಿ : ಭಾರಿ ವಾಹನಗಳ ಸಂಚಾರ ನಿಷೇಧ ಉಡುಪಿ : ರಾಷ್ಟ್ರೀಯ ಹೆದ್ದಾರಿ 169ಎ ರ ತೀರ್ಥಹಳ್ಳಿ –…
ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ ಉಡುಪಿ :…
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…