ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಇತ್ತೀಚಿನ ಕೆಲವು ದಿನಗಳಿಂದ ನಡೆಯುತ್ತಿರುವ ಬೆಳವಣಿಗೆಗಳಿಂದ ಬೇಸತ್ತಿರುವ ಜೆಡಿಎಸ್ ವರಿಷ್ಠ ಮಾಜಿ ಪ್ರಧಾನ ಮಂತ್ರಿ ಎಚ್.ಡಿ. ದೇವೇಗೌಡ ಅವರು ಕಾಂಗ್ರೆಸ್ ಹೈಕಮಾಂಡ್ಗೆ ಸ್ಪಷ್ಟ ಸಂದೇಶ ರವಾನಿಸಿದ್ದು, ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ ಎನ್ನಲಾಗಿದೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ಮಾತನಾಡಿದ್ದ ದೇವೇಗೌಡರು ಸರ್ಕಾರ ಸಮಸ್ಯೆ ಇಲ್ಲದೆ ನಡೆಯುವುದಾದರೆ ಮಾತ್ರ ಆಡಳಿತ ನಡೆಸೋಣ. ನಿಮಗೆ ಮೈತ್ರಿಯನ್ನು ನಿಭಾಯಿಸುವುದು ಕಷ್ಟವಾಗಿದ್ದರೆ ಸ್ಪಷ್ಟವಾಗಿ ಹೇಳಿಬಿಡಿ. ಮೈತ್ರಿ ಸಾಧ್ಯವಿಲ್ಲವಾದರೆ ಅವರವರ ದಾರಿ ಅವರವರದ್ದು. ಜತೆಗೆ ನಮ್ಮ ಸಹಕಾರಕ್ಕಾಗಿ ಬಿಜೆಪಿ ನಾಯಕರು ಕಾಯುತ್ತಿದ್ದಾರೆ ಎಂದು ಗೌಡರು ತಿಳಿಸಿದ್ದರು ಎಂದು ತಿಳಿದು ಬಂದಿದೆ.
ಸಮ್ಮಿಶ್ರ ಸರ್ಕಾರದ ವಿಚಾರವಾಗಿ ಮಾಜಿ ಪ್ರಧಾನಿ ದೇವೇಗೌಡರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಕ್ರೋಶಿತರಾಗಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ನಡೆಯುತ್ತಿರುವ ಎಲ್ಲಾ ರಾಜಕೀಯ ಬೆಳವಣಿಗೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕಾರಣವಾಗಿದ್ದಾರೆ. ಹಾಗಾಗಿ ಸಿದ್ದರಾಮಯ್ಯ ಅವರಿಗೆ ಶೀಘ್ರ ಕಡಿವಾಣ ಹಾಕಬೇಕು ಎಂದು ಕೈ ಹೈಕಮಾಂಡ್ಗೆ ದೇವೇಗೌಡರು ಸಂದೇಶ ರವಾನಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸರಿಪಡಿಸಬೇಕು. ಒಂದು ವೇಳೆ ಸಿದ್ದರಾಮಯ್ಯ ಸರಿ ಇಲ್ಲದಿದ್ದರೆ ಸಮ್ಮಿಶ್ರ ಸರ್ಕಾರಕ್ಕೆ ಖಂಡಿತವಾಗಿಯೂ ಉಳಿಗಾಲವಿಲ್ಲ. ನನ್ನ ಮಗ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿರುವ ದಿನದಿಂದ ಅವನಿಗೆ ಕಿರುಕುಳ ನಿಲ್ಲುತ್ತಿಲ್ಲ. ಬರೀ ಇದೆ ಆಯಿತು, ನೀವು ಮಧ್ಯಪ್ರವೇಶ ಮಾಡಿ ಸರಿ ಮಾಡಿ ಇಲ್ಲದಿದ್ದರೆ ನಮಗೂ ಗೊತ್ತಿದೆ ಎಂದು ಹೇಳಿದ್ದಾರೆ.
2019ರಲ್ಲಿ ಬರಲಿರುವ ಲೋಕಸಭೆ ಚುನಾವಣೆ ನಿಮಗೆ ಎಷ್ಟು ಮುಖ್ಯವೋ ನಮಗೂ ಕೂಡ ಅಷ್ಟೇ ಮುಖ್ಯವಾಗಿದೆ. ಕಾಂಗ್ರೆಸ್ ನಾಯಕರು ಮೇಲಾಟಗಳನ್ನು ನಿಲ್ಲಿಸದಿದ್ದರೆ ನಮಗೂ ದಾರಿ ಬದಲಿಸಲು ಗೊತ್ತಿದೆ ಎಂದು ಎಐಸಿಸಿ ನಾಯಕ ಗುಲಾಂ ನಭೀ ಅಜಾದ್ ಅವರಲ್ಲಿ ತಿಳಿಸಿದ್ದಾರೆ.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…