ಮಂಡ್ಯ: ರಾಜ್ಯದಲ್ಲಿ ಜೆಡಿಎಸ್ ದೋಸ್ತಿಯಿಂದ ಕಾಂಗ್ರೆಸ್ ಪಕ್ಷದ ಅಸ್ತಿತ್ವಕ್ಕೆ ಧಕ್ಕೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ವಿರುದ್ಧ ಮಂಡ್ಯದ ಕೈ ನಾಯಕ ಚೆಲುವರಾಯಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, 23 ರಂದು ಲೋಕಸಭಾ ಚುನಾವಣೆಯ ಫಲಿತಾಂಶವನ್ನು ನೋಡಿಯೂ ಸರ್ಕಾರ ಇನ್ನೂ ಬುದ್ಧಿ ಕಲಿಯುತ್ತಿಲ್ಲ. ಇದರಿಂದ ಜೊತೆಲಿದ್ದಂತಹ ಕಾಂಗ್ರೆಸ್ ಪಕ್ಷ ನೋವು ಅನುಭವಿಸಬೇಕಾಗುತ್ತದೆ. ಜೆಡಿಎಸ್ ನವರರಿಗೂ ಜನ ಬುದ್ಧಿ ಕಲಿಸುತ್ತಾರೆ ಎಂದಿದ್ದಾರೆ.
ಮೈತ್ರಿ ವಿಚಾರದಲ್ಲಿ ರಾಷ್ಟ್ರದ ನಾಯಕರು ತೆಗೆದುಕೊಂಡಿರುವ ತೀರ್ಮಾನಕ್ಕೆ ನಾನು ಬದ್ಧ. ಆದರೆ ಇದೇ ತರ ಮುಂದುವರಿದರೆ ಕಾಂಗ್ರೆಸ್ ಪಕ್ಷ ಬಹಳ ಕಷ್ಟದ ಪರಿಸ್ಥಿತಿ ಎದುರಿಸಬೇಕಾಗುತ್ತದೆ. ನಮ್ಮ ನಾಯಕರು ಇದನ್ನ ಸರಿಪಡಿಸಬೇಕು ಇಲ್ಲ, ಒಂದು ಪೂರ್ಣ ಪ್ರಮಾಣದ ತೀರ್ಮಾನ ತೆಗೆದುಕೊಳ್ಳಬೇಕು. ಆಗ್ಲಿಲ್ಲ ಅಂದರೆ ಮುಂದೆ ಪಕ್ಷವನ್ನು ಈ ಸ್ಥಿತಿಗೆ ಬರದೆ ಇರುವಂತೆ ನೋಡಿಕೊಳ್ಳವುದಕ್ಕೆ ಪಕ್ಷದ ಎಲ್ಲ ಮುಖಂಡರು ಜವಾಬ್ದಾರಿ ತೆಗೆದುಕೊಳ್ಳಬೇಕಾಗುತ್ತದೆ ಎಂದು ಹೇಳಿದ್ದಾರೆ.
ನಾನು ಇವತ್ತು ಪಕ್ಷದ ತೀರ್ಮಾನವನ್ನು ಪ್ರಶ್ನೆ ಮಾಡುವುದಕ್ಕೆ ಹೋಗಲ್ಲ. ಆದರೆ ಈಗಿನ ನಡವಳಿಕೆ ನೋಡುತ್ತಿದ್ದರೆ ಪಕ್ಷಕ್ಕೆ ಒಳ್ಳೆಯ ಭವಿಷ್ಯ ಕಾಣುತ್ತಿಲ್ಲ.
ಮೈತ್ರಿ ಚುನಾವಣೆಯಿಂದ ಈ ಮಟ್ಟಿಗೆ ಪರಿಸ್ಥಿತಿ ಎದುರಾಗಿದೆ ಎಂದು ಈಗ ಕೆಲವರಿಗೆ ಮನವರಿಕೆಯಾಗಿದೆ. ನಾನು ಕಾದು ನೋಡುತ್ತೀನಿ. ಹೆಚ್ಚು ದಿನ ಉಳಿಯಲ್ಲ.ಈಗಾಗಲೇ ಜನ ಲೋಕಸಭಾ ಚುನಾವಣೆಯಲ್ಲಿ ಒಂದು ಸಾರಿ ತೋರಿಸಿದ್ದಾರೆ. ಇನ್ನು ಮತ್ತೆ ಅದನ್ನೇ ಮಾಡಿದರೆ ಜನ ತೀರ್ಮಾನ ತೆಗೆದುಕೊಳ್ಳುತ್ತಾರೆ ಬಿಡಿ, ನನ್ನೊಬ್ಬನ ಕೈಲಿ ಆಗಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ “ಎಲೆಕ್ಷನ್ಗೆ ಹೋಗೋಣ ಇಲ್ಲ ವಿರೋಧ ಪಕ್ಷವಾಗಿ ಕೂರೋಣ” ಎಂದು ಬರೆದು ಈ ಮೂಲಕ ತಮ್ಮ ನಿರ್ಧಾರವನ್ನು ಚೆಲುವರಾಯಸ್ವಾಮಿ ತಿಳಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…