Featured

ಮೈತ್ರಿ ಸರಕಾರ ಉರುಳಿದರೆ ನಾನು ಜನರನ್ನು ಬಿಜೆಪಿ ವಿರುದ್ಧ ಎತ್ತಿಕಟ್ಟಿ ದಂಗೆ ಎಬ್ಬಿಸುತ್ತೇನೆ ; ಬಿಜೆಪಿ ಅಧಿಕಾರಕ್ಕೆ ಬರಲು ನಾನು ಬಿಡೋದಿಲ್ಲ:ಕುಮಾರಸ್ವಾಮಿ

ಹಾಸನ : ಸರ್ಕಾರಕ್ಕೆ ಇದೇ ರೀತಿ ತೊಂದರೆ ಕೊಟ್ಟರೆ ಸುಮ್ಮನಿರುವುದಿಲ್ಲ. ರಾಜ್ಯದ ಜನರಿಗೆ ಬಿಜೆಪಿ ವಿರುದ್ಧ  ದಂಗೆ ಎಳುವಂತೆ ಕರೆ ನೀಡುತ್ತೇನೆ‘…ಇದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ನೀಡಿದ ಹೇಳಿಕೆಯಾಗಿದೆ.

“ಭಾರತೀಯ ಜನತಾ ಪಕ್ಷ ಹಾಗೂ ಯಡಿಯೂರಪ್ಪ ಸರ್ಕಾರವನ್ನು ಉರುಳಿಸಲು ಯತ್ನಿಸುತ್ತಿದ್ದರೆ. ಆದರೆ ಒಂದು ವೇಳೆ ಈ ಮೈತ್ರಿ ಸರಕಾರ ಉರುಳಿದರೆ ನಾನು ಜನರನ್ನು ಬಿಜೆಪಿ ವಿರುದ್ಧ ಎತ್ತಿಕಟ್ಟಿ ದಂಗೆ ಎಬ್ಬಿಸುತ್ತೇನೆ. ಬಿಜೆಪಿ ಅಧಿಕಾರಕ್ಕೆ ಬರಲು ನಾನು ಬಿಡೋದಿಲ್ಲ” ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಮೂಲಕ ತಾನು ಯಾವ ರೀತಿಯ ಅಧಿಕಾರದಾಹಿ ಎಂಬುವುದು ಮತ್ತೊಮ್ಮೆ ಸಾಭೀತುಪಡಿಸಿದ್ದಾರೆ.

“ಸರ್ಕಾರವನ್ನು ಉರುಳಿಸಲು ಯತ್ನಿಸಿದರೆ ನಾನು ಸುಮ್ಮನಿರೋದಿಲ್ಲ. ನಾನು ಮುಖ್ಯಮಂತ್ರಿ ಹಾಗೂ ನನ್ನ ಬಳಿ ಅಧಿಕಾರವಿದೆ. ಸರ್ಕಾರ ನನ್ನದು, ನಾನು ಈ ಸಂದರ್ಭದಲ್ಲಿ ಏನು ಬೇಕಾದರೂ ಮಾಡಬಹುದು ಎಚ್ಚರಿಕೆ. ಸರ್ಕಾರ ಅಲುಗಾಡಿಸಿದರೆ ನಮ್ಮ ತಾಕತ್ತು ತೋರಿಸುತ್ತೇವೆ” ಎಂದೂ ಹೇಳಿದ್ದಾರೆ. ಅಂದರೆ ಸರ್ಕಾರವನ್ನು ಸುಮ್ಮನಿರಲು ಬಿಟ್ಟರೆ ಯಾವ ಕಳ್ಳರನ್ನೂ ಈ ಸರ್ಕಾರ ಸಮರ್ಥಿಸುತ್ತೆ ಹಾಗೂ ಸರ್ಕಾರಕ್ಕೆ ಸಂಕಷ್ಟ ತಂದರೆ ಅವರನ್ನು ತಮ್ಮ ಅಧಿಕಾರ ಬಳಸಿ ಅವರನ್ನು ಜೈಲಿಗಟ್ಟುತ್ತೇವೆ ಎಂಬರ್ಥದಲ್ಲಿ ಕುಮಾರಸ್ವಾಮಿ ಮಾತನಾಡಿದ್ದಾರೆ.

ಯಡಿಯೂರಪ್ಪ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದ್ದ ಸಿಎಂ ಪರ್ಸಂಟೇಜ್‌ ಸಿಸ್ಟಂನ ಜನಕ ಯಡಿಯೂರಪ್ಪ ಎಂದು ಆರೋಪಿಸಿ ನಾನು ಸುಮ್ಮನಿರುವುದಿಲ್ಲ . ಸರ್ಕಾರ ನನ್ನ ಬಳಿ ಇದೆ ಏನು ಮಾಡಬೇಕೆಂದು ಗೊತ್ತಿದೆ ಎಂದಿದ್ದರು. ಬೆನ್ನಲ್ಲೆ ಯಡಿಯೂರಪ್ಪ ಕೇಂದ್ರ ಸರ್ಕಾರ ನಮ್ಮದು ಸಂಜೆ ಭ್ರಷ್ಟಾಚಾರದ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದು ಪ್ರತಿಸವಾಲು ಸಾಕಿದ್ದರು.

ಒಂದೆಡೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ನ ಕೆಲ ಶಾಸಕರು ಮಹಾರಾಷ್ಟ್ರದ ರೆಸಾರ್ಟ್‌ಗೆ ತೆರಳಲಿದ್ದಾರೆ ಎನ್ನುವ ಗುಮಾನಿಯ ಬೆನ್ನಲ್ಲೇ ಸಿಎಂ ಈ ಹೇಳಿಕೆ ನೀಡಿದ್ದು, ಸರ್ಕಾರ ಉಳಿಯುತ್ತದೆಯೋ ಎನ್ನುವ ಪ್ರಶ್ನೆ ಮೂಡಿಸಿದೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago