ಮೈತ್ರಿ ಸರ್ಕಾರಕ್ಕೆ ಒಂದು ವರ್ಷ ಅಥವಾ 18 ತಿಂಗಳು ಮಾತ್ರ ಆಯುಷ್ಯ : ಕೋಡಿಮಠ ಸ್ವಾಮೀಜಿ -Vishwanews24

Featured, ಜಿಲ್ಲೆ, ರಾಜ್ಯ ನ್ಯೂಸ್

ದಾವಣಗೆರೆ: ಕಾಂಗ್ರೆಸ್ ಶಾಸಕರಾದ ಆನಂದ್ ಸಿಂಗ್ ಮತ್ತು ರಮೇಶ್ ಜಾರಕಿಹೊಳಿ ರಾಜೀನಾಮೆಯಿಂದಾಗಿ ರಾಜ್ಯ ರಾಜಕೀಯದಲ್ಲಿ ಅನಿರೀಕ್ಷಿತ ಬೆಳವಣಿಗೆ ನಡೆಯತೊಡಗಿದ್ದು, ಸಮ್ಮಿಶ್ರ ಸರ್ಕಾರದ ಬುಡ ಅಲ್ಲಾಡುತ್ತಿದೆ.

ಇದೇ ವೇಳೆ ತಮ್ಮ ನಿಖರವಾದ ಭವಿಷ್ಯಕ್ಕೆ ಹೆಸರಾದ ಕೋಡಿಮಠ ಸ್ವಾಮೀಜಿ ಮೈತ್ರಿ ಸರ್ಕಾರಕ್ಕೆ ಆಯುಷ್ಯವಿಲ್ಲ ಎಂದು ಹೇಳಿದ್ದಾರೆ.

ಬಿತ್ತಿದ ಬೆಳೆಸು ಪರರು ಕೊಯ್ದಾರು. ಹಂಚಿದ ಬೀಜ ಒಂದು, ಬೆಳೆದ ಫಸಲು ಇನ್ನೊಂದು’ ಎಂದು ಕಳೆದ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ನಾನು ದೆಹಲಿಯಲ್ಲಿ ಹೇಳಿದ್ದೆ. ಒಂದು ವರ್ಷದಿಂದ 18 ತಿಂಗಳುಗಳ ಒಳಗೆ ಮತ್ತೆ ಮತ ಬೇಡುತ್ತಾರೆ ಎಂದು ಆವಾಗ ತಿಳಿಸಿದ್ದೆ. ಈಗಲೂ ಅದನ್ನೇ ಹೇಳುತ್ತಿದ್ದೇನೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಮೈತ್ರಿ ಸರ್ಕಾರಕ್ಕೆ ಒಂದು ವರ್ಷ ಅಥವಾ 18 ತಿಂಗಳು ಮಾತ್ರ ಆಯುಷ್ಯ.ಮುಂದಿನ ದಿನಗಳಲ್ಲಿ ಮತ್ತೊಮ್ಮೆ ಮತ ಯಾಚಿಸಲು ಹೋಗುತ್ತಾರೆ.

ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ. ಆತಂಕಪಡುವ ಅಗತ್ಯವಿಲ್ಲ ಎಂದು ಶ್ರೀಗಳು ತಿಳಿಸಿದ್ದಾರೆ.