Featured

ಮೈತ್ರಿ ಸರ್ಕಾರಕ್ಕೆ ಬಿಗ್ ಶಾಕ್ !! ಬಿಜೆಪಿ ಸೇರಿದ ಕಾಂಗ್ರೆಸ್ ಎಂಎಲ್‌ಸಿ ಲಿಂಗಪ್ಪ ಪುತ್ರ ಚಂದ್ರಶೇಖರ್..

ಬೆಂಗಳೂರು: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿಗೆ ರಾಮನಗರ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದು ಇದರಿಂದ ಕಾಂಗ್ರೆಸ್ಸಿಗರು ಬೇಸರಗೊಂಡು ಇಂದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ವಿಧಾನ ಪರಿಷತ್ ಸದಸ್ಯ, ರಾಮನಗರ ಕಾಂಗ್ರೆಸ್ ಮುಖಂಡ ಸಿಎಂ ಲಿಂಗಪ್ಪ ಪುತ್ರ ಚಂದ್ರಶೇಖರ್ ಪಕ್ಷ ತೊರೆದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪನವರ ನಿವಾಸದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಬಿಎಸ್ವೈ ಪಕ್ಷದ ಧ್ವಜ ಹಾಗೂ ಶಾಲು ಹಾಕಿ ಪಕ್ಷಕ್ಕೆ ಬರಮಾಡಿಕೊಂಡರು. ಈ ವೇಳೆ ಸಿಪಿ ಯೋಗೇಶ್ವರ್ ಸಹ ಜೊತೆಯಲ್ಲಿದ್ದರು. ಈ ವೇಳೆ ಮಾತನಾಡಿದ ಬಿಎಸ್ವೈ ರಾಮನಗರ ಪಕ್ಷದ ಅಭ್ಯರ್ಥಿ ಎಂದು ಅವರು ಪಕ್ಷಕ್ಕೆ ಸೇರ್ಪಡೆಯಾಗಿಲ್ಲ. 2 ದಿನಗಳಲ್ಲಿ ರಾಮನಗರದಲ್ಲಿ ಬೃಹತ್ ಸಮಾರಂಭ ನಡೆಸಿ ಅಭ್ಯರ್ಥಿ ಘೋಷಣೆ ಮಾಡಲಾಗುವುದು ಎಂದರು.
ಬಿಜೆಪಿ ಸೇರಿದ ಬಳಿಕ ಮಾತನಾಡಿದ ಚಂದ್ರಶೇಖರ್ ಅವರು ನನ್ನ ಆತ್ಮತೃಪ್ತಿಗಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದೇನೆ. ಕಾಂಗ್ರೆಸ್ ನಲ್ಲಿ ಉಸಿರುಗಟ್ಟಿಸುವ ವಾತಾವರಣವಿದೆ. ನಮ್ಮ ಕ್ಷೇತ್ರದ ಸಂಪೂರ್ಣ ಅಭಿವೃದ್ಧಿ ಮಾಡುವುದು ನನ್ನ ಗುರಿಯಾಗಿದೆ. ಬಿಜೆಪಿ ಪಕ್ಷವನ್ನು ಕ್ಷೇತ್ರದಲ್ಲಿ ಬಲಗೊಳಿಸುವತ್ತ ಗಮನ ಹರಿಸುತ್ತೇನೆ ಎಂದರು.
ಇದಕ್ಕೂ ಮುನ್ನ ಮಾತನಾಡಿದ್ದ ಸಿಎಂ ಲಿಂಗಪ್ಪ ಅವರು ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಪರ ಪ್ರಚಾರ ಮಾಡಲ್ಲ. ಹಾಗಂತ ನಾವು ಬಿಜೆಪಿಗೂ ಬೆಂಬಲ ನೀಡಲ್ಲ. ಬಂಡಾಯ ಅಭ್ಯರ್ಥಿ ಕಣಕ್ಕಿಳಿಸಲು ಚಿಂತನೆ ನಡೆಸುತ್ತೇವೆ ಎಂದು ಹೇಳಿದ್ದರು. ಆದರೆ ಈ ಎಲ್ಲದರ ನಡುವೆ ಚಂದ್ರಶೇಖರ್ ಬಿಜೆಪಿಗೆ ಸೇರ್ಪಡೆಯಾಗಿ ಮತ್ತೆ ಟ್ವಿಸ್ಟ್ ನೀಡಿದ್ದಾರೆ.
Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

9 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

10 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

10 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

10 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

11 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

11 hours ago