Featured

ಮೈತ್ರಿ ಸರ್ಕಾರದಲ್ಲಿ ಅಪಸ್ವರ ; ಮತ್ತೆ ಸಿಎಂ ಆಗುತ್ತೇನೆ ಹೇಳಿಕೆ, ಸಿದ್ದರಾಮಯ್ಯ ವಿರುದ್ಧ ಜೆಡಿಎಸ್ ಕಿಡಿ

ಬೆಂಗಳೂರು: ಮತ್ತೆ ಸಿಎಂ ಆಗುತ್ತೇನೆಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ನೀಡಿದ್ದ ಸಾಂದರ್ಭಿಕ ಹೇಳಿಕೆ ಇದೀಗ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಯನ್ನು ಹುಟ್ಟುಹಾಕಿದೆ.
ಸಿದ್ದರಾಮಯ್ಯ ಹೇಳಿಕೆಗೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಅವರು ಸೋಮವಾರ ತೀವ್ರವಾಗಿ ಕಿಡಿಕಾರಿದ್ದಾರೆ.
ಸಿದ್ದರಾಮಯ್ಯ ಹೇಳಿಕೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಸಮನ್ವಯ ಸಮಿತಿ ಇರುವುದು ಒಡೆಯುವುದಕ್ಕಲ್ಲ. ಕಟ್ಟುವುದಕ್ಕೆ. ಸರ್ಕಾರ ಮತ್ತು ಮೈತ್ರಿ ಪಕ್ಷಗಳ ನಡುವೆ ಸೌಹಾರ್ತದೆ ಮೂಡಿಸುವುದಕ್ಕೆ. ಮುಂದಿನ ಐದು ವರ್ಷಗಳ ಕಾಲ ಹೆಚ್.ಡಿ.ಕುಮಾರಸ್ವಾಮಿಯವರೇ ಮುಖ್ಯಮಂತ್ರಿಯಾಗಿರಲಿದ್ದಾರೆಂದು ಹೇಳಿದ್ದಾರೆ.
ಮೈತ್ರಿ ಸರ್ಕಾರ ಸುಗಮವಾಗಿ ಸಾಗಿಸುವಲ್ಲಿ ಸಿದ್ದರಾಮಯ್ಯ ಅವರು ವಿಫಲರಾಗುತ್ತಿದ್ದಾರೆ. ಮೈತ್ರಿ ಸರ್ಕಾರದಲ್ಲಿ ಮೂಡುವ ಬಿರುಕುಗಳು ಹಾಗೂ ಬಿಕ್ಕಟ್ಟನ್ನು ಸರಿಪಡಿಸುವ ಜವಾಬ್ದಾರಿಯನ್ನು ಸಿದ್ದರಾಮಯ್ಯ ಅವರಿಗೆ ನೀಡಲಾಗಿದೆ. ಇದಕ್ಕಾಗಿ ವಿಧಾನಸೌಧದಲ್ಲಿ ಅವರಿಗೆ ಕಚೇರಿಯನ್ನೂ ನೀಡಲಾಗಿದೆ. ಆದರೆ, ಸಿದ್ದರಾಮಯ್ಯ ಅವರೇ ಸ್ವತಃ ಮೈತ್ರಿ ಸರ್ಕಾರವನ್ನು ಒಡೆಯುವ ಕೆಲಸವನ್ನು ಮಾಡುತ್ತಿದ್ದಾರೆ. ಸಮ್ಮಿಶ್ರ ಸರ್ಕಾರ ಉರುಳುವ ಬಗ್ಗೆ ಸಿದ್ದರಾಮಯ್ಯ ಅವರು ಬೆದರಿಕೆಗಳನ್ನು ಹಾಕುತ್ತಿದ್ದರೂ ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ.ದೇವೇಗೌಡ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಸರ್ಕಾರವನ್ನು ಸೂಕ್ತ ರೀತಿಯಲ್ಲಿ ನಡೆಸಿಕೊಂಡು ಹೋಗುತ್ತಿದ್ದಾರೆ. ಸ್ಥಳೀಯ ಚುನಾವಣೆ ಅಂತಿಮಗೊಳ್ಳುವವರೆಗೂ ಶಾಂತಿಯುತವಾಗಿರುತ್ತೇವೆ. ನಂತರ ಕಾಂಗ್ರೆಸ್ ಹೈಕಮಾಂಡ್ ಗಮನಕ್ಕೆ ಈ ವಿಚಾರವನ್ನು ತರಲಾಗುತ್ತದೆ ಜೆಡಿಎಸ್ ನಾಯಕರು ಹೇಳಿದ್ದಾರೆ.
ಆಗಸ್ಟ್ 31ರ ಬಳಿಕ ಸ್ಥಳೀಯ ಚುನಾವಣೆ ಅಂತಿಮಗೊಂಡ ಬಳಿಕ ಈ ಕುರಿತು ದೇವೇಗೌಡ ಹಾಗೂ ಕುಮಾರಸ್ವಾಮಿಯವರೊಂದಿಗೆ ಮಾತುಕತೆ ನಡೆಸುತ್ತೇನೆ. ನಂತರ ದೇವೇಗೌಡ ಅವರೇ ರಾಹುಲ್ ಗಾಂಧಿಯವರೊಂದಿಗೆ ಮಾತುಕತೆ ನಡೆಸುತ್ತಾರೆ, ಸಮನ್ವಯ ಸಮಿತಿಯಲ್ಲಿ ನನ್ನನ್ನು ಸೇರ್ಪಡೆಗೊಳಿಸುತ್ತಾರೆಂದು ವಿಶ್ವನಾಥ್ ಅವರು ಹೇಳಿದ್ದಾರೆ.
ಸಮನ್ನವ ಸಮಿತಿಗೆ ನನ್ನನ್ನು ಸೇರ್ಪಡೆಗೊಳಿಸುವುದಕ್ಕೆ ಸಿದ್ದರಾಮಯ್ಯ ಅವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ನಾನು ಜೆಡಿಎಸ್ ರಾಜ್ಯಾಧ್ಯಕ್ಷ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಅವರೊಂದಿಗೆ ನಾನು ಕೂಡ ಸಮನ್ವಯ ಸಮಿತಿಯಲ್ಲಿರಬೇಕು. ಕಾಂಗ್ರೆಸ್ ಹೈಕಮಾಂಡ್ ಇದಕ್ಕೆ ಒಪ್ಪಿಗೆ ನೀಡಿದ್ದರೂ, ಸಿದ್ದರಾಮಯ್ಯ ಅವರು ಒಪ್ಪುದ್ದಿಲ್ಲ. ಸರ್ಕಾರವನ್ನು ಅಸ್ಥಿರಗೊಳಿಸಲು ಪಿತೂರಿಗಳು ನಡೆಯುತ್ತಿದ್ದು, ಇದರ ಹಿಂದೆ ಯಾರಿದ್ದಾರೆಂಬುದು ನನಗೆ ಗೊತ್ತಿದೆ ಎಂದು ಹೇಳಿದ್ದಾರೆ.
Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

8 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

8 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

8 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

9 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

9 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

9 hours ago