Featured

ಮೈತ್ರಿ ಸರ್ಕಾರದಲ್ಲಿ ಅಪಸ್ವರ ; ಮತ್ತೆ ಸಿಎಂ ಆಗುತ್ತೇನೆ ಹೇಳಿಕೆ, ಸಿದ್ದರಾಮಯ್ಯ ವಿರುದ್ಧ ಜೆಡಿಎಸ್ ಕಿಡಿ

ಬೆಂಗಳೂರು: ಮತ್ತೆ ಸಿಎಂ ಆಗುತ್ತೇನೆಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ನೀಡಿದ್ದ ಸಾಂದರ್ಭಿಕ ಹೇಳಿಕೆ ಇದೀಗ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಯನ್ನು ಹುಟ್ಟುಹಾಕಿದೆ.
ಸಿದ್ದರಾಮಯ್ಯ ಹೇಳಿಕೆಗೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಅವರು ಸೋಮವಾರ ತೀವ್ರವಾಗಿ ಕಿಡಿಕಾರಿದ್ದಾರೆ.
ಸಿದ್ದರಾಮಯ್ಯ ಹೇಳಿಕೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಸಮನ್ವಯ ಸಮಿತಿ ಇರುವುದು ಒಡೆಯುವುದಕ್ಕಲ್ಲ. ಕಟ್ಟುವುದಕ್ಕೆ. ಸರ್ಕಾರ ಮತ್ತು ಮೈತ್ರಿ ಪಕ್ಷಗಳ ನಡುವೆ ಸೌಹಾರ್ತದೆ ಮೂಡಿಸುವುದಕ್ಕೆ. ಮುಂದಿನ ಐದು ವರ್ಷಗಳ ಕಾಲ ಹೆಚ್.ಡಿ.ಕುಮಾರಸ್ವಾಮಿಯವರೇ ಮುಖ್ಯಮಂತ್ರಿಯಾಗಿರಲಿದ್ದಾರೆಂದು ಹೇಳಿದ್ದಾರೆ.
ಮೈತ್ರಿ ಸರ್ಕಾರ ಸುಗಮವಾಗಿ ಸಾಗಿಸುವಲ್ಲಿ ಸಿದ್ದರಾಮಯ್ಯ ಅವರು ವಿಫಲರಾಗುತ್ತಿದ್ದಾರೆ. ಮೈತ್ರಿ ಸರ್ಕಾರದಲ್ಲಿ ಮೂಡುವ ಬಿರುಕುಗಳು ಹಾಗೂ ಬಿಕ್ಕಟ್ಟನ್ನು ಸರಿಪಡಿಸುವ ಜವಾಬ್ದಾರಿಯನ್ನು ಸಿದ್ದರಾಮಯ್ಯ ಅವರಿಗೆ ನೀಡಲಾಗಿದೆ. ಇದಕ್ಕಾಗಿ ವಿಧಾನಸೌಧದಲ್ಲಿ ಅವರಿಗೆ ಕಚೇರಿಯನ್ನೂ ನೀಡಲಾಗಿದೆ. ಆದರೆ, ಸಿದ್ದರಾಮಯ್ಯ ಅವರೇ ಸ್ವತಃ ಮೈತ್ರಿ ಸರ್ಕಾರವನ್ನು ಒಡೆಯುವ ಕೆಲಸವನ್ನು ಮಾಡುತ್ತಿದ್ದಾರೆ. ಸಮ್ಮಿಶ್ರ ಸರ್ಕಾರ ಉರುಳುವ ಬಗ್ಗೆ ಸಿದ್ದರಾಮಯ್ಯ ಅವರು ಬೆದರಿಕೆಗಳನ್ನು ಹಾಕುತ್ತಿದ್ದರೂ ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ.ದೇವೇಗೌಡ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಸರ್ಕಾರವನ್ನು ಸೂಕ್ತ ರೀತಿಯಲ್ಲಿ ನಡೆಸಿಕೊಂಡು ಹೋಗುತ್ತಿದ್ದಾರೆ. ಸ್ಥಳೀಯ ಚುನಾವಣೆ ಅಂತಿಮಗೊಳ್ಳುವವರೆಗೂ ಶಾಂತಿಯುತವಾಗಿರುತ್ತೇವೆ. ನಂತರ ಕಾಂಗ್ರೆಸ್ ಹೈಕಮಾಂಡ್ ಗಮನಕ್ಕೆ ಈ ವಿಚಾರವನ್ನು ತರಲಾಗುತ್ತದೆ ಜೆಡಿಎಸ್ ನಾಯಕರು ಹೇಳಿದ್ದಾರೆ.
ಆಗಸ್ಟ್ 31ರ ಬಳಿಕ ಸ್ಥಳೀಯ ಚುನಾವಣೆ ಅಂತಿಮಗೊಂಡ ಬಳಿಕ ಈ ಕುರಿತು ದೇವೇಗೌಡ ಹಾಗೂ ಕುಮಾರಸ್ವಾಮಿಯವರೊಂದಿಗೆ ಮಾತುಕತೆ ನಡೆಸುತ್ತೇನೆ. ನಂತರ ದೇವೇಗೌಡ ಅವರೇ ರಾಹುಲ್ ಗಾಂಧಿಯವರೊಂದಿಗೆ ಮಾತುಕತೆ ನಡೆಸುತ್ತಾರೆ, ಸಮನ್ವಯ ಸಮಿತಿಯಲ್ಲಿ ನನ್ನನ್ನು ಸೇರ್ಪಡೆಗೊಳಿಸುತ್ತಾರೆಂದು ವಿಶ್ವನಾಥ್ ಅವರು ಹೇಳಿದ್ದಾರೆ.
ಸಮನ್ನವ ಸಮಿತಿಗೆ ನನ್ನನ್ನು ಸೇರ್ಪಡೆಗೊಳಿಸುವುದಕ್ಕೆ ಸಿದ್ದರಾಮಯ್ಯ ಅವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ನಾನು ಜೆಡಿಎಸ್ ರಾಜ್ಯಾಧ್ಯಕ್ಷ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಅವರೊಂದಿಗೆ ನಾನು ಕೂಡ ಸಮನ್ವಯ ಸಮಿತಿಯಲ್ಲಿರಬೇಕು. ಕಾಂಗ್ರೆಸ್ ಹೈಕಮಾಂಡ್ ಇದಕ್ಕೆ ಒಪ್ಪಿಗೆ ನೀಡಿದ್ದರೂ, ಸಿದ್ದರಾಮಯ್ಯ ಅವರು ಒಪ್ಪುದ್ದಿಲ್ಲ. ಸರ್ಕಾರವನ್ನು ಅಸ್ಥಿರಗೊಳಿಸಲು ಪಿತೂರಿಗಳು ನಡೆಯುತ್ತಿದ್ದು, ಇದರ ಹಿಂದೆ ಯಾರಿದ್ದಾರೆಂಬುದು ನನಗೆ ಗೊತ್ತಿದೆ ಎಂದು ಹೇಳಿದ್ದಾರೆ.
Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

25 minutes ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

45 minutes ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

53 minutes ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

1 hour ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

1 hour ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

3 hours ago