ರೈತರ ಸಾಲಮನ್ನಾ , ಹೆಚ್ಚುತ್ತಿರುವ ರೈತರ ಆತ್ಮಹತ್ಯೆ ತಡೆಗಟ್ಟುವಿಕೆ ಸೇರಿದಂತೆ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಇದೇ 30ರಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಮುಂದಾಗಿದೆ. ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆಯಲಿರುವ ಈ ಪ್ರತಿಭಟನೆ ಜೂ.30ರಿಂದ ಜುಲೈ 15ರವರೆಗೆ ಒಟ್ಟು ಆರು ತಂಡಗಳಾಗಿ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿಭಟನಾ ಕಾರ್ಯಕ್ರಮ ನಡೆಯಲಿದೆ.
ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಲಕ್ಷ್ಮಣ್ ಸವದಿ ನೇತೃತ್ವದಲ್ಲಿ ಆರು ತಂಡಗಳನ್ನು ರಚಿಸಿರುವ ಬಿಜೆಪಿ, ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಈ ಮೂಲಕ ಪ್ರಾರಂಭದಲ್ಲೇ ದೋಸ್ತಿ ಸರ್ಕಾರದ ವಿರುದ್ಧ ರಣ ಕಹಳೆ ಮೊಳಗಿಸಿದ್ದಾರೆ. ದಕ್ಷಿಣ ಕರ್ನಾಟಕ, ಮಧ್ಯ ಕರ್ನಾಟಕ, ಮುಂಬೈ ಕರ್ನಾಟಕ, ಕರಾವಳಿ ಹಾಗೂ ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಸಂಚರಿಸಲಿರುವ ಈ ತಂಡವು ರೈತರನ್ನು ಭೇಟಿ ಮಾಡಿ ಅವರ ಸಮಸ್ಯೆಗಳನ್ನು ಆಲಿಸಲಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಸೂಚನೆ ಮೇರೆಗೆ ಪ್ರವಾಸ ಆರಂಭಿಸಲಿರುವ ಯುವ ಮೋರ್ಚಾದ ನಾಯಕರು ರೈತರ ಸಾಲಮನ್ನಾವನ್ನೇ ಪ್ರಧಾನವಾಗಿಟ್ಟುಕೊಂಡು ಹೋರಾಟ ನಡೆಸಲಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ವಿಧಾನಸಭೆ ಚುನಾವಣೆಗೂ ಮುನ್ನ ರೈತರ ಸಾಲಮನ್ನಾ ಮಾಡುವ ವಿಷಯದಲ್ಲಿ ಜನತೆಗೆ ನೀಡಿದ ಆಶ್ವಾಸನೆ, ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅವರು ನಡೆದುಕೊಳ್ಳುತ್ತಿರುವ ರೀತಿನೀತಿಗಳ ಬಗ್ಗೆಯೂ ಜನತೆಗೆ ರೈತ ಮೋರ್ಚಾ ಮನವರಿಕೆ ಮಾಡಲಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…