ರಾಜ್ಯ ನ್ಯೂಸ್

ಮೈತ್ರಿ ಸರ್ಕಾರದ ವಿರುದ್ಧ ಬಿಜೆಪಿ ರೈತ ಮೋರ್ಚಾದಿಂದ ಶೀಘ್ರವೇ ರಾಜ್ಯಾದ್ಯಂತ ಪ್ರತಿಭಟನೆ!

ರೈತರ ಸಾಲಮನ್ನಾ , ಹೆಚ್ಚುತ್ತಿರುವ ರೈತರ ಆತ್ಮಹತ್ಯೆ ತಡೆಗಟ್ಟುವಿಕೆ ಸೇರಿದಂತೆ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಇದೇ 30ರಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಮುಂದಾಗಿದೆ. ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆಯಲಿರುವ ಈ ಪ್ರತಿಭಟನೆ ಜೂ.30ರಿಂದ ಜುಲೈ 15ರವರೆಗೆ ಒಟ್ಟು ಆರು ತಂಡಗಳಾಗಿ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿಭಟನಾ ಕಾರ್ಯಕ್ರಮ ನಡೆಯಲಿದೆ.

ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಲಕ್ಷ್ಮಣ್ ಸವದಿ ನೇತೃತ್ವದಲ್ಲಿ ಆರು ತಂಡಗಳನ್ನು ರಚಿಸಿರುವ ಬಿಜೆಪಿ, ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಈ ಮೂಲಕ ಪ್ರಾರಂಭದಲ್ಲೇ ದೋಸ್ತಿ ಸರ್ಕಾರದ ವಿರುದ್ಧ ರಣ ಕಹಳೆ ಮೊಳಗಿಸಿದ್ದಾರೆ. ದಕ್ಷಿಣ ಕರ್ನಾಟಕ, ಮಧ್ಯ ಕರ್ನಾಟಕ, ಮುಂಬೈ ಕರ್ನಾಟಕ, ಕರಾವಳಿ ಹಾಗೂ ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಸಂಚರಿಸಲಿರುವ ಈ ತಂಡವು ರೈತರನ್ನು ಭೇಟಿ ಮಾಡಿ ಅವರ ಸಮಸ್ಯೆಗಳನ್ನು ಆಲಿಸಲಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಸೂಚನೆ ಮೇರೆಗೆ ಪ್ರವಾಸ ಆರಂಭಿಸಲಿರುವ ಯುವ ಮೋರ್ಚಾದ ನಾಯಕರು ರೈತರ ಸಾಲಮನ್ನಾವನ್ನೇ ಪ್ರಧಾನವಾಗಿಟ್ಟುಕೊಂಡು ಹೋರಾಟ ನಡೆಸಲಿದೆ.  ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ವಿಧಾನಸಭೆ ಚುನಾವಣೆಗೂ ಮುನ್ನ ರೈತರ ಸಾಲಮನ್ನಾ ಮಾಡುವ ವಿಷಯದಲ್ಲಿ ಜನತೆಗೆ ನೀಡಿದ ಆಶ್ವಾಸನೆ, ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅವರು ನಡೆದುಕೊಳ್ಳುತ್ತಿರುವ ರೀತಿನೀತಿಗಳ ಬಗ್ಗೆಯೂ ಜನತೆಗೆ ರೈತ ಮೋರ್ಚಾ ಮನವರಿಕೆ ಮಾಡಲಿದೆ.

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

1 day ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

1 day ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

1 day ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

1 day ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

1 day ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

1 day ago