ರಾಜ್ಯ ನ್ಯೂಸ್

ಮೈತ್ರಿ ಸರ್ಕಾರ ರಚನೆ : ಮತ್ತೆ ರಾಷ್ಟ್ರ ರಾಜಕಾರಣದಲ್ಲಿ ಮಿಂಚುತ್ತಾರಾ ದೊಡ್ಡ ಗೌಡರು???

ಬೆಂಗಳೂರು: ಹೆಚ್ ಡಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದಿಂದಾಗಿ ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಮತ್ತೊಮ್ಮೆ ರಾಷ್ಟ್ರಮಟ್ಟದ ರಾಜಕಾರಣದಲ್ಲಿ ಮಿಂಚುತ್ತಿದ್ದಾರೆ.

ನಿನ್ನೆ ವಿಧಾನಸೌಧದ ಮುಂದೆ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪ್ರಾದೇಶಿಕ ಪಕ್ಷಗಳ ರಾಷ್ಟ್ರೀಯ ನಾಯಕರ ಉಪಸ್ಥಿತಿ, ಮುಂದಿನ ವರ್ಷ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ವಿರುದ್ಧವಾಗಿ ರಾಷ್ಟ್ರಮಟ್ಟದಲ್ಲಿ ಮೈತ್ರಿ ಮಾಡಿಕೊಂಡು ಚುನಾವಣೆಯನ್ನು ಎದುರಿಸುವಲ್ಲಿ ಹೆಚ್ ಡಿ ದೇವೇಗೌಡರು ಮುಖ್ಯ ಪಾತ್ರ ವಹಿಸಲಿದ್ದಾರೆ ಎಂಬುದನ್ನು ತೋರಿಸುತ್ತಿತ್ತು.

ಪ್ರಧಾನಿಯಾಗಿ ಅಲ್ಪಾವಧಿ ಅಧಿಕಾರಾವಧಿ ವಹಿಸಿದ ನಂತರ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯನ್ನು ಎದುರಿಸಲು ತೃತೀಯ ರಂಗ ರಚನೆ ಸಾಧ್ಯವಾಗದೆ ಹೋದಾಗ ಜೆಡಿಎಸ್ ವರಿಷ್ಠ ದೇವೇಗೌಡರು ತಮ್ಮ ರಾಜಕೀಯವನ್ನು ಕೇವಲ ಕರ್ನಾಟಕಕ್ಕೆ ಸೀಮಿತಗೊಳಿಸಿದ್ದರು. ಈ ಬಾರಿಯ ವಿಧಾನಸಭೆ ಚುನಾವಣೆಗೆ ಮುನ್ನ ಹಲವು ಸಂದರ್ಭಗಳಲ್ಲಿ ರಾಜ್ಯದಲ್ಲಿ ಜೆಡಿಎಸ್ ನ್ನು ಅಧಿಕಾರಕ್ಕೆ ತರುವುದು ತಮ್ಮ ಮೊದಲ ಆದ್ಯತೆ ಎಂದು ಹೇಳಿದ್ದರು. ನಂತರವಷ್ಟೇ ರಾಷ್ಟ್ರ ರಾಜಕಾರಣದ ಬಗ್ಗೆ ಗಮನ ಹರಿಸುತ್ತೇನೆ ಎಂದು ಹೇಳಿದ್ದರು.

ಇದೀಗ ಅವರ ಪಕ್ಷ ಅಧಿಕಾರಕ್ಕೆ ಬಂದಿದೆ. ಅವರ ಪುತ್ರ ಹೆಚ್ ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾರೆ. ಇನ್ನು ದೇವೇಗೌಡರು ರಾಷ್ಟ್ರ ಮಟ್ಟದ ರಾಜಕಾರಣದಲ್ಲಿ ಹೆಚ್ಚು ಸಕ್ರಿಯರಾಗಿ ತೊಡಗಿಸಿಕೊಳ್ಳಲಿದ್ದಾರೆ. ಇದಕ್ಕೆ ಸ್ಪಷ್ಟ ಸಂದೇಶ ನಿನ್ನೆ ನಡೆದ ಕುಮಾರಸ್ವಾಮಿ ಪ್ರಮಾಣವಚನ ಸಮಾರಂಭದಲ್ಲಿ ಸಿಕ್ಕಿತ್ತು. ಬಿಜೆಪಿಯೇತರ ಸರ್ಕಾರಗಳಿರುವ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿರುವ ಬಿಎಸ್ ಪಿ, ಎಸ್ ಪಿ, ಆರ್ ಜೆಡಿ ನಾಯಕರು ಪ್ರಮಾಣವಚನದಲ್ಲಿ ಭಾಗಿಯಾಗಿ ತಮ್ಮ ಒಗ್ಗಟ್ಟಿನ ಶಕ್ತಿ ಪ್ರದರ್ಶಿಸಿದ್ದರು.

ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್ ಡಿ ಕುಮಾರಸ್ವಾಮಿ ಪ್ರಮಾಣವಚನ ಸಮಾರಂಭದಲ್ಲಿ ರಾಷ್ಡ್ರ ಮತ್ತು ಪ್ರಾದೇಶಿಕ ಪಕ್ಷಗಳ ನಾಯಕರು ಭಾಗವಹಿಸುವ ಮೂಲಕ 2019ರ ಲೋಕಸಭೆ ಚುನಾವಣೆಗೆ ಮುನ್ನ ರಾಷ್ಟ್ರಮಟ್ಟದಲ್ಲಿ ಎಲ್ಲಾ ಪ್ರಾದೇಶಿಕ ಪಕ್ಷಗಳ ಸೇರ್ಪಡೆಯ ಸ್ಪಷ್ಟ ಸಂದೇಶ ನೀಡಿದ್ದೇವೆ ಎಂದರು.

ದೇವೇಗೌಡರು ಹಿರಿಯ ರಾಜಕಾರಣಿ. ಅವರಿಗೆ ದೇಶಾದ್ಯಂತ ಸ್ಥಳೀಯ ರಾಜಕೀಯ ನಾಯಕರು ಗೌರವ ನೀಡುತ್ತಾರೆ. ರಾಷ್ಟ್ರಮಟ್ಟದಲ್ಲಿ ಬಿಜೆಪಿಯನ್ನು ಎದುರಿಸಲು ಎಲ್ಲಾ ಪ್ರಾದೇಶಿಕ ಪಕ್ಷಗಳನ್ನು ಒಟ್ಟು ತರುವ ನಾಯಕತ್ವವನ್ನು ಅವರು ವಹಿಸಬಹುದು ಎನ್ನುತ್ತಾರೆ ರಾಜಕೀಯ ವಿಶ್ಲೇಷಕ..

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

1 day ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

1 day ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

1 day ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

1 day ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

1 day ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

1 day ago