Featured

ಮೈತ್ರಿ ಹೇಗೆ ಉಳಿಸಿಕೊಳ್ಳಬೇಕು, ಹೇಗೆ ನಿಭಾಯಿಸಬೇಕು ಎಂದು ಕಾಂಗ್ರೆಸ್ ನವರು ಬಿಜೆಪಿಯನ್ನು ನೋಡಿ ಕಲಿಯಬೇಕು : ಅಖಿಲೇಶ್ ಯಾದವ್

ಲಕ್ನೋ: ಮೈತ್ರಿಯನ್ನು ಹೇಗೆ ನಿಭಾಯಿಸಬೇಕು ಅಂತ ಬಿಜೆಪಿಯವರಿಗೆ ಚೆನ್ನಾಗಿ ಗೊತ್ತಿದೆ. ಸಮ್ಮಿಶ್ರ ಸರ್ಕಾರವನ್ನು ಹೇಗೆ ಮುನ್ನಡೆಸಬೇಕು ಅನ್ನೋದನ್ನ ಬಿಜೆಪಿ ನೋಡಿ ಕಾಂಗ್ರೆಸ್ ಕಲಿತುಕೊಳ್ಳಬೇಕು ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

”ಮೈತ್ರಿಕೂಟ ಎಂದಮೇಲೆ ಏರಿಳಿತಗಳು ಇದ್ದೇ ಇರುತ್ತವೆ. ನೇತೃತ್ವ ವಹಿಸಿದವರು ಅದನ್ನೆಲ್ಲ ಸಂಭಾಳಿಸಿಕೊಂಡು, ಎಲ್ಲರನ್ನೂ ಜತೆಗೆ ಕರೆದುಕೊಂಡು ಹೋಗಬೇಕು. ತನ್ನ ಕೆಲವು ಸೀಟುಗಳನ್ನು ಬಿಟ್ಟು ಕೊಟ್ಟಾದರೂ ಮೈತ್ರಿ ಉಳಿಸಿಕೊಳ್ಳಬೇಕು ಎಂಬ ನೀತಿಯನ್ನು ಬಿಜೆಪಿ ಅನುಸರಿಸುತ್ತಿದೆ. ಮಿತ್ರಪಕ್ಷಗಳ ಎಲ್ಲ ಒತ್ತಡಗಳನ್ನೂ ಸಹಿಸಿಕೊಂಡು ಮೈತ್ರಿ ಉಳಿಸಿಕೊಳ್ಳುವಲ್ಲಿ ಆ ಪಕ್ಷ ಯಶಸ್ವಿಯಾಗಿದೆ,” ಎಂದು ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅಖಿಲೇಶ್‌ ಹೇಳಿದ್ದಾರೆ.

ಬಿಜೆಪಿ ಮೈತ್ರಿಯನ್ನು ಹೇಗೆ ಉಳಿಸಿಕೊಳ್ಳುತ್ತದೆ ಅನ್ನೋದಕ್ಕೆ ಬಿಹಾರ ಅತ್ಯುತ್ತಮ ಉದಾಹರಣೆ. 2014ರಲ್ಲಿ ಅಲ್ಲಿ 40 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 22ರಲ್ಲಿ, ಜೆಡಿಯು ಕೇವಲ ಎರಡರಲ್ಲಿ ಗೆದ್ದಿತ್ತು. ಆದರೂ ಈ ಸಲ ಜೆಡಿಯು ಜತೆ ಸಮಾನ ಕ್ಷೇತ್ರಗಳಲ್ಲಿ (50:50) ಸ್ಪರ್ಧಿಸುವ ಒಪ್ಪಂದ ಮಾಡಿಕೊಂಡು ಮೈತ್ರಿ ಮಾಡಲು ನಿರ್ಧರಿಸಿತ್ತು. ಕಾಂಗ್ರೆಸ್‍ನವರು ಬಿಜೆಪಿಯಿಂದ ಮೈತ್ರಿ ಹೇಗೆ ಉಳಿಸಿಕೊಳ್ಳಬೇಕು, ನಿಭಾಯಿಸಬೇಕು ಅಂತ ಕಲಿಯಬೇಕು ಎಂದಿದ್ದಾರೆ.

ಕಾಂಗ್ರೆಸ್ ದೊಡ್ಡ ಪಕ್ಷ. ಅವರು ಇತರೇ ಪಕ್ಷಗಳಿಗೆ ನೆರವಾಗಬೇಕು. ಉದಾಹರಣೆಗೆ, ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಹಾಗೂ ದಿಲ್ಲಿಯಲ್ಲಿ ಅರವಿಂದ್ ಕೇಜ್ರಿವಾಲ್ ಅವರಿಗೆ ನೆರವು ನೀಡಬೇಕು. ಬಿಜೆಪಿ ವಿರುದ್ಧ ಹೋರಾಡುವ ಶಕ್ತಿ ಈ ಇಬ್ಬರಿಗೂ ನಾಯಕರಿಗೆ ಇದೆ ಎಂದು ಅಖಿಲೇಶ್ ಯಾದವ್ ತಿಳಿದ್ದಾರೆ.

 

 

Vishwa News 24

Recent Posts

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ -vishwanews24

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…

47 minutes ago

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ ; ಆರೋಪಿ ಅರೆಸ್ಟ್ -vishwanews24

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…

2 hours ago

ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ -vishwanews24

ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…

2 hours ago

ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ -Vishwanews24

ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…

2 hours ago

ಮೂಳೂರು ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ “ಪಿಲಿಏಸ-2026” ಕಾರ್ಯಕ್ರಮ -vishwanews24

ಮೂಳೂರು ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ "ಪಿಲಿಏಸ-2026" ಕಾರ್ಯಕ್ರಮ  ಉಚಿತ ಅಂಬ್ಯುಲೆನ್ಸ್ ಸೇವೆ ಗೆ ನಿಧಿ ಸಂಗ್ರಹ :…

2 hours ago

ಉಡುಪಿ : ವ್ಯಕ್ತಿ ನಾಪತ್ತೆ -vishwanews24

ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ವಿಶ್ವನಾಥ ಶೆಟ್ಟಿ (38) ಎಂಬ…

19 hours ago