ಲಕ್ನೋ: ಮೈತ್ರಿಯನ್ನು ಹೇಗೆ ನಿಭಾಯಿಸಬೇಕು ಅಂತ ಬಿಜೆಪಿಯವರಿಗೆ ಚೆನ್ನಾಗಿ ಗೊತ್ತಿದೆ. ಸಮ್ಮಿಶ್ರ ಸರ್ಕಾರವನ್ನು ಹೇಗೆ ಮುನ್ನಡೆಸಬೇಕು ಅನ್ನೋದನ್ನ ಬಿಜೆಪಿ ನೋಡಿ ಕಾಂಗ್ರೆಸ್ ಕಲಿತುಕೊಳ್ಳಬೇಕು ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
”ಮೈತ್ರಿಕೂಟ ಎಂದಮೇಲೆ ಏರಿಳಿತಗಳು ಇದ್ದೇ ಇರುತ್ತವೆ. ನೇತೃತ್ವ ವಹಿಸಿದವರು ಅದನ್ನೆಲ್ಲ ಸಂಭಾಳಿಸಿಕೊಂಡು, ಎಲ್ಲರನ್ನೂ ಜತೆಗೆ ಕರೆದುಕೊಂಡು ಹೋಗಬೇಕು. ತನ್ನ ಕೆಲವು ಸೀಟುಗಳನ್ನು ಬಿಟ್ಟು ಕೊಟ್ಟಾದರೂ ಮೈತ್ರಿ ಉಳಿಸಿಕೊಳ್ಳಬೇಕು ಎಂಬ ನೀತಿಯನ್ನು ಬಿಜೆಪಿ ಅನುಸರಿಸುತ್ತಿದೆ. ಮಿತ್ರಪಕ್ಷಗಳ ಎಲ್ಲ ಒತ್ತಡಗಳನ್ನೂ ಸಹಿಸಿಕೊಂಡು ಮೈತ್ರಿ ಉಳಿಸಿಕೊಳ್ಳುವಲ್ಲಿ ಆ ಪಕ್ಷ ಯಶಸ್ವಿಯಾಗಿದೆ,” ಎಂದು ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅಖಿಲೇಶ್ ಹೇಳಿದ್ದಾರೆ.
ಬಿಜೆಪಿ ಮೈತ್ರಿಯನ್ನು ಹೇಗೆ ಉಳಿಸಿಕೊಳ್ಳುತ್ತದೆ ಅನ್ನೋದಕ್ಕೆ ಬಿಹಾರ ಅತ್ಯುತ್ತಮ ಉದಾಹರಣೆ. 2014ರಲ್ಲಿ ಅಲ್ಲಿ 40 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 22ರಲ್ಲಿ, ಜೆಡಿಯು ಕೇವಲ ಎರಡರಲ್ಲಿ ಗೆದ್ದಿತ್ತು. ಆದರೂ ಈ ಸಲ ಜೆಡಿಯು ಜತೆ ಸಮಾನ ಕ್ಷೇತ್ರಗಳಲ್ಲಿ (50:50) ಸ್ಪರ್ಧಿಸುವ ಒಪ್ಪಂದ ಮಾಡಿಕೊಂಡು ಮೈತ್ರಿ ಮಾಡಲು ನಿರ್ಧರಿಸಿತ್ತು. ಕಾಂಗ್ರೆಸ್ನವರು ಬಿಜೆಪಿಯಿಂದ ಮೈತ್ರಿ ಹೇಗೆ ಉಳಿಸಿಕೊಳ್ಳಬೇಕು, ನಿಭಾಯಿಸಬೇಕು ಅಂತ ಕಲಿಯಬೇಕು ಎಂದಿದ್ದಾರೆ.
ಕಾಂಗ್ರೆಸ್ ದೊಡ್ಡ ಪಕ್ಷ. ಅವರು ಇತರೇ ಪಕ್ಷಗಳಿಗೆ ನೆರವಾಗಬೇಕು. ಉದಾಹರಣೆಗೆ, ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಹಾಗೂ ದಿಲ್ಲಿಯಲ್ಲಿ ಅರವಿಂದ್ ಕೇಜ್ರಿವಾಲ್ ಅವರಿಗೆ ನೆರವು ನೀಡಬೇಕು. ಬಿಜೆಪಿ ವಿರುದ್ಧ ಹೋರಾಡುವ ಶಕ್ತಿ ಈ ಇಬ್ಬರಿಗೂ ನಾಯಕರಿಗೆ ಇದೆ ಎಂದು ಅಖಿಲೇಶ್ ಯಾದವ್ ತಿಳಿದ್ದಾರೆ.
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…