ಬಳ್ಳಾರಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಬೆಳ್ಳಿ ಹೆಲಿಕಾಪ್ಟರ್ ನೀಡುವ ಮೂಲಕ ಹರಕೆ ತೀರಿಸಿದ್ದಾರೆ.
ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮೈಲಾರಕ್ಕೆ 2018 ರಲ್ಲಿ ಹೆಲಿಕಾಪ್ಟರ್(Helicopter) ನಲ್ಲಿ ಬಂದು ಹೋದ ಬಳಿಕ ಹಲವು ಸಮಸ್ಯೆಗಳು ಉಂಟಾದ ಹಿನ್ನೆಲೆಯಲ್ಲಿ ದೇವಾಲಯದ ಗುರುಗಳ ಸಲಹೆ ಮೇರೆಗೆ ಡಿ.ಕೆ.ಶಿವಕುಮಾರ್ ಅವರು ಇಂದು ದೇವಸ್ಥಾನಕ್ಕೆ ಬೆಳ್ಳಿ ಹೆಲಿಕಾಪ್ಟರ್ ನೀಡಿದ್ದಾರೆ.ಮೈಲಾರಲಿಂಗ ದೇಗುಲಕ್ಕೆ ಬೆಳ್ಳಿ ಹೆಲಿಕಾಪ್ಟರ್ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
2018 ರ ಫೆಬ್ರವರಿಯಲ್ಲಿ ಸುಕ್ಷೇತ್ರದಲ್ಲಿ ಜರುಗಿದ ಕಾರಣೀಕ ಮಹೋತ್ಸವಕ್ಕೆ ಡಿ.ಕೆ.ಶಿವಕುಮಾರ್ ಹೆಲಿಕಾಪ್ಟರ್ನಲ್ಲಿ ಬಂದಿದ್ದರು. ಸುಕ್ಷೇತ್ರದಲ್ಲಿ ಹೆಲಿಕಾಪ್ಟರ್ ಹಾರಾಟ ನಡೆಸಿ ಇಲ್ಲಿನ ದೈವಿಕ ಪರಂಪರೆಗೆ ಡಿಕೆಶಿ ಅಪಚಾರ ಎಸಗಿ, ಸ್ವಾಮಿಯ ಅವಕೃಪೆಗೆ ಗುರಿಯಾಗಿದ್ದಾರೆ ಎಂದು ವ್ಯಾಖ್ಯಾನಿಸಲಾಗಿತ್ತು. ಕಾಕತಾಳೀಯ ಎಂಬಂತೆ ಕೆಲವೇ ದಿನಗಳಲ್ಲಿ ಜಾರಿ ನಿರ್ದೇಶನಾಲಯ ದಾಳಿಗೆ ತುತ್ತಾಗಿ ಜೈಲು ಸೇರಿದ್ದರು. ಆಗ ಸಂಕಷ್ಟ ನಿವಾರಣೆಗೆ ಪ್ರಾರ್ಥಿಸಿ ಶಾಸಕ ಪಿ.ಟಿ.ಪರಮೇಶ್ವರನಾಯ್ಕ ಸ್ವಾಮಿಗೆ ಪೂಜೆ ಸಲ್ಲಿಸಿದ್ದರು.
ಆ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಇಂದು ಬೆಳಿಗ್ಗೆ ಸುಕ್ಷೇತ್ರಕ್ಕೆ ಭೇಟಿ ನೀಡಿ, ಸ್ವಾಮಿ ಸನ್ನಿಧಿಯಲ್ಲಿ ದೀರ್ಘದಂಡ ನಮಸ್ಕಾರ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಬೆಳ್ಳಿ ಹೆಲಿಕಾಪ್ಟರ್ ಮಾದರಿಯನ್ನು ಸ್ವಾಮಿಗೆ ಅರ್ಪಿಸಿದರು.
‘ಮಾಹಿತಿ ಕೊರತೆಯಿಂದ ಈ ಹಿಂದೆ ಸುಕ್ಷೇತ್ರಕ್ಕೆ ಹೆಲಿಕಾಪ್ಟರ್ನಲ್ಲಿ ಬಂದು ಹೋಗಿದ್ದೆ. ಸುಕ್ಷೇತ್ರದ ಧಾರ್ಮಿಕ ಪರಂಪರೆಗೆ ಅಪಚಾರವಾಗಿದೆ ಎಂದು ನಂತರ ತಿಳಿಯಿತು. ನಮ್ಮ ಕಾರ್ಯಕರ್ತರು, ಮುಖಂಡರು ದೋಷ ಪರಿಹಾರವಾಗಿ ಈಗಾಗಲೇ ಪೂಜೆ ಸಲ್ಲಿಸಿದ್ದಾರೆ. ಕಾರ್ಯಕರ್ತರ ಅಭಿಲಾಷೆಯಂತೆ ಸ್ವಾಮಿಯಲ್ಲಿ ಕ್ಷಮಾ ಕೋರಿ ಪೂಜೆ ಸಲ್ಲಿಸಿದ್ದೇನೆ. ನನ್ನ ಕಾರ್ಯಕರ್ತರೊಬ್ಬರು ಸ್ವಾಮಿಗೆ ಬೆಳ್ಳಿ ಹೆಲಿಕಾಪ್ಟರ್ ಅರ್ಪಿಸಿದ್ದಾರೆ. ರಾಜ್ಯಕ್ಕೆ ಒಳ್ಳೆಯದಾಗಲಿ ಎಂದು ಸ್ವಾಮಿಯಲ್ಲಿ ಪ್ರಾರ್ಥಿಸಿದ್ದೇನೆ’ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…