Featured

ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಡಿಕೆಶಿ ವಿಶೇಷ ಪೂಜೆ , ದೇವಸ್ಥಾನಕ್ಕೆ ಬೆಳ್ಳಿ ಹೆಲಿಕಾಪ್ಟರ್ ಕಾಣಿಕೆ -Vishwanews24

ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಡಿಕೆಶಿ ವಿಶೇಷ ಪೂಜೆ ,

ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಬೆಳ್ಳಿ ಹೆಲಿಕಾಪ್ಟರ್ ಕಾಣಿಕೆ  ನೀಡುವ ಮೂಲಕ  ಹರಕೆ ತೀರಿಸಿದ ಡಿಕೆಶಿ -Vishwanews24

ಬಳ್ಳಾರಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಬೆಳ್ಳಿ ಹೆಲಿಕಾಪ್ಟರ್ ನೀಡುವ ಮೂಲಕ ಹರಕೆ ತೀರಿಸಿದ್ದಾರೆ.

ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮೈಲಾರಕ್ಕೆ 2018 ರಲ್ಲಿ ಹೆಲಿಕಾಪ್ಟರ್(Helicopter) ನಲ್ಲಿ ಬಂದು ಹೋದ ಬಳಿಕ ಹಲವು ಸಮಸ್ಯೆಗಳು ಉಂಟಾದ ಹಿನ್ನೆಲೆಯಲ್ಲಿ ದೇವಾಲಯದ ಗುರುಗಳ ಸಲಹೆ ಮೇರೆಗೆ ಡಿ.ಕೆ.ಶಿವಕುಮಾರ್ ಅವರು ಇಂದು ದೇವಸ್ಥಾನಕ್ಕೆ ಬೆಳ್ಳಿ ಹೆಲಿಕಾಪ್ಟರ್ ನೀಡಿದ್ದಾರೆ.ಮೈಲಾರಲಿಂಗ ದೇಗುಲಕ್ಕೆ ಬೆಳ್ಳಿ ಹೆಲಿಕಾಪ್ಟರ್ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

2018 ರ ಫೆಬ್ರವರಿಯಲ್ಲಿ ಸುಕ್ಷೇತ್ರದಲ್ಲಿ ಜರುಗಿದ ಕಾರಣೀಕ ಮಹೋತ್ಸವಕ್ಕೆ ಡಿ.ಕೆ.ಶಿವಕುಮಾರ್ ಹೆಲಿಕಾಪ್ಟರ್‌ನಲ್ಲಿ ಬಂದಿದ್ದರು. ಸುಕ್ಷೇತ್ರದಲ್ಲಿ ಹೆಲಿಕಾಪ್ಟರ್ ಹಾರಾಟ ನಡೆಸಿ ಇಲ್ಲಿನ ದೈವಿಕ ಪರಂಪರೆಗೆ ಡಿಕೆಶಿ ಅಪಚಾರ ಎಸಗಿ, ಸ್ವಾಮಿಯ ಅವಕೃಪೆಗೆ ಗುರಿಯಾಗಿದ್ದಾರೆ ಎಂದು ವ್ಯಾಖ್ಯಾನಿಸಲಾಗಿತ್ತು. ಕಾಕತಾಳೀಯ ಎಂಬಂತೆ ಕೆಲವೇ ದಿನಗಳಲ್ಲಿ ಜಾರಿ ನಿರ್ದೇಶನಾಲಯ ದಾಳಿಗೆ ತುತ್ತಾಗಿ ಜೈಲು ಸೇರಿದ್ದರು. ಆಗ ಸಂಕಷ್ಟ ನಿವಾರಣೆಗೆ ಪ್ರಾರ್ಥಿಸಿ ಶಾಸಕ ಪಿ.ಟಿ.ಪರಮೇಶ್ವರನಾಯ್ಕ ಸ್ವಾಮಿಗೆ ಪೂಜೆ ಸಲ್ಲಿಸಿದ್ದರು.

ಆ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಇಂದು ಬೆಳಿಗ್ಗೆ ಸುಕ್ಷೇತ್ರಕ್ಕೆ ಭೇಟಿ ನೀಡಿ, ಸ್ವಾಮಿ ಸನ್ನಿಧಿಯಲ್ಲಿ ದೀರ್ಘದಂಡ ನಮಸ್ಕಾರ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಬೆಳ್ಳಿ ಹೆಲಿಕಾಪ್ಟರ್ ಮಾದರಿಯನ್ನು ಸ್ವಾಮಿಗೆ ಅರ್ಪಿಸಿದರು.

‘ಮಾಹಿತಿ ಕೊರತೆಯಿಂದ ಈ ಹಿಂದೆ ಸುಕ್ಷೇತ್ರಕ್ಕೆ ಹೆಲಿಕಾಪ್ಟರ್‌ನಲ್ಲಿ ಬಂದು ಹೋಗಿದ್ದೆ. ಸುಕ್ಷೇತ್ರದ ಧಾರ್ಮಿಕ ಪರಂಪರೆಗೆ ಅಪಚಾರವಾಗಿದೆ ಎಂದು ನಂತರ ತಿಳಿಯಿತು. ನಮ್ಮ ಕಾರ್ಯಕರ್ತರು, ಮುಖಂಡರು ದೋಷ ಪರಿಹಾರವಾಗಿ ಈಗಾಗಲೇ ಪೂಜೆ ಸಲ್ಲಿಸಿದ್ದಾರೆ. ಕಾರ್ಯಕರ್ತರ ಅಭಿಲಾಷೆಯಂತೆ ಸ್ವಾಮಿಯಲ್ಲಿ ಕ್ಷಮಾ ಕೋರಿ ಪೂಜೆ ಸಲ್ಲಿಸಿದ್ದೇನೆ. ನನ್ನ ಕಾರ್ಯಕರ್ತರೊಬ್ಬರು ಸ್ವಾಮಿಗೆ ಬೆಳ್ಳಿ ಹೆಲಿಕಾಪ್ಟರ್ ಅರ್ಪಿಸಿದ್ದಾರೆ. ರಾಜ್ಯಕ್ಕೆ ಒಳ್ಳೆಯದಾಗಲಿ ಎಂದು ಸ್ವಾಮಿಯಲ್ಲಿ ಪ್ರಾರ್ಥಿಸಿದ್ದೇನೆ’ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

12 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

12 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago