ಬಳ್ಳಾರಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಬೆಳ್ಳಿ ಹೆಲಿಕಾಪ್ಟರ್ ನೀಡುವ ಮೂಲಕ ಹರಕೆ ತೀರಿಸಿದ್ದಾರೆ.
ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮೈಲಾರಕ್ಕೆ 2018 ರಲ್ಲಿ ಹೆಲಿಕಾಪ್ಟರ್(Helicopter) ನಲ್ಲಿ ಬಂದು ಹೋದ ಬಳಿಕ ಹಲವು ಸಮಸ್ಯೆಗಳು ಉಂಟಾದ ಹಿನ್ನೆಲೆಯಲ್ಲಿ ದೇವಾಲಯದ ಗುರುಗಳ ಸಲಹೆ ಮೇರೆಗೆ ಡಿ.ಕೆ.ಶಿವಕುಮಾರ್ ಅವರು ಇಂದು ದೇವಸ್ಥಾನಕ್ಕೆ ಬೆಳ್ಳಿ ಹೆಲಿಕಾಪ್ಟರ್ ನೀಡಿದ್ದಾರೆ.ಮೈಲಾರಲಿಂಗ ದೇಗುಲಕ್ಕೆ ಬೆಳ್ಳಿ ಹೆಲಿಕಾಪ್ಟರ್ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
2018 ರ ಫೆಬ್ರವರಿಯಲ್ಲಿ ಸುಕ್ಷೇತ್ರದಲ್ಲಿ ಜರುಗಿದ ಕಾರಣೀಕ ಮಹೋತ್ಸವಕ್ಕೆ ಡಿ.ಕೆ.ಶಿವಕುಮಾರ್ ಹೆಲಿಕಾಪ್ಟರ್ನಲ್ಲಿ ಬಂದಿದ್ದರು. ಸುಕ್ಷೇತ್ರದಲ್ಲಿ ಹೆಲಿಕಾಪ್ಟರ್ ಹಾರಾಟ ನಡೆಸಿ ಇಲ್ಲಿನ ದೈವಿಕ ಪರಂಪರೆಗೆ ಡಿಕೆಶಿ ಅಪಚಾರ ಎಸಗಿ, ಸ್ವಾಮಿಯ ಅವಕೃಪೆಗೆ ಗುರಿಯಾಗಿದ್ದಾರೆ ಎಂದು ವ್ಯಾಖ್ಯಾನಿಸಲಾಗಿತ್ತು. ಕಾಕತಾಳೀಯ ಎಂಬಂತೆ ಕೆಲವೇ ದಿನಗಳಲ್ಲಿ ಜಾರಿ ನಿರ್ದೇಶನಾಲಯ ದಾಳಿಗೆ ತುತ್ತಾಗಿ ಜೈಲು ಸೇರಿದ್ದರು. ಆಗ ಸಂಕಷ್ಟ ನಿವಾರಣೆಗೆ ಪ್ರಾರ್ಥಿಸಿ ಶಾಸಕ ಪಿ.ಟಿ.ಪರಮೇಶ್ವರನಾಯ್ಕ ಸ್ವಾಮಿಗೆ ಪೂಜೆ ಸಲ್ಲಿಸಿದ್ದರು.
ಆ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಇಂದು ಬೆಳಿಗ್ಗೆ ಸುಕ್ಷೇತ್ರಕ್ಕೆ ಭೇಟಿ ನೀಡಿ, ಸ್ವಾಮಿ ಸನ್ನಿಧಿಯಲ್ಲಿ ದೀರ್ಘದಂಡ ನಮಸ್ಕಾರ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಬೆಳ್ಳಿ ಹೆಲಿಕಾಪ್ಟರ್ ಮಾದರಿಯನ್ನು ಸ್ವಾಮಿಗೆ ಅರ್ಪಿಸಿದರು.
‘ಮಾಹಿತಿ ಕೊರತೆಯಿಂದ ಈ ಹಿಂದೆ ಸುಕ್ಷೇತ್ರಕ್ಕೆ ಹೆಲಿಕಾಪ್ಟರ್ನಲ್ಲಿ ಬಂದು ಹೋಗಿದ್ದೆ. ಸುಕ್ಷೇತ್ರದ ಧಾರ್ಮಿಕ ಪರಂಪರೆಗೆ ಅಪಚಾರವಾಗಿದೆ ಎಂದು ನಂತರ ತಿಳಿಯಿತು. ನಮ್ಮ ಕಾರ್ಯಕರ್ತರು, ಮುಖಂಡರು ದೋಷ ಪರಿಹಾರವಾಗಿ ಈಗಾಗಲೇ ಪೂಜೆ ಸಲ್ಲಿಸಿದ್ದಾರೆ. ಕಾರ್ಯಕರ್ತರ ಅಭಿಲಾಷೆಯಂತೆ ಸ್ವಾಮಿಯಲ್ಲಿ ಕ್ಷಮಾ ಕೋರಿ ಪೂಜೆ ಸಲ್ಲಿಸಿದ್ದೇನೆ. ನನ್ನ ಕಾರ್ಯಕರ್ತರೊಬ್ಬರು ಸ್ವಾಮಿಗೆ ಬೆಳ್ಳಿ ಹೆಲಿಕಾಪ್ಟರ್ ಅರ್ಪಿಸಿದ್ದಾರೆ. ರಾಜ್ಯಕ್ಕೆ ಒಳ್ಳೆಯದಾಗಲಿ ಎಂದು ಸ್ವಾಮಿಯಲ್ಲಿ ಪ್ರಾರ್ಥಿಸಿದ್ದೇನೆ’ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ…
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…