Featured

ಮೈಶುಗರ್ ಕಾರ್ಖಾನೆ ಬಾಯ್ಲರ್‌ಗೆ ಬಿದ್ದು ಕಾರ್ಮಿಕ ದುರ್ಮರಣ – vishwanews24

ಮೈಶುಗರ್ ಕಾರ್ಖಾನೆ ಬಾಯ್ಲರ್‌ಗೆ ಬಿದ್ದು ಕಾರ್ಮಿಕ ದುರ್ಮರಣ

ಮಂಡ್ಯ: ಮೈಶುಗರ್‌ ಕಾರ್ಖಾನೆ ಬಾಯ್ಲರ್‌ಗೆ ಬಿದ್ದು ಕಾರ್ಮಿಕನೊಬ್ಬ ದುರ್ಮರಣಕ್ಕೀಡಾದ ಘಟನೆ ನಡೆದಿದೆ.

ಕೆ.ಶೆಟ್ಟಿಹಳ್ಳಿಯ ಚರಣ್ ಕುಮಾರ್ (33) ಮೃತ ಕಾರ್ಮಿಕ. ಆಡಳಿತ ಮಂಡಳಿ ನಿರ್ಲಕ್ಷ್ಯಕ್ಕೆ ಕಾರ್ಮಿಕ ಸಾವನ್ನಪ್ಪಿದ್ದಾನೆಂದು ಆರೋಪಿಸಲಾಗಿದೆ. ಮೃತ ಕಾರ್ಮಿಕನ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಕಾರ್ಖಾನೆ ಎದುರು ಪ್ರತಿಭಟನೆ ನಡೆಸಿದ್ದಾರೆ.

ಇದನ್ನೂ ಓದಿ:

ಶ್ರೇಯ ಏಜೆನ್ಸಿಯಡಿ ಗುತ್ತಿಗೆ ಆಧಾರದಲ್ಲಿ ಚರಣ್‌ ಒಂದೂವರೆ ವರ್ಷದಿಂದ ಕೆಲಸ ಮಾಡುತ್ತಿದ್ದ. ಸೆಪ್ಟೆಂಬರ್ 3ರಂದು ಬಾಯ್ಲರ್‌ಗೆ ಬಿದ್ದಿದ್ದ. ಆತನನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಕಾರ್ಮಿಕ ಮೃತಪಟ್ಟಿದ್ದಾನೆ.

ಸೂಕ್ತ ಪರಿಹಾರಕ್ಕಾಗಿ ಮೃತ ಚರಣ್ ಕುಟುಂಬಸ್ಥರು ಹಾಗೂ ಗ್ರಾಮಸ್ಥ ಆಗ್ರಹಿಸಿದ್ದಾರೆ. ಪ್ರತಿಭಟನೆಗೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಕಾರ್ಖಾನೆ ಎದುರು ಬಿಗಿ ಪೊಲೀಸ್ ಬಂದೋ ಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ.

ಇದನ್ನೂ ಓದಿ: 

ಅಧಿಕಾರಿಗಳು ಹಾಗೂ ಮೈಶುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಅವರು ಪ್ರತಿಭಟನಾ ಸ್ಥಳಕ್ಕೆ ಬಂದಿಲ್ಲ ಎಂದು ಮೃತ ಕಾರ್ಮಿಕನ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ. ನಮಗೆ ನ್ಯಾಯ ಬೇಕು ಎಂದು ಪಟ್ಟು ಹಿಡಿದಿದ್ದಾರೆ

Vishwa News 24

Recent Posts

ಕಾರ್ಕಳದ ಸಮಗ್ರ ಅಭಿವೃದ್ಧಿಗೆ ಅನುದಾನ ಬಿಡುಗಡೆಗೆ ಆಗ್ರಹಿಸಿ ಸಿಎಂ ಭೇಟಿ ಮಾಡಿದ ಶಾಸಕ ವಿ. ಸುನಿಲ್ ಕುಮಾರ್ – vishwanews24

ಕಾರ್ಕಳದ ಸಮಗ್ರ ಅಭಿವೃದ್ಧಿಗೆ ಅನುದಾನ ಬಿಡುಗಡೆಗೆ ಆಗ್ರಹಿಸಿ ಸಿಎಂ ಭೇಟಿ ಮಾಡಿದ ಶಾಸಕ ವಿ. ಸುನಿಲ್ ಕುಮಾರ್ ಕಾರ್ಕಳ: ಕಾರ್ಕಳ…

36 minutes ago

ಮೋದಿ ಸಾರ್ವಜನಿಕ ಜೀವನಕ್ಕೆ 25 ವರ್ಷ: ಸೆ.17ರಿಂದ ಬಿಜೆಪಿಯ ಸಂಕಲ್ಪ ಸೇವಾ ಅಭಿಯಾನ – vishwanews24

ಮೋದಿ ಸಾರ್ವಜನಿಕ ಜೀವನಕ್ಕೆ 25 ವರ್ಷ: ಸೆ.17ರಿಂದ ಬಿಜೆಪಿಯ ಸಂಕಲ್ಪ ಸೇವಾ ಅಭಿಯಾನ ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ…

53 minutes ago

ಮಂಗಳೂರಿನ ಸಚಿವ ಸಂಪುಟ ಸಭೆಯಲ್ಲಿ ತುಳುವನ್ನು 2ನೇ ಅಧಿಕೃತ ಭಾಷೆಯಾಗಿ ಘೋಷಿಸಿ: ವಿ ಸುನೀಲ್ ಕುಮಾರ್ ಆಗ್ರಹ – vishwanews24

ಮಂಗಳೂರಿನ ಸಚಿವ ಸಂಪುಟ ಸಭೆಯಲ್ಲಿ ತುಳುವನ್ನು 2ನೇ ಅಧಿಕೃತ ಭಾಷೆಯಾಗಿ ಘೋಷಿಸಿ: ವಿ ಸುನೀಲ್ ಕುಮಾರ್ ಆಗ್ರಹ ಬೆಂಗಳೂರು: ‘ಸೆಪ್ಟೆಂಬರ್…

2 hours ago

ಪುತ್ತೂರು : ವಿದ್ಯಾರ್ಥಿನಿಲಯದಲ್ಲಿ ಬಟ್ಟೆ ಕಳ್ಳತನ ಪ್ರಕರಣ; ಆರೋಪಿ ಬಂಧನ – vishwanews24

ಪುತ್ತೂರು : ವಿದ್ಯಾರ್ಥಿನಿಲಯದಲ್ಲಿ ಬಟ್ಟೆ ಕಳ್ಳತನ ಪ್ರಕರಣ; ಆರೋಪಿ ಬಂಧನ  ಬೆಳ್ಳಾರೆ: ಸರ್ಕಾರಿ ವಿದ್ಯಾರ್ಥಿನಿಲಯಕ್ಕೆ ಅತಿಕ್ರಮ ಪ್ರವೇಶಿಸಿ ವಿದ್ಯಾರ್ಥಿನಿಯರು ಒಣಗಿಸಲು…

2 hours ago

ಭೀಕರ ರಸ್ತೆ ಅಪಘಾತ : ಟ್ರ್ಯಾಕ್ಟರ್‌ಗೆ KSRTC ಡಿಕ್ಕಿ ; ಬಸ್ ಚಾಲಕ ಸ್ಥಳದಲ್ಲೇ ಸಾವು – vishwanews24

ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ : ಟ್ರ್ಯಾಕ್ಟರ್‌ಗೆ ಬಸ್ ಡಿಕ್ಕಿ  KSRTC ಚಾಲಕ ಸ್ಥಳದಲ್ಲೇ ಸಾವು - ಹಲವು ಪ್ರಯಾಣಿಕರಿಗೆ…

2 hours ago

ಸತೀಶ್​​ ಜಾರಕಿಹೊಳಿಗೆ ಇಡಿ ದಾಳಿ ರಾಜಕೀಯ ಪ್ರೇರಿತ ; ಅವರು ಯಾವುದೇ ತಪ್ಪು ಮಾಡಿಲ್ಲ : ಸಿಎಂ ಡಿಕೆಶಿ – vishwanews24

ಸತೀಶ್​​ ಜಾರಕಿಹೊಳಿ ಅವರ ಬೆಳವಣಿಗೆ ಬಿಜೆಪಿಯವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ.. ನಮ್ಮ ಕುಟುಂಬಸ್ಥರು ವಿದೇಶದಲ್ಲಿ ಬಿಸಿನೆಸ್ ಮಾಡುವುದು ತಪ್ಪಾ?.. ಅವರ ಜೊತೆ…

4 hours ago