ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ ಕಂಬಳ ಆಯೋಜನೆಗೆ ಸಿದ್ಧತೆಗಳು ಆರಂಭಗೊಂಡಿದ್ದು, ಕಂಬಳ ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಬುಧವಾರ ಚಾಲನೆ ನೀಡಿದರು.
ಬುಧವಾರ ಭೂಮಿ ಪೂಜೆ ನೆರವೇರಿಸಿದ ಬಳಿಕ ಕಂಬಳ ಆಯೋಜನೆಗೆ ಅಗತ್ಯವಿರುವ ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಯಿತು. ಕಂಬಳ ಕ್ರೀಡೆಗೆ ಬೇಕಾಗುವ ಟ್ರ್ಯಾಕ್ ಹಾಗೂ ಇತರ ಮೂಲಸೌಕರ್ಯಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಈ ಸಂದರ್ಭದಲ್ಲಿ ಕಂಬಳ ಆಯೋಜನೆಗೆ ಸಂಬಂಧಿಸಿದಂತೆ ಅಗತ್ಯ ಸಿದ್ಧತೆಗಳು ಹಾಗೂ ಕಾಮಗಾರಿಗಳ ಕುರಿತು ಅಧಿಕಾರಿಗಳು ಮತ್ತು ಆಯೋಜಕರೊಂದಿಗೆ ಚರ್ಚೆ ನಡೆಸಲಾಯಿತು.
ರೈ ಎಸ್ಟೇಟ್ ಎಕ್ವಿಪ್ಮೆಂಟ್ಸ್ನಿಂದ ಬಾರಿಕೇಡ್, ಟೈಲ್ಸ್ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಸಹಕಾರ ನೀಡಲಾಗುತ್ತಿದ್ದು, ದಕ್ಷಿಣ ಕನ್ನಡ ಮತ್ತು ಕರಾವಳಿ ಭಾಗಗಳ ಕಂಬಳ ಪರಂಪರೆಯನ್ನು ಮೈಸೂರಿನಲ್ಲಿ ಪರಿಚಯಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಕಂಬಳದ ಮೂಲಕ ಕರಾವಳಿಯ ಸಾಂಪ್ರದಾಯಿಕ ಕ್ರೀಡೆ ಹಾಗೂ ಸಂಸ್ಕೃತಿಯನ್ನು ಮೈಸೂರಿನಲ್ಲಿ ಮತ್ತಷ್ಟು ಜನಪ್ರಿಯಗೊಳಿಸುವ ನಿರೀಕ್ಷೆ ವ್ಯಕ್ತವಾಗಿದೆ.
ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…
ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…
ಕರ್ನಾಟಕದಲ್ಲಿ ಹೆಚ್ಚುತ್ತಿರುವ H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…
ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…
ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…
ಶಿರ್ವ : ಹುಚ್ಚುನಾಯಿ ಹಾವಳಿ ; ಹಲವರಿಗೆ ಕಡಿತ , ಸ್ಥಳೀಯರಲ್ಲಿ ಆತಂಕ ಶಿರ್ವ: ಶಿರ್ವ ಮತ್ತು ಕುತ್ಯಾರು ಗ್ರಾ.ಪಂ.…