ನವದೆಹಲಿ : ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ಜ, 22 ರಂದು ಪ್ರತಿಷ್ಠಾಪನೆಗೊಳ್ಳಲಿರುವ ಮೂರ್ತಿಯನ್ನು ಅಂತಿಮಗೊಳಿಸಲಾಗಿದೆ. ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೆತ್ತನೆಯ ಮೂರ್ತಿಗೆ ಅಯೋಧ್ಯೆ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠೆ ಮಾಡಲಾಗುತ್ತಿದೆ ಎಂದು ರಾಮಮಂದಿರ ಟ್ರಸ್ಟ್ ಮೂಲಗಳಿಂದ ತಿಳಿದುಬಂದಿದೆ.
ದೇಶದ ಮೂವರು ಪ್ರಮುಖ ಶಿಲ್ಪಿಗಳಾದ ಮೈಸೂರಿನ ಅರುಣ್ ಯೋಗಿರಾಜ್, ಬೆಂಗಳೂರಿನ ಜಿ.ಎಲ್.ಭಟ್ ಮತ್ತು ರಾಜಸ್ಥಾನದ ಸತ್ಯನಾರಾಯಣ ಪಾಂಡೆ ಅವರಿಗೆ ರಾಮಲಲ್ಲಾ ಮೂರ್ತಿಯನ್ನು ತಯಾರಿಸುವ ಜವಾಬ್ದಾರಿಯನ್ನು ವಹಿಸಲಾಗಿತ್ತು. ಮೂವರೂ ಶಿಲ್ಪಿಗಳು ತಮ್ಮ ಕಲ್ಪನೆಯ ರಾಮ ಲಲ್ಲಾನ ಮೂರ್ತಿಯನ್ನು ಕೆತ್ತಿ ಹಸ್ತಾಂತರ ಕೂಡ ಮಾಡಿದ್ದರು.
ಇನ್ನು ಈಗಾಗಲೇ ಹಸ್ತಾಂತವಾಗಿರುವ ಮೂರ್ತಿಗಳ ಪೈಕಿ ಒಂದನ್ನು ಆಯ್ಕೆ ಮಾಡಲು ಟ್ರಸ್ಟ್ ಒಂದು ಸಮಿತಿಯನ್ನು ರಚನೆ ಮಾಡಿತ್ತು. ಈ ಸಮಿತಿ ಮೂರು ಮೂರ್ತಿಗಳ ಕೆತ್ತನೆಗೆ ಗುಣಮಟ್ಟ, ರಾಮನ ಬಾಲ್ಯದ ನೋಟ, ದೈವತ್ವ ಭಾವವನ್ನು ಪರಿಶೀಲಿಸಿದರು. ಬಳಿಕ ರಾಮ ಜನ್ಮಭೂಮಿ ಟ್ರಸ್ಟ್ನ ಸದಸ್ಯರ ನಡುವೆ ಮತದಾನ ನಡೆದು ಮೈಸೂರಿನ ಶಿಲ್ಪಿ ಯೋಗಿರಾಜ್ ಅವರ ಮೂರ್ತಿಯನ್ನು ಆಯ್ಕೆ ಮಾಡಲಾಯಿತು ಎಂದು ತಿಳಿದುಬಂದಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…