Featured

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ

ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ ಫಿಕ್ಸ್‌ ಆಗಿದೆ. ಅಕ್ಟೋಬರ್‌ 11 ರಂದು ಚಾಮುಂಡಿ ಬೆಟ್ಟದಲ್ಲಿ  ದಸರಾ ಉದ್ಘಾಟನೆಯಾಗಲಿದೆ.

ಈ ಬಾರಿ ಜುಲೈ 26 ರಂದು ಗಜಪಯಣ ಆರಂಭವಾಗಲಿದೆ. ಅಕ್ಟೋಬರ್‌ 11ಕ್ಕೆ ದಸರಾ ಉದ್ಘಾಟನೆಗೊಳ್ಳಲಿದೆ. ಅ.21 ರಂದು ವಿಜಯದಸಮಿ ಜಂಬೂಸವಾರಿ ನಡೆಯಲಿದೆ. ಅಂದು ಸಾಯಂಕಾಲ 4:10 ರ ಮೀನಾ ಲಗ್ನದಲ್ಲಿ ಜಂಬೂಸವಾರಿಗೆ ಮುಖ್ಯಮಂತ್ರಿಗಳು ಪುಷ್ಪಾರ್ಚನೆ ಸಲ್ಲಿಸಲಿದ್ದಾರೆ.

ದಸರಾ ಉದ್ಘಾಟಕರನ್ನು ನಿರ್ಣಯಿಸುವ ಅಧಿಕಾರ ಸಿಎಂ ನೀಡುವ ಸಾಧ್ಯತೆ ಇದೆ. ಬುಕರ್‌ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್‌ ಅವರು ಕಳೆದ ವರ್ಷ ದಸರಾ ಉದ್ಘಾಟನೆ ಮಾಡಿದ್ದರು.

ದಿನಾಂಕಗಳ ವಿವರ:
ಈ ವರ್ಷದ ದಸರಾ ಮಹೋತ್ಸವವು ಅಕ್ಟೋಬರ್ 11 ರಿಂದ ಅಕ್ಟೋಬರ್ 21 ರವರೆಗೆ ಜರುಗಲಿದೆ.
ಅಕ್ಟೋಬರ್ 11: ಚಾಮುಂಡಿ ಬೆಟ್ಟದಲ್ಲಿ ದಸರಾ ಮಹೋತ್ಸವಕ್ಕೆ ಅಧಿಕೃತ ಚಾಲನೆ ದೊರೆಯಲಿದೆ. ಉದ್ಘಾಟಕರನ್ನು ಆಯ್ಕೆ ಮಾಡುವ ಸಂಪೂರ್ಣ ಅಧಿಕಾರವನ್ನು ಮುಖ್ಯಮಂತ್ರಿಗಳಿಗೆ ನೀಡಲು ಸಭೆಯಲ್ಲಿ ನಿರ್ಧರಿಸಲಾಗಿದೆ.
ಅಕ್ಟೋಬರ್ 18: ಮಹಾ ನವಮಿ / ದುರ್ಗಾಷ್ಟಮಿ ಪೂಜೆಗಳು ನಡೆಯಲಿವೆ.
ಅಕ್ಟೋಬರ್ 19: ಆಯುಧ ಪೂಜೆ ಸಂಭ್ರಮ.
ಅಕ್ಟೋಬರ್ 21: ದಸರಾದ ಪ್ರಮುಖ ಆಕರ್ಷಣೆಯಾದ ವಿಜಯದಶಮಿ ಅಥವಾ ಜಂಬೂ ಸವಾರಿ ನಡೆಯಲಿದೆ.

ಅಂದು ಮಧ್ಯಾಹ್ನ 4:10ಕ್ಕೆ ಶುಭ ‘ಮೀನಾ ಲಗ್ನ’ದಲ್ಲಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿ, ನಂತರ ಚಿನ್ನದ ಅಂಬಾರಿಯಲ್ಲಿ ವಿರಾಜಮಾನನಾಗಲಿರುವ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡಲಾಗುವುದು.

ಜುಲೈ 26ರಿಂದಲೇ ಗಜಪಯಣ ಆರಂಭ:
ದಸರಾ ಆನೆಗಳ ಆಗಮನ ಅಥವಾ ‘ಗಜಪಯಣ’ಕ್ಕೆ ಜುಲೈ 26 ರಂದು ಚಾಲನೆ ನೀಡಲು ನಿರ್ಧರಿಸಲಾಗಿದೆ. ಕಾಡಿನಿಂದ ನಾಡಿಗೆ ಬರುವ ಆನೆಗಳಿಗೆ ಸಾಂಪ್ರದಾಯಿಕ ಸ್ವಾಗತ ಕೋರುವ ಮೂಲಕ ದಸರಾ ಚಟುವಟಿಕೆಗಳು ಅಧಿಕೃತವಾಗಿ ಮೈಸೂರಿನಲ್ಲಿ ಕಳೆಗಟ್ಟಲಿವೆ.

 

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

10 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

13 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

13 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

13 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

13 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

14 hours ago