ಮೈಸೂರು : ಅನ್ಯ ಜಾತಿಯ ಯುವಕನನ್ನು ಪ್ರೀತಿಸಿದ ತಪ್ಪಿಗೆ ಅಪ್ರಾಪ್ತ ಮಗಳನ್ನು ತಂದೆ ತಾಯಿ ಸೇರಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ನಡೆದಿದೆ.
ಎರಡನೇ ಪಿಯು ವಿದ್ಯಾರ್ಥಿನಿ ಶಾಲಿನಿ (17) ಕೊಲೆಗೀಡಾದ ಬಾಲಕಿ. ಈಕೆ ಮೆಲ್ಲಹಳ್ಳಿಯ ಯುವಕ ಮಂಜು ಅನ್ನು ಪ್ರೀತಿಸುತ್ತಿದ್ದಳು. ಶಾಲಿನಿ ಮನೆಯಲ್ಲಿ ಪ್ರೀತಿಗೆ ವಿರೋಧವಿತ್ತು, ಈ ಹಿನ್ನಲೆ ಶಾಲಿನಿ ಮಂಜು ಅನ್ನು ಮದುವೆಯಾಗಲು ಮನೆ ಬಿಟ್ಟಿದ್ದಳು, ಆದರೆ ಇದೇ ವಿಚಾರ ಪೊಲೀಸ್ ಠಾಣೆ ಮೆಟ್ಟಲೇರಿತ್ತು. ಪೊಲೀಸರ ಮುಂದೆ ಶಾಲಿನಿ ಮನೆಗೆ ಹೋಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಳು. ಹೀಗಾಗಿ ಶಾಲಿನಿ ಬಾಲಮಂದಿರಕ್ಕೆ ಸೇರಿಕೊಂಡಿದ್ದಳು.
ಇತ್ತೀಚೆಗಷ್ಟೆ ಮಗಳನ್ನು ಪೋಷಕರಾದ ಸುರೇಶ್ ಹಾಗೂ ಬೇಬಿ ಮನೆಗೆ ಕರೆ ತಂದು ಮಗಳನ್ನು ಕೊಲೆ ಮಾಡಿದ್ದಾರೆ. ಶಾಲಿನಿ ಮೃತದೇಹ ಜಮೀನೊಂದರಲ್ಲಿ ಪತ್ತೆಯಾಗಿದೆ. ತಮಗೆ ಅವಮಾನ ಮಾಡಿದಕ್ಕೆ ಮಗಳನ್ನು ಕೊಲೆ ಮಾಡಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾರೆ. ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…