Featured

ಮೈಸೂರು : ಗುಂಬಜ್ ಮಾದರಿಯಲ್ಲಿ ಬಸ್ ತಂಗುದಾಣ ನಿರ್ಮಾಣ ಮಾಡುವಂತಿಲ್ಲ , ನಿರ್ಮಿಸಿದರೆ ಒಡೆದು ಹಾಕುವುದು ನಿಶ್ಚಿತ :  ಪ್ರತಾಪ್ ಸಿಂಹ – Vishwanews24

ಗುಂಬಜ್ ಮಾದರಿಯಲ್ಲಿ ಬಸ್ ತಂಗುದಾಣ ನಿರ್ಮಾಣ ಮಾಡುವಂತಿಲ್ಲ , ನಿರ್ಮಿಸಿದರೆ ಒಡೆದು ಹಾಕುವುದು ನಿಶ್ಚಿತ ..

ಪ್ರತಾಪ್ ಸಿಂಹ ಎಚ್ಚರಿಕೆ ಬೆನ್ನಲ್ಲೆ ಬದಲಾಯ್ತು ಬಸ್ ನಿಲ್ದಾಣದ ಶೆಲ್ಟರ್

ಮೈಸೂರು: ಗುಂಬಜ್ ಮಾದರಿಯಲ್ಲಿ ಬಸ್ ತಂಗುದಾಣ ನಿರ್ಮಾಣ ಮಾಡುವಂತಿಲ್ಲ. ಒಂದು ವೇಳೆ ನಿರ್ಮಿಸಿದರೆ ಒಡೆದು ಹಾಕುವುದು ನಿಶ್ಚಿತ ಎಂದು ಬಿಜೆಪಿ ಸಂಸದ ಪ್ರತಾಪ ಸಿಂಹ ಹೇಳಿದ್ದಾರೆ.

ನ. ೧೩ ಟಿಪ್ಪು ನಿಜ ಕನಸುಗಳು ನಾಟಕದ ವೇಳೆ ಸಂಸದ ಪ್ರತಾಪ್ ಸಿಂಹ ಮಾಡಿದ್ದ ಭಾಷಣ ವೈರಲ್ ಆಗಿದ್ದು,ಭಾಷಣದಲ್ಲಿ ಗುಂಬಜ್ ಮಾದರಿಯಲ್ಲಿ ಬಸ್​ ನಿಲ್ದಾಣ ನಿರ್ಮಿಸುವಂತಿಲ್ಲ ಎಂದು ಹೇಳಿದ್ದಾರೆ.

ಮೈಸೂರಿನ ಊಟಿ ರಸ್ತೆಯ ಬಸ್ ನಿಲ್ದಾಣದ ಮೇಲೆ ಗುಂಬಜ್‍ಗಳು ಇರುವುದನ್ನು ಗಮನಿಸಿದ್ದೇನೆ. ಮಧ್ಯದಲ್ಲಿ ದೊಡ್ಡ ಗುಂಬಜ್ ಅಕ್ಕ ಪಕ್ಕ ಚಿಕ್ಕ ಗುಂಬಜ್‍ಗಳಿದ್ರೆ ಅದು ಮಸೀದಿನೇ. ಕೆಆರ್ ಐಡಿಎಲ್ ಇಂಜಿನಿಯರ್‌ಗಳಿಗೆ ಹೇಳಿದ್ದೇನೆ. ಮೂರು, ನಾಲ್ಕು ದಿನ ಟೈಮ್ ಕೊಟ್ಟಿದ್ದೇನೆ. ಇಲ್ಲವಾದ್ರೆ ಜೆಸಿಬಿ ತಂದು ನಾನೇ ಒಡೆದು ಹಾಕುತ್ತೇನೆ ಎಂದು ತಿಳಿಸಿದರು.

 

ಬಸ್​ ತಂಗುದಾಣದ ಮೇಲೆ ಗುಂಬಜ್​​ ಇರುವುದು ಗಮನಿಸಿದ್ದು. ಅಂತಹ ಬಸ್​ ನಿಲ್ದಾಣದ ಗುಂಬಜ್ ತೆರವಿಗೆ ಹೇಳಿದ್ದೇನೆ. ಮಧ್ಯದಲ್ಲಿ ದೊಡ್ಡ ಗುಂಬಜ್ ಹಾಗೂ ಅಕ್ಕ ಪಕ್ಕ ಚಿಕ್ಕ ಗುಂಬಜ್ ಗಳಿದ್ರೆ ಅದು ಮಸೀದಿನೇ. ಕೆಆರ್ ಐಡಿಎಲ್ ಇಂಜಿನಿಯರ್ ಗಳಿಗೆ 3-4 ದಿನದಲ್ಲಿ ಗುಂಬಜ್​ ತೆರವುಗೊಳಿಸಲು ಸೂಚಿಸಿದ್ದೇನೆ. ಇಲ್ಲವಾದರೆ ಜೆಸಿಬಿ ತಂದು ನಾನೇ ಒಡೆದು ಹಾಕುತ್ತೇನೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

ಪ್ರತಾಪ್ ಸಿಂಹ ಎಚ್ಚರಿಕೆ ಬೆನ್ನಲ್ಲೆ ಬದಲಾಯ್ತು ಬಸ್ ನಿಲ್ದಾಣದ ಶೆಲ್ಟರ್

ಗುಂಬಜ್ ಮಾದರಿ ಬಸ್ ಶೆಲ್ಟರ್ ಒಡೆದು ಹಾಕುವ ಎಚ್ಚರಿಕೆ ನೀಡಿದ್ದ ಸಂಸದ ಪ್ರತಾಪಸಿಂಹ ವಿಡಿಯೋ ವೈರಲ್ ಆದ ಬೆನ್ನಲ್ಲೇ ಮೈಸೂರು ನಂಜನಗೂಡು ರಸ್ತೆಯಲ್ಲಿರುವ ಬಸ್ ಶೆಲ್ಟರ್ ಬದಲಾಗಿದೆ. ಇದೀಗ ಬಸ್ ಶೆಲ್ಟರ್ ಗುಂಬಜ್ ಮೇಲೆ ಕಳಶ ಪ್ರತಿಷ್ಠಾಪನೆ ಮಾಡಲಾಗಿದೆ. ಶಾಸಕ ಎಸ್​ಎ ರಾಮದಾಸ್ ಕ್ಷೇತ್ರ ವ್ಯಾಪ್ತಿಯಲ್ಲಿ ನಿರ್ಮಾಣವಾಗಿರುವ ಬಸ್​ ನಿಲ್ದಾಣದ ಶೆಲ್ಟರ್​ನಲ್ಲಿ ಮೂರು ಗುಂಬಜ್‌ಗಳ ಮೇಲೆ ಕಳಸ ಮಾದರಿಯ ಆಕೃತಿ ನಿರ್ಮಾಣ ಮಾಡಲಾಗಿದೆ.

 

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 day ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago