Featured

ಮೈಸೂರು ಗ್ಯಾಂಗ್ ರೇಪ್ ಪ್ರಕರಣ: ಬಾಲಾಪರಾಧಿ ಸೇರಿದಂತೆ ಐವರ ಬಂಧನ -Vishwanews24

ಮೈಸೂರು ಗ್ಯಾಂಗ್ ರೇಪ್ ಪ್ರಕರಣ: ಬಾಲಾಪರಾಧಿ ಸೇರಿದಂತೆ ಐವರ ಬಂಧನ -Vishwanews24

ಮೈಸೂರು: ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿ & ಐಜಿಪಿ ಪ್ರವೀಣ್ ಸೂದ್ ಸುದ್ದಿಗೋಷ್ಠಿ ನಡೆಸಿದ್ದು, ವಿದ್ಯಾರ್ಥಿನಿ ಹೆದರಿಸಿ 3 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ದರೋಡೆಗೆ ಪ್ರಯತ್ನಿಸಿ ನಂತರ ಅತ್ಯಾಚಾರ ನಡೆಸಿದ್ದರು, ಇದಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಿದ್ದು, ಕಾರ್ಮಿಕರಾಗಿರುವ ಇವರು ತಮಿಳುನಾಡಿನ ಮೂಲದವರು ಎಂದು ಮಾಹಿತಿ ನೀಡಿದ್ದಾರೆ. ಇದರಲ್ಲಿ ಒಬ್ಬ ಬಾಲಾಪರಾಧಿ ಇರುವ ಬಗ್ಗೆ ಪ್ರಾಥಮಿಕ ತನಿಖೆಯಲ್ಲಿ ಮಾಹಿತಿ ಲಭ್ಯವಾಗಿದೆ. ಆದರೆ, ಅದು ಹೆಚ್ಚಿನ ತನಿಖೆಯಿಂದಲೇ ಗೊತ್ತಾಗಬೇಕು ಎಂದಿದ್ದಾರೆ.

ಈ ಪ್ರಕರಣದಲ್ಲಿ 5 ಜನರನ್ನು ಬಂಧಿಸಲಾಗಿದೆ. ಎಲ್ಲರೂ ತಿರುಪುರ ಮೂಲದವರು. ಆಗಾಗ ಮೈಸೂರು ನಗರಕ್ಕೆ ಬರುತ್ತಿದ್ದರು. 7ನೇ ತರಗತಿ 8 ತರಗತಿ ಓದಿದ ಇವರೆಲ್ಲರೂ ಕಾರ್ಮಿಕರಾಗಿದ್ದಾರೆ. ಡ್ರೈವರ್, ಕಾರ್ಪೆಂಟರ್ ಸೇರಿದಂತೆ ಬೇರೆ ಬೇರೆ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಅದರಲ್ಲಿ ಒಬ್ಬ ಬಾಲಕ 17 ವರ್ಷದವನಿದ್ದಾನೆ ಎನ್ನುವುದು ಪ್ರಾಥಮಿಕ ಮಾಹಿತಿಯಲ್ಲಿ ಲಭ್ಯವಾಗಿದೆ. ಆದರೆ, ಅದು ಇನ್ನೂ ಖಚಿತವಾಗಬೇಕಿದೆ ಎಂದು ಹೇಳಿದ್ದಾರೆ.

ಇದರಲ್ಲಿ ಓರ್ವ ಬಾಲಾಪರಾಧಿ ಇದ್ದರೂ ಈ ಹಿಂದಿನ ಪ್ರಕರಣಗಳಂತೆ ಆಗುವುದಿಲ್ಲ. ಏಕೆಂದರೆ, ಬಾಲಕಾಯ್ದೆಯಲ್ಲೂ ಬದಲಾಗಿದೆ. ಗಂಭೀರ ಪ್ರಕರಣದಲ್ಲಿ 16 ವರ್ಷ ಆಗಿದ್ದರೆ ನ್ಯಾಯಾಲಯದಲ್ಲಿ ವಿಚಾರಣೆ ಆಗಲಿದೆ. 6 ಆರೋಪಿಗಳ ಪೈಕಿ ಓರ್ವ ತಲೆಮರೆಸಿಕೊಂಡಿದ್ದಾನೆ. ಇವರೆಲ್ಲರೂ ಕೆಲಸಕ್ಕೆ ಮೈಸೂರಿಗೆ ಬಂದಿದ್ದು, ವಾಪಸ್ಸು ಹೋಗುವಾಗ ಕುಡಿದು ಪಾರ್ಟಿ ಮಾಡುತ್ತಿದ್ದರು ಎಂದು ಗೊತ್ತಾಗಿದೆ. ಆರೋಪಿಗಳನ್ನು ಬಂಧಿಸಿದ ಇಡೀ ತಂಡಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ವೈಜ್ಞಾನಿಕ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಗಳ ಬಂಧನವಾಗಿದೆ. ಆರೋಪಿಗಳನ್ನು ಬಂಧಿಸಿದ ಪೊಲೀಸರನ್ನು ಶ್ಲಾಘಿಸುವೆ. ಪ್ರಕರಣ ಭೇದಿಸಿದ ಪೊಲೀಸರಿಗೆ 5 ಲಕ್ಷ ರೂ. ಬಹುಮಾನ ಘೋಷಿಸುತ್ತೇವೆ ಎಂದು ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

8 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

9 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

10 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

11 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

11 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

11 hours ago