ಮೈಸೂರು: ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿ & ಐಜಿಪಿ ಪ್ರವೀಣ್ ಸೂದ್ ಸುದ್ದಿಗೋಷ್ಠಿ ನಡೆಸಿದ್ದು, ವಿದ್ಯಾರ್ಥಿನಿ ಹೆದರಿಸಿ 3 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ದರೋಡೆಗೆ ಪ್ರಯತ್ನಿಸಿ ನಂತರ ಅತ್ಯಾಚಾರ ನಡೆಸಿದ್ದರು, ಇದಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಿದ್ದು, ಕಾರ್ಮಿಕರಾಗಿರುವ ಇವರು ತಮಿಳುನಾಡಿನ ಮೂಲದವರು ಎಂದು ಮಾಹಿತಿ ನೀಡಿದ್ದಾರೆ. ಇದರಲ್ಲಿ ಒಬ್ಬ ಬಾಲಾಪರಾಧಿ ಇರುವ ಬಗ್ಗೆ ಪ್ರಾಥಮಿಕ ತನಿಖೆಯಲ್ಲಿ ಮಾಹಿತಿ ಲಭ್ಯವಾಗಿದೆ. ಆದರೆ, ಅದು ಹೆಚ್ಚಿನ ತನಿಖೆಯಿಂದಲೇ ಗೊತ್ತಾಗಬೇಕು ಎಂದಿದ್ದಾರೆ.
ಈ ಪ್ರಕರಣದಲ್ಲಿ 5 ಜನರನ್ನು ಬಂಧಿಸಲಾಗಿದೆ. ಎಲ್ಲರೂ ತಿರುಪುರ ಮೂಲದವರು. ಆಗಾಗ ಮೈಸೂರು ನಗರಕ್ಕೆ ಬರುತ್ತಿದ್ದರು. 7ನೇ ತರಗತಿ 8 ತರಗತಿ ಓದಿದ ಇವರೆಲ್ಲರೂ ಕಾರ್ಮಿಕರಾಗಿದ್ದಾರೆ. ಡ್ರೈವರ್, ಕಾರ್ಪೆಂಟರ್ ಸೇರಿದಂತೆ ಬೇರೆ ಬೇರೆ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಅದರಲ್ಲಿ ಒಬ್ಬ ಬಾಲಕ 17 ವರ್ಷದವನಿದ್ದಾನೆ ಎನ್ನುವುದು ಪ್ರಾಥಮಿಕ ಮಾಹಿತಿಯಲ್ಲಿ ಲಭ್ಯವಾಗಿದೆ. ಆದರೆ, ಅದು ಇನ್ನೂ ಖಚಿತವಾಗಬೇಕಿದೆ ಎಂದು ಹೇಳಿದ್ದಾರೆ.
ಇದರಲ್ಲಿ ಓರ್ವ ಬಾಲಾಪರಾಧಿ ಇದ್ದರೂ ಈ ಹಿಂದಿನ ಪ್ರಕರಣಗಳಂತೆ ಆಗುವುದಿಲ್ಲ. ಏಕೆಂದರೆ, ಬಾಲಕಾಯ್ದೆಯಲ್ಲೂ ಬದಲಾಗಿದೆ. ಗಂಭೀರ ಪ್ರಕರಣದಲ್ಲಿ 16 ವರ್ಷ ಆಗಿದ್ದರೆ ನ್ಯಾಯಾಲಯದಲ್ಲಿ ವಿಚಾರಣೆ ಆಗಲಿದೆ. 6 ಆರೋಪಿಗಳ ಪೈಕಿ ಓರ್ವ ತಲೆಮರೆಸಿಕೊಂಡಿದ್ದಾನೆ. ಇವರೆಲ್ಲರೂ ಕೆಲಸಕ್ಕೆ ಮೈಸೂರಿಗೆ ಬಂದಿದ್ದು, ವಾಪಸ್ಸು ಹೋಗುವಾಗ ಕುಡಿದು ಪಾರ್ಟಿ ಮಾಡುತ್ತಿದ್ದರು ಎಂದು ಗೊತ್ತಾಗಿದೆ. ಆರೋಪಿಗಳನ್ನು ಬಂಧಿಸಿದ ಇಡೀ ತಂಡಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ವೈಜ್ಞಾನಿಕ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಗಳ ಬಂಧನವಾಗಿದೆ. ಆರೋಪಿಗಳನ್ನು ಬಂಧಿಸಿದ ಪೊಲೀಸರನ್ನು ಶ್ಲಾಘಿಸುವೆ. ಪ್ರಕರಣ ಭೇದಿಸಿದ ಪೊಲೀಸರಿಗೆ 5 ಲಕ್ಷ ರೂ. ಬಹುಮಾನ ಘೋಷಿಸುತ್ತೇವೆ ಎಂದು ತಿಳಿಸಿದ್ದಾರೆ.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…